ಬೆಂಗಳೂರು, ಜ. 21: ಇತ್ತೀಚೆಗಷ್ಟೇ ಸಚಿವ ಸಂಪುಟ ವಿಸ್ತರಣೆ ವೇಳೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ 7 ಮಂದಿ ನೂತನ ಸಚಿವರಿಗೆ ಖಾತೆ ಹಂಚಿಕೆಗೆ ಮಾಡಲಾಗಿದ್ದು, ಜತೆಗೆ ಹಲವು ಸಚಿವರ ಖಾತೆ ಬದಲಾವಣೆ ಮಾಡಿದ್ದಾರೆ ಎನ್ನಲಾಗಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸಂಪುಟ ವಿಸ್ತರಣೆಯಲ್ಲಿ 7 ಶಾಸಕರು ನೂತನ ಸಚಿವರಾಗಿ ಸಂಪುಟ ಸೇರಿದ್ದರು. ಎಸ್. ಅಂಗಾರ, ಸಿ.ಪಿ. ಯೋಗೇಶ್ವರ್, ಎಂ.ಟಿ.ಬಿ. ನಾಗರಾಜ್, ಆರ್.ಶಂಕರ್, ಅರವಿಂದ ಲಿಂಬಾವಳಿ, ಮುರುಗೇಶ ನಿರಾಣಿ, ಉಮೇಶ್ ಕತ್ತಿ ಸೇರಿ 7 ಮಂದಿ ನೂತನ ಸಚಿವರಾಗಿದ್ದಾರೆ.
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೇ ಹಾಲಿ ಇರುವ ಕನಿಷ್ಠ 10 ಖಾತೆಗಳು ಬದಲಾವಣೆ ಮಾಡಲಾಗಿದೆ. ಸಿಎಂ ಬಿಎಸ್ ವೈ ಈಗಾಗಲೇ ಖಾತೆ ಪಟ್ಟಿಯನ್ನ ರಾಜಭವನಕ್ಕೆ ಕಳುಹಿಸಿದ್ದಾರೆ ಎನ್ನಲಾಗಿದೆ.
ಯಾವ ಸಚಿವರಿಗೆ ಯಾವ ಖಾತೆ?
ಬಸವರಾಜ ಬೊಮ್ಮಾಯಿ- ಗೃಹ, ಕಾನೂನು, ಸಂಸದೀಯ ವ್ಯವಹಾರ
ಜೆ.ಸಿ. ಮಾಧುಸ್ವಾಮಿ – ವೈದ್ಯಕೀಯ ಶಿಕ್ಷಣ.
ಕನ್ನಡ-ಸಂಸ್ಕೃತಿ ಇಲಾಖೆ
ಸಿ.ಸಿ. ಪಾಟೀಲ್- ಸಣ್ಣ ಕೈಗಾರಿಕೆ, ವಾರ್ತಾ ಇಲಾಖೆ
ಎಸ್ ಅಂಗಾರ- ಮೀನುಗಾರಿಕೆ, ಬಂದರು
ಕೋಟಾ ಶ್ರೀನಿವಾಸ ಪೂಜಾರಿ-ಮುಜರಾಯಿ,
ಹಿಂದುಳಿದ ವರ್ಗಗಳ ಕಲ್ಯಾಣ
ಉಮೇಶ್ ಕತ್ತಿ -ಆಹಾರ, ನಾಗರಿಕ ಪೂರೈಕೆ ಇಲಾಖೆ
ಅರವಿಂದ ಲಿಂಬಾವಳಿ-ಅರಣ್ಯ
ಮುರುಗೇಶ್ ನಿರಾಣಿ- ಗಣಿ, ಭೂ ವಿಜ್ಞಾನ
ಎಂಟಿಬಿ ನಾಗರಾಜ್- ಅಬಕಾರಿ
ಡಾ.ಕೆ. ಸುಧಾಕರ್-ಆರೋಗ್ಯ
ಆನಂದ್ ಸಿಂಗ್ – ಪ್ರವಾಸೋದ್ಯಮ, ಪರಿಸರ ಇಲಾಖೆ
ಸಿ.ಪಿ. ಯೋಗೇಶ್ವರ್ -ಸಣ್ಣ ನೀರಾವರಿ
ಆರ್. ಶಂಕರ್-ಪೌರಾಡಳಿ ಹಾಗೂ ರೇಷ್ಮೆ ಇಲಾಖೆ
ಗೋಪಾಲಯ್ಯ-ತೋಟಗಾರಿಕೆ, ಸಕ್ಕರೆ
ಕೆ.ಸಿ. ನಾರಾಯಣ ಗೌಡ- ಯುವ ಸಬಲೀಕರಣ, ಕ್ರೀಡೆ, ಹಜ್ ಮತ್ತು ವಕ್ಫ್ ಖಾತೆ ನೀಡಲಾಗಿದೆ ಎನ್ನಲಾಗುತ್ತಿದೆ.