• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Sports

IPL Final: ಪಟಾಕಿ, ಬೈಕ್ ರ್ಯಾಲಿ, ರಸ್ತೆ ತಡೆ ಸೇರಿದಂತೆ ಅಶಾಂತಿಗೆ ಕಾರಣವಾಗುವ ಚಟುವಟಿಕೆಗಳಿಗೆ ನಿಷೇಧ

Teju Srinivas by Teju Srinivas
in Sports, ಪ್ರಮುಖ ಸುದ್ದಿ, ರಾಜ್ಯ
IPL Final: ಪಟಾಕಿ, ಬೈಕ್ ರ್ಯಾಲಿ, ರಸ್ತೆ ತಡೆ ಸೇರಿದಂತೆ ಅಶಾಂತಿಗೆ ಕಾರಣವಾಗುವ ಚಟುವಟಿಕೆಗಳಿಗೆ ನಿಷೇಧ
0
SHARES
17
VIEWS
Share on FacebookShare on Twitter

ಮೇ 31ರ ಐಪಿಎಲ್ ಫೈನಲ್ ಹಿನ್ನೆಲೆ; ಸಾರ್ವಜನಿಕ ಸುರಕ್ಷತೆಗೆ ಬೆಂಗಳೂರು ಪೊಲೀಸರಿಂದ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರಲ್ಲಿ ಸಂಭ್ರಮಾಚರಣೆಗೆ ಬ್ರೇಕ್‌

ಪಟಾಕಿ ಸಿಡಿಸುವಂತಿಲ್ಲ, ರಸ್ತೆಗಳನ್ನು ಬ್ಲಾಕ್‌ ಮಾಡುವಂತಿಲ್ಲ; ಪೊಲೀಸರಿಂದ ಟಫ್‌ ರೂಲ್ಸ್‌

Bengaluru : ಟಾಟಾ ಐಪಿಎಲ್ 2026ರ ಫೈನಲ್ ಪಂದ್ಯವು (IPL celebration ban) ಮೇ 31ರಂದು ನಡೆಯಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಫೈನಲ್‌ಗೆ ಪ್ರವೇಶಿಸಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಭಾರೀ ಸಂಭ್ರಮಾಚರಣೆಯ ಸಾಧ್ಯತೆ ಇದೆ.

ಈ ಹಿನ್ನೆಲೆ ಸಾರ್ವಜನಿಕ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಬೆಂಗಳೂರು ನಗರ ಪೊಲೀಸರು ವಿಶೇಷ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ.

ಪಂದ್ಯ ಮುಗಿದ ಬಳಿಕ ಅಭಿಮಾನಿಗಳು ಜವಾಬ್ದಾರಿಯುತವಾಗಿ ವರ್ತಿಸಬೇಕು ಹಾಗೂ ಯಾವುದೇ ರೀತಿಯ ಅಶಾಂತಿಗೆ ಕಾರಣವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.

