• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಧಾರವಾಡ ಪಿಡಿಒ ನೇಮಕಾತಿ ಪರೀಕ್ಷೆಯಲ್ಲೂ ಅಕ್ರಮ: ಸೀಲ್ ಓಪನ್ ಆಗಿರುವ ಪ್ರಶ್ನೆಪತ್ರಿಕೆ ಫೋಟೊ ಎಲ್ಲೆಡೆ ವೈರಲ್

Bhavya by Bhavya
in Vijaya Time, ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ರಾಜ್ಯ, ವಿಜಯ ಟೈಮ್ಸ್‌, ವಿಶೇಷ ಸುದ್ದಿ, ವೈರಲ್ ಸುದ್ದಿ
ಧಾರವಾಡ ಪಿಡಿಒ ನೇಮಕಾತಿ ಪರೀಕ್ಷೆಯಲ್ಲೂ ಅಕ್ರಮ: ಸೀಲ್ ಓಪನ್ ಆಗಿರುವ ಪ್ರಶ್ನೆಪತ್ರಿಕೆ ಫೋಟೊ ಎಲ್ಲೆಡೆ ವೈರಲ್
0
SHARES
17
VIEWS
Share on FacebookShare on Twitter

Dharwad: ತುಮಕೂರು ಜಿಲ್ಲೆಯ ಪಿಡಿಓ (PDO) ಅಕ್ರಮದ ಬಿಸಿ ಆರುವ ಮುನ್ನವೇ ಧಾರವಾಡದಲ್ಲಿ (Dharwad) ಪಿಡಿಒ ನೇಮಕಾತಿಗೆ ಸಂಬಂಧಿಸಿ ಡಿಸೆಂಬರ್ 8ರಂದು ನಡೆದಿದ್ದ ಪರೀಕ್ಷೆಯಲ್ಲೂ ಅಕ್ರಮ (Illegal) ನಡೆದಿರುವ ಬಗ್ಗೆ ಆರೋಪಗಳು ಕೇಳಿಬಂದಿವೆ. ಪ್ರಶ್ನೆ ಪತ್ರಿಕೆ (Question paper) ಸೀಲ್ ಓಪನ್ (Open the seal) ಮಾಡಿರುವ ಫೋಟೋ ಈಗ ಸಾಮಾಜಿಕ ಜಾಲತಾಣಗಳಲ್ಲಿ (Social network) ವೈರಲ್ ಆಗಿದೆ. ತಪ್ಪಿತಸ್ಥರನ್ನು ಶಿಕ್ಷಿಸಿ ಮರುಪರೀಕ್ಷೆಗೆ ಆದೇಶ ನೀಡಬೇಕೆಂಬ ಆಗ್ರಹವೂ ವ್ಯಕ್ತವಾಗಿದೆ. ಇದರೊಂದಿಗೆ, ಈ ಸಲವೂ ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಕೆಪಿಎಸ್‌ಸಿ (KPSC) ವಿಫಲವಾಯ್ತಾ ಎಂಬ ಪ್ರಶ್ನೆಯೂ ಮೂಡಿದೆ.

ಪಿಡಿಒ (PDO) ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸಾಮಾನ್ಯವಾಗಿ ಮೂರು ಹಂತದ ಸೀಲ್ ಭದ್ರತೆ (Seal Security) ಹೊಂದಿರುತ್ತವೆ. ಪರೀಕ್ಷಾ ಕೇಂದ್ರದ (Examination Centre) ಪ್ರಶ್ನೆ ಪತ್ರಿಕೆಗಳ ಬಂಡಲ್‌ಗೆ ಸಮಗ್ರವಾಗಿ ಪ್ಲಾಸ್ಟಿಕ್ ಕವರ್​ನ ಸೀಲ್ ಹಾಕಿರಲಾಗುತ್ತದೆ. ಬಳಿಕ ಆಯಾ ಪರೀಕ್ಷಾ ಕೊಠಡಿಯ ಪ್ರಶ್ನೆ ಪತ್ರಿಕೆಗಳಿಗೆ ಕಾಗದದ ಕವರ್​ನ ಜೊತೆಗೆ ಸೀಲ್ ಹಾಕಿರುತ್ತಾರೆ. ಕೊನೆಗೆ ಪ್ರತಿಯೊಂದು ಪ್ರಶ್ನೆ ಪತ್ರಿಕೆಗೂ ಪ್ರತ್ಯೇಕ ಸೀಲ್ (Separate seal) ಇರುತ್ತದೆ. ಆದರೆ, ಪ್ರಶ್ನೆ ಪತ್ರಿಕೆಯ ಮೇಲಿನ ಸೀಲ್ ಓಪನ್ ಮಾಡಿ ಪುನಃ ಆಂಟಿಸಿದ್ದಾರೆಂದು ಅಭ್ಯರ್ಥಿಗಳು ಆರೋಪಿಸಿದ್ದಾರೆ.ಕೆಪಿಎಸ್‌ಸಿ (KPSC) ಸರಿಯಾಗಿ ಪರೀಕ್ಷೆ(Test) ನಡೆಸಿಲ್ಲವೆಂದು ಅಭ್ಯರ್ಥಿಗಳು ಆರೋಪ (Accusation) ಮಾಡಿದ್ದು, ಮರುಪರೀಕ್ಷೆ (Retest) ನಡೆಸುವಂತೆ ಆಗ್ರಹಿಸಿದ್ದಾರೆ. ಈ ಕುರಿತು ಕೆಪಿಎಸ್‌ಸಿ (KPSC) ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಿಗೆ (Minister of Rural Development) ಮನವಿಯನ್ನೂ ಮಾಡಲಾಗಿದೆ.

