• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಇಂದು ರಾಜ್ಯ ಸಂಪುಟ ವಿಸ್ತರಣೆ; ಏಳು ನೂತನ ಸಚಿವರ ಸೇರ್ಪಡೆ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ
ಇಂದು ರಾಜ್ಯ ಸಂಪುಟ ವಿಸ್ತರಣೆ; ಏಳು ನೂತನ ಸಚಿವರ ಸೇರ್ಪಡೆ
0
SHARES
0
VIEWS
Share on FacebookShare on Twitter

ಬೆಂಗಳೂರು, ಜ. 13: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಯಾರಿರಲಿದ್ದಾರೆ, ಯಾರು ನೂತನವಾಗಿ ಸಂಪುಟ ಸಭೆಗೆ ಸೇರ್ಪಡೆಯಾಗಲಿದ್ದಾರೆ ಎಂಬುದರ ಬಗ್ಗೆ ರಾಜ್ಯದ ಜನತೆಯಲ್ಲಿ ಕುತೂಹಲ ಮೂಡಿಸಿದ್ದಂತು ನಿಜ. ಈ ಕುತೂಹಲಕ್ಕೆ ಇಂದು ತೆರೆ ಬಿಳಲಿದೆ. ಇಂದು ಮಧ್ಯಾಹ್ನ 3:50ಕ್ಕೆ ನೂತನ ಸಚಿವರ ಪದಗ್ರಹಣ ಸಮಾರಂಭ ನಡೆಯುವುದು ನಿಶ್ಚಿತವಾಗಿದೆ. ನೂತನ ಸಚಿವರಾರು ಎಂಬುದು ಈಗಾಗಲೇ ಬೆಳಗ್ಗೆ 11 ಗಂಟೆಯವರೆಗೂ ಸಸ್ಪೆನ್ಸ್ ಆಗಿತ್ತು. ಸ್ವತಃ ಯಡಿಯೂರಪ್ಪ ಅವರೇ ಮಾಧ್ಯಮಗಳೆದರು ಏಳು ಮಂದಿಯ ಹೆಸರನ್ನು ಪ್ರಕಟ ಮಾಡಿದ್ದಾರೆ. ಎಂಟಿಬಿ ನಾಗರಾಜ್, ಆರ್ ಆಂಕರ್, ಸಿ.ಪಿ. ಯೋಗೇಶ್ವರ್, ಅರವಿಂದ್ ಲಿಂಬಾವಳಿ, ಎಸ್ ಅಂಗಾರ, ಉಮೇಶ್ ಕತ್ತಿ, ಮುರುಗೇಶ್ ಆರ್ ನಿರಾಣಿ ಅವರಿಗೆ ಮಂತ್ರಿಭಾಗ್ಯ ಸಿಕ್ಕಿದೆ. ಇವರೆಲ್ಲರಿಗೂ ಯಡಿಯೂರಪ್ಪ ಅವರೇ ಖುದ್ದಾಗಿ ಫೋನ್ ಮಾಡಿ ಪದಗ್ರಹಣ ಕಾರ್ಯಕ್ರಮಕ್ಕೆ ಬರಬೇಕೆಂದು ಆಹ್ವಾನ ನೀಡಿದ್ದರು. ಈಗ ಅವರೇ ಅದನ್ನ ಅಧಿಕೃತವಾಗಿ ಪ್ರಕಟ ಮಾಡಿದ್ದಾರೆ.

ಸದ್ಯ ಯಡಿಯೂರಪ್ಪ ಅವರ ಸರ್ಕಾರದಲ್ಲಿ ಖಾಲಿ ಉಳಿದಿರುವುದು ಏಳು ಸ್ಥಾನ ಮಾತ್ರ. ಅಬಕಾರಿ ಸಚಿವ ಆರ್ ನಾಗೇಶ್ ಅವರನ್ನ ಸಂಪುಟದಿಂದ ಕೈಬಿಡಲು ನಿರ್ಧರಿಸಲಾಗಿದೆ. ಅವರು ರಾಜೀನಾಮೆ ನೀಡಿದರೆ ಎಂಟು ಖಾತೆಗಳು ಖಾಲಿ ಉಳಿಯುತ್ತವೆ. ಈಗ ಏಳು ಮಂದಿಯನ್ನ ಸಂಪುಟಕ್ಕೆ ಸೇರ್ಪಡೆ ಮಾಡಲಾಗುತ್ತಿದೆ. ಇನ್ನೊಂದು ಖಾತೆ ಖಾಲಿ ಉಳಿಯಲಿದೆ.

ಎಂಟಿಬಿ ನಾಗರಾಜ್, ಆರ್. ಶಂಕರ್, ಸಿ.ಪಿ ಯೋಗೇಶ್ವರ್, ಅರವಿಂದ ಲಿಂಬಾವಳಿ, ಎಸ್. ಅಂಗಾರ, ಉಮೇಶ್ ಕತ್ತಿ, ಮುರುಗೇಶ್ ಆರ್.ನಿ ರಾಣಿ ಸಿಎಂ ಸಚಿವ ಸಂಪುಟದಲ್ಲಿ ಸೇರಲಿದ್ದಾಋಎ ಎಂದು ಖುದ್ದು ಸಿಎಂ ಅಧಿಕೃತವಾಗಿ ಘೋಷಿಸಿದ್ದಾರೆ.  

