ಬಿಜೆಪಿ ಶಾಸಕನ ಬಟ್ಟೆ ಹರಿದು ಹಿಗ್ಗಾಮುಗ್ಗಾ ಥಳಿಸಿದ ರೈತರು

ಮುಕ್ತ್ಸಾರ್, ಮಾ. 29: ಪಂಜಾಬ್ ರಾಜ್ಯದ ಮುಕ್ತ್ಸಾರ್ ಜಿಲ್ಲೆಯ ಮಾಲೌಟ್’ನಲ್ಲಿ ಉದ್ರಿಕ್ತ ರೈತರ ಗುಂಪೊಂದು ಅಬೋಹರ್ ಬಿಜೆಪಿ ಶಾಸಕ ಅರುಣ್ ನಾರಂಗ್ ಘೇರಾವ್ ಹಾಕಿ ಬಟ್ಟೆ ಹಾರಿದು ಹಾಕಿದ ಥಳಿಸಿರುವ ಘಟನೆ ಶನಿವಾರ ನಡೆದಿದೆ.

ಮಲೌಟ್’ನಲ್ಲಿ ಸುದ್ದಿಗೋಷ್ಠಿ ನಡೆಸಲು ಶಾಸಕರು ತೆರಳಿದ ಸಂದರ್ಭ ಈ ಘಟನೆ ಸಂಭವಿಸಿದೆ. ಪ್ರತಿಭಟನಾ ನಿರತ ರೈತರು ಶಾಸಕ ಅರುಣ್ ನಾರಂಗ್’ಗಾಗಿ ಬಿಜೆಪಿ ಕಚೇರಿ ಮುಂದೆ ಕಾದು ಕುಳಿತಿದ್ದರು. ಅರುಣ್ ನಾರಂಗ್ ಬರುತ್ತಿದ್ದಂತೆ ರೈತರ ಗುಂಪು ಅವರತ್ತ  ಕಪ್ಪು ಶಾಯಿ ಎರಚಿತು. ತಕ್ಷಣ ಪೊಲೀಸರು ಅವರನ್ನು ಸಮೀಪದ ಅಂಗಡಿಯೊಂದಕ್ಕೆ ಕರೆದೊಯ್ದರು.

ಕೆಲವು ಸಮಯ ಕಳೆದ ನಂತರ ಶಾಸಕರು ಅಂಗಡಿಯಿಂದ ಹೊರಬರುತ್ತಿದ್ದಂತೆ ರೈತರು ಶಾಸಕರ ಬಟ್ಟೆ ಹರಿದು ಅವರ ಮೇಲೆ ಹಲ್ಲೆ ನಡೆಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ 250-300 ಅಪರಿಚಿತ ಪ್ರತಿಭಟನಾಕಾರರ ವಿರುದ್ಧ ಸೆಕ್ಷನ್ 307ರ ಅಡಿಯಲ್ಲಿ ( ಕೊಲೆ ಯತ್ನ) ಪ್ರಕರಣ ದಾಖಲಾಗಿದೆ.

Exit mobile version