ಗ್ರಾಮೀಣಾಭಿವೃದ್ಧಿ(Rural development) ಮತ್ತು ಪಂಚಾಯತ್ ರಾಜ್ ಸಚಿವ (Panchayat Raj Minister) ಪ್ರಿಯಾಂಕ್ ಖರ್ಗೆ ಅವರಿಗೆ, ದಿನಾಂಕ 8/12/2024 ರಂದು ನಡೆದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪರೀಕ್ಷೆಯಲ್ಲಿ PSI-545 ಹಗರಣದ ಮಾದರಿಯಲ್ಲಿಯೇ ಬ್ಲೂಟೂತ್ (Bluetooth) ಸದ್ದು ಮಾಡಿದೆ. ಕೇವಲ ತುಮಕೂರಿನಲ್ಲಿ ಒಬ್ಬ ಅಭ್ಯರ್ಥಿ ಬ್ಲೂಟೂತ್ (Bluetooth) ಬಳಸಿಲ್ಲ, ಇದರ ಹಿಂದೆ ಒಂದು ದೊಡ್ಡ ಗ್ಯಾಂಗ್ ಇದೆ. ನಮಗೆಲ್ಲ ನೆನಪಿದೆ, ತಾವೇ ಮುಂದಾಳತ್ವ ವಹಿಸಿಕೊಂಡು PSI ಹಗರಣವನ್ನು ಬಯಲಿಗೆಳೆದು, ಅಕ್ರಮದ ಅಪರಾಧಿಗಳಿಗೆ (For criminals) ಜೈಲುಗಂಬಿ ಎಣಿಸಲಿಕ್ಕೆ ಹಚ್ಚಿದಿರಿ. PDO HK ಮತ್ತು NON HK ಪರೀಕ್ಷೆಯಲ್ಲಿ ಬ್ಲೂಟೂತ್ ಬಳಕೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ (Question paper leak) ಆಗಿರುವುದು ಜಗಜ್ಜಾಹೀರವಾಗಿದೆ. ಬಡ ಅಭ್ಯರ್ಥಿಗಳು 5-6 ವರ್ಷದಿಂದ ಪರೀಕ್ಷೆಗೆ ಹಗಲು-ರಾತ್ರಿ ತಯಾರಿ ನಡೆಸಿದ್ದರು. ಅಕ್ರಮವಾಗಿ ಸರ್ಕಾರಿ ಹುದ್ದೆಗಳು ಮಾರಾಟವಾದರೆ, ಪ್ರತಿಭಾನ್ವಿತ ಬಡ ಅಭ್ಯರ್ಥಿಗಳ ಗತಿಯೇನು? ಇದಕ್ಕೆ ಉತ್ತರ ತಾವು ಕೊಡಬೇಕು. ಯುವಕರ ಕಣ್ಮಣಿ ನೀವು, ನಿಮ್ಮ ಮೇಲೆ ಲಕ್ಷಾಂತರ ಅಭ್ಯರ್ಥಿಗಳು ಭರವಸೆ ಇಟ್ಟಿದ್ದಾರೆ. ಇದಕ್ಕೆ ಪರಿಹಾರ ಹುಡಿಕಿ, ಅಕ್ರಮದಲ್ಲಿ ಭಾಗಿಯಾದ ಆರೋಪಿಗಳಿಗೆ ಜೈಲಿಗಟ್ಟಿಸಿ, ಮರುಪರೀಕ್ಷೆ ನಡೆಸುವಂತೆ KPSC ಗೆ ಅದೇಶಿಸಬೇಕೆಂದು AKSSA ಸಂಘಟನೆ ಪರವಾಗಿ ಕೇಳಿಕೊಳ್ಳುತ್ತೇವೆ ಎಂದು ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ವಿದ್ಯಾರ್ಥಿ ಘಟಕದ ಕಾಂತಕುಮಾರ್ ಆರ್ ಸಾಮಾಜಿಕ ಮಾಧ್ಯಮ (Social media) ಎಕ್ಸ್​ನಲ್ಲಿ ಸಂದೇಶ ಪ್ರಕಟಿಸಿ ಆಗ್ರಹಿಸಿದ್ದಾರೆ.