ಮಂತ್ರಿಸ್ಥಾನದ ನಿರೀಕ್ಷೆಯಲ್ಲಿದ್ದ ಮುನಿರತ್ನಗೆ ನಿರಾಸೆ ಉಂಟಾಗಿದೆ. ಮುನಿರತ್ನ ಕೊನೆಯ ಕ್ಷಣದವರೆಗೂ ಪ್ರಯತ್ನ ಮುಂದುವರೆಸಿದರಾದರೂ, ಪ್ರಯತ್ನ ವಿಫಲವಾಗಿದೆ. ಮೈತ್ರಿಪಾಳಯದಿಂದ ಬಂದ 17 ಮಂದಿಯಲ್ಲಿ ಮುಂಚೂಣಿಯಲ್ಲಿದ್ದವರಲ್ಲಿ ಮುನಿರತ್ನ ಕೂಡ ಒಬ್ಬರು. ಆದರೆ, ಎಸ್.ಟಿ. ಸೋಮಶೇಖರ್, ಎಂಟಿಬಿ ನಾಗರಾಜ್, ಬೈರತಿ ಬಸವರಾಜ್ ಅವರೊಂದಿಗೆ ಇದ್ದ ಮುನಿರತ್ನ ಮಾರ್ಗಮಧ್ಯೆ ಏಕಾಂಗಿಯಾಗಿ ಹೋದರು. ತಮ್ಮ ಸ್ನೇಹಿತರ ಬಳಗ ಬಿಟ್ಟು ತಾವೊಬ್ಬರೇ ಲಾಬಿಗೆ ಯತ್ನಿಸಿದ್ದರು. ಹೀಗಾಗಿ ತಮ್ಮ ಗೆಳೆಯರ ಬಳಗದಿಂದ ಈವರೆಗೆ ಮುನಿರತ್ನಗೆ ಯಾವ ನೆರವೂ ಆಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಮುನಿರತ್ನ ಅವರು ಆರ್ ಅಶೋಕ್, ಬಸವರಾಜ ಬೊಮ್ಮಾಯಿ ಮೊದಲಾದ ಹಿರಿಯ ಬಿಜೆಪಿ ನಾಯಕರ ಮೂಲಕ ಮಂತ್ರಿಸ್ಥಾನಕ್ಕಾಗಿ ಕಸರತ್ತು ನಡೆಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪನವರ ಆಪ್ತ ವಲಯದಲ್ಲಿರುವ ಹಾಗೂ ರಾಜಕೀಯ ಕಾರ್ಯದರ್ಶಿಯಾಗಿರುವ ಎಂ.ಪಿ. ರೇಣುಕಾಚಾರ್ಯ ಕೂಡ ಮಂತ್ರಿಸ್ಥಾನಕ್ಕೆ ಒಳಗಿಂದೊಳಗೆ ಪ್ರಯತ್ನ ಮಾಡುತ್ತಿದ್ದಾರೆ. ಈ ಹಗ್ಗ-ಜಗ್ಗಾಟದ ಒತ್ತಡದಲ್ಲಿ ತಮ್ಮ ಆಪ್ತನ ಮಾತು ಕೇಳಿಸಿಕೊಳ್ಳುವ ಪರಿಸ್ಥಿತಿಯಲ್ಲಿ ಯಡಿಯೂರಪ್ಪ ಅವರಿಲ್ಲ. ಆದರೂ ರೇಣುಕಾಚಾರ್ಯ ತಮ್ಮ ಪ್ರಯತ್ನ ಬಿಡದೆ ನೇರ ಅರುಣ್ ಸಿಂಗ್ ಬಳಿಯೇ ಲಾಬಿ ಮಾಡಲಿದ್ದಾರೆ ಎಂಬ ಮಾತು ದಟ್ಟವಾಗಿ ಹಬ್ಬುತ್ತಿದೆ.

Related News

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌
ರಾಜಕೀಯ

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌

March 30, 2023
300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್
ರಾಜಕೀಯ

300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್

March 30, 2023
ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ;   ಸುಳಿವು ನೀಡಿದ ಯಡಿಯೂರಪ್ಪ..!
ರಾಜಕೀಯ

ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ; ಸುಳಿವು ನೀಡಿದ ಯಡಿಯೂರಪ್ಪ..!

March 30, 2023
ಹೆಬ್ಬಾಳದಲ್ಲಿ ಗದ್ದುಗೆ ಗುದ್ದಾಟ! ದಿಗ್ಗಜರ ನಡುವಿನ ಗುದ್ದಾಟದಲ್ಲಿ ಯಾರಿಗೆ ಸಿಗುತ್ತೆ ಗದ್ದುಗೆ?
ರಾಜಕೀಯ

ಹೆಬ್ಬಾಳದಲ್ಲಿ ಗದ್ದುಗೆ ಗುದ್ದಾಟ! ದಿಗ್ಗಜರ ನಡುವಿನ ಗುದ್ದಾಟದಲ್ಲಿ ಯಾರಿಗೆ ಸಿಗುತ್ತೆ ಗದ್ದುಗೆ?

March 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.