ಆರ್‌ಸಿಬಿ ತಂಡದ ಯಶಸ್ಸನ್ನು ಸಂಭ್ರಮಿಸುವ ಉತ್ಸಾಹದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ನಿಯಮ ಉಲ್ಲಂಘನೆ ಆಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ರಸ್ತೆಗಳಲ್ಲಿ ಗುಂಪುಗೂಡಿ ಕೂಗಾಟ ನಡೆಸುವುದು, ಪಟಾಕಿ ಸಿಡಿಸುವುದು, ಸಾರ್ವಜನಿಕರಿಗೆ ತೊಂದರೆ (IPL celebration ban) ಉಂಟುಮಾಡುವ ರೀತಿಯಲ್ಲಿ ಆಚರಣೆ ಮಾಡುವುದು ಹಾಗೂ ಯಾವುದೇ ರೀತಿಯ ಗಲಾಟೆ ಅಥವಾ ಜಗಳಗಳಲ್ಲಿ ತೊಡಗುವುದು ಕಾನೂನುಬಾಹಿರ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಶಾಂತಿ ಮತ್ತು ಸುರಕ್ಷತೆಯನ್ನು ಕಾಪಾಡುವ ಹೊಣೆ ಪ್ರತಿಯೊಬ್ಬ ನಾಗರಿಕನ ಮೇಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ವೇಳೆ, ಪಂದ್ಯ ವೀಕ್ಷಣೆಗೆ ಸಂಬಂಧಿಸಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಎಲ್‌ಇಡಿ ಪರದೆಗಳನ್ನು ಅಳವಡಿಸುವವರಿಗೂ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಸಂಬಂಧಪಟ್ಟ ಅಧಿಕಾರಿಗಳ ಪೂರ್ವಾನುಮತಿ ಇಲ್ಲದೆ ಯಾವುದೇ ರಸ್ತೆ ಅಥವಾ ಸಾರ್ವಜನಿಕ ಪ್ರದೇಶದಲ್ಲಿ ದೊಡ್ಡ ಪರದೆಗಳನ್ನು ಸ್ಥಾಪಿಸಬಾರದು ಎಂದು ಹೇಳಲಾಗಿದೆ.

ಮಾಲ್‌ಗಳು, ಪಬ್‌ಗಳು ಹಾಗೂ ಇತರ ವಾಣಿಜ್ಯ ಸಂಸ್ಥೆಗಳು ತಮ್ಮ ಆವರಣದ ಹೊರಭಾಗದಲ್ಲಿ ಸಾರ್ವಜನಿಕರಿಗೆ ಕಾಣುವಂತೆ ಪರದೆಗಳನ್ನು ಅಳವಡಿಸುವುದಕ್ಕೂ ನಿರ್ಬಂಧ ವಿಧಿಸಲಾಗಿದೆ. ಜನಸಂದಣಿ ಹೆಚ್ಚಾಗುವ ಪ್ರದೇಶಗಳಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಹಾಗೂ ಶಿಸ್ತನ್ನು ಕಾಪಾಡುವಂತೆ ಸೂಚಿಸಲಾಗಿದೆ.

ಸಂಚಾರ ಸುರಕ್ಷತೆಯ ದೃಷ್ಟಿಯಿಂದ ಬೈಕ್ ರ್ಯಾಲಿಗಳು, ಅತಿ ವೇಗದ ವಾಹನ ಚಾಲನೆ, ಅಪಾಯಕಾರಿ ಸಾಹಸ ಪ್ರದರ್ಶನಗಳು, ಅನಗತ್ಯ ಹಾರ್ನ್ ಬಳಕೆ ಹಾಗೂ ರಸ್ತೆ ತಡೆ ಮಾಡುವಂತಹ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡಿ ಗೊಂದಲ ಸೃಷ್ಟಿಸುವುದು, ಅಸಭ್ಯವಾಗಿ ವರ್ತಿಸುವುದು ಅಥವಾ ಇತರರಿಗೆ ತೊಂದರೆ ಉಂಟುಮಾಡುವ ಕ್ರಮಗಳಿಗೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ.

ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್‌ಗಳು, ದ್ವೇಷ ಹರಡುವ ಸಂದೇಶಗಳು ಅಥವಾ ಸುಳ್ಳು ವದಂತಿಗಳನ್ನು ಹಂಚಿಕೊಳ್ಳದಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.

ಅಹಮದಾಬಾದ್‌ನ ಸುಮಾರು 1.30 ಲಕ್ಷಕ್ಕೂ ಅಧಿಕ ಪ್ರೇಕ್ಷಕರ ಸಾಮರ್ಥ್ಯ ಹೊಂದಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಈ ಬಾರಿಯ ಐಪಿಎಲ್ ಫೈನಲ್ ಪಂದ್ಯ ನಡೆಯಲಿದೆ.