Tags: dharawadaexamination centerKarnatakaminister of rural developmentpanchayath raj ministerpdo examquestion paper seal open

Related News

ಎಲ್ಲದಕ್ಕೂ ಕಾಲವೇ ಉತ್ತರ ಎಂದು ಮೌನ ವಹಿಸಿದ ಡಿಸಿಎಂ ಡಿಕೆಶಿ : ರಾಜಕೀಯ ವಲಯದಲ್ಲಿ ಹೆಚ್ಚಿದ ಊಹಾಪೋಹ
ಪ್ರಮುಖ ಸುದ್ದಿ

ಎಲ್ಲದಕ್ಕೂ ಕಾಲವೇ ಉತ್ತರ ಎಂದು ಮೌನ ವಹಿಸಿದ ಡಿಸಿಎಂ ಡಿಕೆಶಿ : ರಾಜಕೀಯ ವಲಯದಲ್ಲಿ ಹೆಚ್ಚಿದ ಊಹಾಪೋಹ

January 19, 2026
ಹತ್ತು ವರ್ಷಗಳ ಬಳಿಕ ಮತ್ತೆ ‘ಚಪ್ಪಲಿ ಭಾಗ್ಯ’ ಮುನ್ನೆಲೆಗೆ: 2015ರಲ್ಲಿ ಕೈಬಿಟ್ಟಿದ್ದ ಪ್ಲಾನ್‌ಗೆ ಮತ್ತೆ ಜೀವ ತುಂಬಲು ಸರ್ಕಾರದ ಚಿಂತನೆ
ಪ್ರಮುಖ ಸುದ್ದಿ

ಹತ್ತು ವರ್ಷಗಳ ಬಳಿಕ ಮತ್ತೆ ‘ಚಪ್ಪಲಿ ಭಾಗ್ಯ’ ಮುನ್ನೆಲೆಗೆ: 2015ರಲ್ಲಿ ಕೈಬಿಟ್ಟಿದ್ದ ಪ್ಲಾನ್‌ಗೆ ಮತ್ತೆ ಜೀವ ತುಂಬಲು ಸರ್ಕಾರದ ಚಿಂತನೆ

January 19, 2026
ಸ್ಪೇನ್‌ನಲ್ಲಿ ಭೀಕರ ರೈಲು ದುರಂತ: ಹೈಸ್ಪೀಡ್ ರೈಲುಗಳ ಡಿಕ್ಕಿಗೆ 21 ಮಂದಿ ಸಾವು
ದೇಶ-ವಿದೇಶ

ಸ್ಪೇನ್‌ನಲ್ಲಿ ಭೀಕರ ರೈಲು ದುರಂತ: ಹೈಸ್ಪೀಡ್ ರೈಲುಗಳ ಡಿಕ್ಕಿಗೆ 21 ಮಂದಿ ಸಾವು

January 19, 2026
ಹೆಚ್ಚುತ್ತಿರುವ ಗುಯಿಲಿನ್‌ ಬಾರ್‌ ಸಿಂಡ್ರೋಮ್‌ ಪ್ರಕರಣ: GBS ರೋಗಿಗಳಿಗೆ ಕೇಂದ್ರ ಸರ್ಕಾರದ ಆರೋಗ್ಯ ರಕ್ಷಣೆ
ದೇಶ-ವಿದೇಶ

ಹೆಚ್ಚುತ್ತಿರುವ ಗುಯಿಲಿನ್‌ ಬಾರ್‌ ಸಿಂಡ್ರೋಮ್‌ ಪ್ರಕರಣ: GBS ರೋಗಿಗಳಿಗೆ ಕೇಂದ್ರ ಸರ್ಕಾರದ ಆರೋಗ್ಯ ರಕ್ಷಣೆ

January 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.