ಬೆಂಗಳೂರು ಸೆ 2 : ಕೋರಮಂಗಲ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಇಂದ್ರಜೀತ್ ಲಂಕೇಶ ಸ್ಪೋಟಕ ಹೇಳಿಕೆ ನೀಡಿದ್ದು ಈ ಪ್ರಕರಣವು ಮತ್ತೆ ಹೊಸ ತಿರುವು ಪಡೆದುಕೊಂಡಿದೆ.
ಈ ಪ್ರಕರಣದ ಬಗ್ಗೆ ಹೇಳಿಕೆ ನೀಡಿರುವ ಇಂದ್ರಜೀತ್ ಲಂಕೇಶ್, ಕೇವಲ ಮದ್ಯ ಸೇವಿಸಿದ್ದರೆ ಈ ರೀತಿ ಆಗುತ್ತಿರಲಿಲ್ಲ ಮದ್ಯದ ಜೊತೆ ಡ್ರಗ್ಸ್ ಕೂಡ ಸೇವಿಸಿರುವ ಸಾಧ್ಯತೆಯಿದೆ ಈ ಬಗ್ಗೆ ಪೊಲೀಸರು ತನಿಖೆ ನಡೆಸಬೇಕೆಂದು ಇಂದ್ರಜಿತ್ ಹೇಳಿದ್ದಾರೆ.
ಘಟನೆ ವಿವಿರ : ಹೊಸುರು ಶಾಸಕ ಪುತ್ರನ ಕಾರೊಂದು ಫುಟ್ಪಾತ್ ಮೇಲಿನ ಕಂಬಕ್ಕೆ ಡಿಕ್ಕಿಯಾಗಿ 7 ಜನರ ದುರ್ಮರಣಕ್ಕೀಡಾಗಿರುವ ಭೀಕರ ಅಪಘಾತ ಬೆಂಗಳೂರಿನ ಕೋರಮಂಗಲದ ಮಂಗಳ ಕಲ್ಯಾಣ ಮಂಟಪದ ಬಳಿ ಈ ಭೀಕರ ದುರಂತ ನಡೆದಿತ್ತು. ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಐಷಾರಾಮಿ ಕಾರು ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ಮೂವರು ಮಹಿಳೆಯರು ನಾಲ್ಕು ಪುರುಷರು ಸೇರಿ ಒಟ್ಟು ಏಳು ಮಂದಿ ಸಾವಿಗೀಡಾಗಿದ್ದರು