ಕಳೆದ ವರ್ಷ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ವಿಜಯೋತ್ಸವದ ವೇಳೆ ಸಂಭವಿಸಿದ್ದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು.

ಆ ಘಟನೆ ಮರುಕಳಿಸದಂತೆ ಹಾಗೂ ಅಭಿಮಾನಿಗಳ ಸುರಕ್ಷತೆಯನ್ನು ಖಚಿತಪಡಿಸುವ ಉದ್ದೇಶದಿಂದಲೇ ಈ ಬಾರಿ ಮುಂಚಿತವಾಗಿ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಜಾರಿಗೆ ತರಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ರೀಡೆಯ ಸಂಭ್ರಮವನ್ನು ಜವಾಬ್ದಾರಿಯುತವಾಗಿ ಆಚರಿಸುವ ಮೂಲಕ ನಗರದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರು ಸಹಕರಿಸಬೇಕು ಎಂದು ಬೆಂಗಳೂರು ನಗರ ಪೊಲೀಸರು ಮನವಿ ಮಾಡಿದ್ದಾರೆ.

ಇದನ್ನು ಓದಿ : https://vijayatimes.com/japan-bans-indian-mangoes/

Tags: celebrationCricketIPLmatchNew rules

Related News

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಮೂವರು ಕುಕಿ ಗ್ರಾಮಸ್ಥರ ಹತ್ಯೆ, ಏಳು ಮನೆಗಳಿಗೆ ಬೆಂಕಿ
ದೇಶ-ವಿದೇಶ

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಮೂವರು ಕುಕಿ ಗ್ರಾಮಸ್ಥರ ಹತ್ಯೆ, ಏಳು ಮನೆಗಳಿಗೆ ಬೆಂಕಿ

June 5, 2026
ಬಿಸಿಲಿನ ಬೇಗೆಗೆ ಬ್ರೇಕ್: ಟ್ರಾಫಿಕ್ ಪೊಲೀಸರಿಗೆ ಎಸಿ ಹೆಲ್ಮೆಟ್
ಪ್ರಮುಖ ಸುದ್ದಿ

ಬಿಸಿಲಿನ ಬೇಗೆಗೆ ಬ್ರೇಕ್: ಟ್ರಾಫಿಕ್ ಪೊಲೀಸರಿಗೆ ಎಸಿ ಹೆಲ್ಮೆಟ್

June 5, 2026
ಭಾರತ್ ಪೇ ಬಳಕೆದಾರರಿಗೆ ಬಂಪರ್ ಆಫರ್: ಬ್ಯಾಂಕ್ ಖಾತೆಯಲ್ಲಿ ಹಣವಿಲ್ಲದಿದ್ದರೂ 45 ದಿನಗಳ ಬಡ್ಡಿರಹಿತ ಕ್ರೆಡಿಟ್ ಸೌಲಭ್ಯ
ಪ್ರಮುಖ ಸುದ್ದಿ

ಭಾರತ್ ಪೇ ಬಳಕೆದಾರರಿಗೆ ಬಂಪರ್ ಆಫರ್: ಬ್ಯಾಂಕ್ ಖಾತೆಯಲ್ಲಿ ಹಣವಿಲ್ಲದಿದ್ದರೂ 45 ದಿನಗಳ ಬಡ್ಡಿರಹಿತ ಕ್ರೆಡಿಟ್ ಸೌಲಭ್ಯ

June 5, 2026
ಡಿ.ಕೆ. ಶಿವಕುಮಾರ್ ಸರ್ಕಾರಕ್ಕೆ ಆರಂಭದಲ್ಲೇ ಆಘಾತ: ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ
ಪ್ರಮುಖ ಸುದ್ದಿ

ಡಿ.ಕೆ. ಶಿವಕುಮಾರ್ ಸರ್ಕಾರಕ್ಕೆ ಆರಂಭದಲ್ಲೇ ಆಘಾತ: ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ

June 5, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.