ಬೆಂಗಳೂರು, ಫೆ. 22: ಶೂಟಿಂಗ್ ಸಂದರ್ಭದಲ್ಲಿ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿ ಡಿಸ್ಚಾರ್ಜ್ ಆದ ನಟ ರಾಘವೇಂದ್ರ ರಾಜ್ಕುಮಾರ್ ಅವರ ನಿವಾಸಕ್ಕೆ ನವರಸ ನಾಯಕ ಜಗ್ಗೇಶ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಆರೋಗ್ಯದಲ್ಲಿ ಕೊಂಚ ಸಮಸ್ಯೆ ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ದಾಖಲಾಗಿದ್ದೆ. ಈ ಬಗ್ಗೆ ಯಾರು ಆತಂಕಪಡುವಂತಹದ್ದು ಏನೂ ಆಗಿಲ್ಲ ಎಂದು ರಾಘವೇಂದ್ರ ರಾಜ್ಕುಮಾರ್ ಅವರು ಹೇಳಿದ್ದಾರೆ.
ಬೆಳಕು ಸಿನಿಮಾದ ಶೂಟಿಂಗ್ ವೇಳೆ ಆರೋಗ್ಯದಲ್ಲಿ ವ್ಯತ್ಯಯವಾಗಿತ್ತು. ಆ ವೇಳೆ ರಾಜಾಜಿನಗರದ ಕೊಲೊಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ದಿನಗಳ ನಂತರ ರಾಘವೇಂದ್ರ ರಾಜ್ಕುಮಾರ್ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು.
ಈ ಹಿನ್ನೆಲೆಯಲ್ಲಿ ಸೋಮವಾರ ಸದಾಶಿವನಗರದಲ್ಲಿರುವ ನಟ ರಾಘವೇಂದ್ರ ರಾಜ್ಕುಮಾರ್ ಮನೆಗೆ ಭೇಟಿ ನೀಡಿದ ಜಗ್ಗೇಶ್ ಅವರು ರಾಜ್ ಕುಟುಂಬದೊಂದಿಗೆ ಈ ಹಿಂದಿನಿಂದಲೂ ಸಾಕಷ್ಟು ಒಡನಾಟ ಹೊಂದಿದ್ದವರು.