Bengaluru: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಅವರು ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ (2018-19ರಲ್ಲಿ) ಹಣಕಾಸು ಅವ್ಯವಹಾರ ಹಾಗೂ ಸುಳ್ಳು ಮಾಹಿತಿ ನೀಡಿದ ಆರೋಪದ ಸಂಬಂಧ ಅವರ ವಿರುದ್ಧ ತನಿಖೆ ನಡೆಸುವಂತೆ ಕರ್ನಾಟಕ (Karnataka) ಸರ್ಕಾರವು ಆದೇಶಿಸಿದೆ.

ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ (H D Kumaraswamy) ಅವರ ಆಪ್ತ ಜೆಡಿಎಸ್ ಶಾಸಕ ಸಾರಾ ಮಹೇಶ್ ಅವರು ರೋಹಿಣಿ ವಿರುದ್ಧ ಆರ್ಥಿಕ ಅವ್ಯವಹಾರದ ಸರಣಿ ಆರೋಪ ಮಾಡಿದ್ದರು. ಅಷ್ಟೇ ಅಲ್ಲದೆ ಜೂನ್ 9 ರಂದು ತನಿಖೆಗೆ ಆದೇಶಿಸಲಾಗಿತ್ತು. ಸದ್ಯ ಇದರ ಪ್ರತಿ ವೈರಲ್ ಮೂಲಕ ಇಲಾಖಾ ತನಿಖೆಗೆ ಆದೇಶಿಸಿರುವುದು ಬೆಳಕಿಗೆ ಬಂದಿದೆ.
ಡಿಪಿಎಆರ್ (DPAR) ಅಧೀನ ಕಾರ್ಯದರ್ಶಿ ಜೇಮ್ಸ್ ತಾರಕನ್ ಹೊರಡಿಸಿರುವ ಆದೇಶದ ಪ್ರಕಾರ ಕೇಂದ್ರ ನಿಯೋಜನೆಯಲ್ಲಿರುವ ಹಿರಿಯ ಕರ್ನಾಟಕ-ಕೇಡರ್ ಐಎಎಸ್ (IAS) ಅಧಿಕಾರಿ ಯೋಗೇಂದ್ರ ತ್ರಿಪಾಠಿ (Yogendra Tripaati) ಅವರು ತನಿಖೆಯ ನೇತೃತ್ವ ವಹಿಸಲಿದ್ದಾರೆ. ಇನ್ನು ಸಿಂಧೂರಿ ವಿರುದ್ಧ ತನಿಖೆಗೆ ಆದೇಶಿಸಿರುವುದು ಕಳೆದ ಮೂರು ವರ್ಷಗಳಲ್ಲಿಇದು ಮೂರನೇ ಬಾರಿಯಾಗಿದ್ದು, ಜೆಡಿಎಸ್ ಶಾಸಕ ಹಾಗೂ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಅವರ ಆಪ್ತರಾಗಿದ್ದ ಎಸ್ಆರ್ ಮಹೇಶ್ (SR Mahesh) ಅವರು ರೋಹಿಣಿ ವಿರುದ್ಧ ಆರ್ಥಿಕ ಅವ್ಯವಹಾರದ ಸರಣಿ ಆರೋಪ ಮಾಡಿದ್ದರು.
ಎಸ್ಆರ್ ಮಹೇಶ್ ಅವರು ಸರ್ಕಾರದ ಸರಕುಗಳ ಭಾಗವಾಗಿ 52 ರೂ.ಗೆ ಕಳಪೆ ಗುಣಮಟ್ಟದ ಚೀಲಗಳನ್ನು ಖರೀದಿಸಿದ್ದಾರೆ ಎಂದು ಆರೋಪಿಸಿದ್ದರು. ಅಲ್ಲದೆ ಇದು ಮಾರುಕಟ್ಟೆಯಲ್ಲಿ 10-13 ರೂ.ಗೆ ಲಭ್ಯವಿದೆ ಎಂದು ಹೇಳಿದ್ದರು ಹಾಗೂ ಅವರು ತಮ್ಮ ಅಧಿಕೃತ ನಿವಾಸವನ್ನು ಅಕ್ರಮವಾಗಿ ನವೀಕರಿಸಿದ್ದಾರೆ ಮತ್ತು ಈಜುಕೊಳ ಮತ್ತು ಜಿಮ್ ಅನ್ನು ನಿರ್ಮಿಸಿದ್ದಾರೆ ಎಂದು ಆರೋಪಿಸಿದ್ದರು.
ಈ ಆರೋಪಗಳ ಮೇಲೆ ರೋಹಿಣಿ ಅವರನ್ನು ಆರಂಭದಲ್ಲಿ ಮುಜರಾಯಿ ಇಲಾಖೆಗೆ ವರ್ಗಾವಣೆ ಮಾಡಲಾಗಿದ್ದು, ಕಳೆದ ವರ್ಷ ಅವರ ವಿರುದ್ಧ ತನಿಖೆಗೆ ಆದೇಶಿಸಿದ ನಂತರ ಯಾವುದೇ ಹುದ್ದೆಯನ್ನು ನಿಗದಿ ಮಾಡದೆ ಬಿಡಲಾಗಿದೆ.
ಭವ್ಯಶ್ರೀ ಆರ್.ಜೆ