- ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ ಮಾಸುವ (janardhana reddy model house fire) ಮುನ್ನವೇ ಮತ್ತೊಂದು ಕೃತ್ಯ
- ಜನಾರ್ಧನ ರೆಡ್ಡಿ ಅವರ ಹೆಂಡತಿಗೆ ಸೇರಿದ ಮಾಡೆಲ್ ಹೌಸ್ಗೆ ಬೆಂಕಿ
- ಇಂಧನ ಸುರಿದು ಬೆಂಕಿ ಹಚ್ಚಿದ ಶಂಕೆ; ಎಂಟು ಮಂದಿ ವಶಕ್ಕೆ ಪಡೆದುಕೊಂಡ ಪೊಲೀಸರು
Bellary: ಬಳ್ಳಾರಿಯಲ್ಲಿ ಸಂಭವಿಸಿದ ಮಾಡೆಲ್ ಹೌಸ್ (Model House) ಅಗ್ನಿ ಅವಘಡ ಪ್ರಕರಣವು ರಾಜ್ಯ (janardhana reddy model house fire) ಮಟ್ಟದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಈ ಸಂಬಂಧ ಪೊಲೀಸರು ಮಹತ್ವದ ಬೆಳವಣಿಗೆ ದಾಖಲಿಸಿದ್ದಾರೆ.
ಶಾಸಕ ಜನಾರ್ದನ ರೆಡ್ಡಿಗೆ (Janardhana Reddy) ಸಂಬಂಧಿಸಿದ ಜಿ ಸ್ಕೈರ್ ಲೇಔಟ್ನಲ್ಲಿರುವ (G Square Layout) ಮಾಡೆಲ್ ಹೌಸ್ಗೆ ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಲಾಗಿದೆ ಎಂಬ ಶಂಕೆಯ ಮೇರೆಗೆ, ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರನ್ನು ಸೇರಿಸಿ ಒಟ್ಟು ಎಂಟು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.

ಘಟನೆ ನಡೆದ ಬೆನ್ನಲ್ಲೇ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ (janardhana reddy model house fire) ತನಿಖೆಯನ್ನು ಚುರುಕುಗೊಳಿಸಿದ್ದು, ಶನಿವಾರ ಅಧಿಕೃತವಾಗಿ ಈ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಬಳ್ಳಾರಿ ವಲಯ ಐಜಿಪಿ ಡಾ. ಪಿ.ಎಸ್. ಹರ್ಷ, “ಅಗ್ನಿ ಅವಘಡದ ಹಿಂದಿನ ಕಾರಣಗಳು ಮತ್ತು ಆರೋಪಿಗಳ ಪಾತ್ರದ ಕುರಿತು ಸಮಗ್ರ ತನಿಖೆ ನಡೆಸಲಾಗುತ್ತಿದೆ.
ವಶಕ್ಕೆ ಪಡೆದ ಎಂಟು ಮಂದಿಯಲ್ಲಿ ಕೆಲವರು ಅಪ್ರಾಪ್ತರಾಗಿರಬಹುದೆಂಬ ಅನುಮಾನವಿದ್ದು, ಅವರ ವಯಸ್ಸಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.
ವಿಚಾರಣೆ ಪೂರ್ಣಗೊಂಡ ನಂತರ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲಾಗುವುದು” ಎಂದು ಸ್ಪಷ್ಟಪಡಿಸಿದರು.
ಪ್ರಕರಣದ ಸಂವೇದನಾಶೀಲತೆಯನ್ನು ಗಮನದಲ್ಲಿಟ್ಟುಕೊಂಡು ಪೊಲೀಸರು ಎಲ್ಲ ಆಯಾಮಗಳಿಂದ ತನಿಖೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು.
ಘಟನೆಗೆ ಸಂಬಂಧಿಸಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿಯವರ ಸೈಟ್ ಎಂಜಿನಿಯರ್ ರಿಜ್ವಾನ್ (Site Engineer Rizwan) ಅವರು ನೀಡಿದ ದೂರಿನ ಆಧಾರದ ಮೇಲೆ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರಿನ ಪ್ರಕಾರ, 8 ರಿಂದ 10 ಜನ ದುಷ್ಕರ್ಮಿಗಳು ರಾತ್ರಿ ಸಮಯದಲ್ಲಿ ಮಾಡೆಲ್ ಹೌಸ್ಗೆ ನುಗ್ಗಿ ಡೀಸೆಲ್ ಹಾಗೂ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ.
ಪರಿಣಾಮವಾಗಿ ಮನೆಯೊಳಗಿನ ಫರ್ನಿಚರ್, ಎಲೆಕ್ಟ್ರಾನಿಕ್ ಉಪಕರಣಗಳು ಹಾಗೂ ಇತರೆ ಅಲಂಕಾರಿಕ ಸಾಮಗ್ರಿಗಳು ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಸುಮಾರು 1 ಕೋಟಿ 25 ಲಕ್ಷ ರೂಪಾಯಿ ಮೌಲ್ಯದ ಆಸ್ತಿ ನಷ್ಟವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಇನ್ನು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಪ್ರತಿಕ್ರಿಯಿಸಿದ ಮಾಜಿ ಶಾಸಕ ಸೋಮಶೇಖರ್ ರೆಡ್ಡಿ, “ಈ ಲೇಔಟ್ ಅನ್ನು ನಮ್ಮ ತಾಯಿಯ ಹೆಸರಿನಲ್ಲಿ ಅಭಿವೃದ್ಧಿಪಡಿಸಿದ್ದೇವೆ.
ಸಾರ್ವಜನಿಕರಿಗೆ ತೋರಿಸುವ ಉದ್ದೇಶದಿಂದ ಮಾಡೆಲ್ ಹೌಸ್ ನಿರ್ಮಿಸಲಾಗಿತ್ತು. ಆದರೆ ಕೆಲ ಅಜ್ಞಾತರು ಉದ್ದೇಶಪೂರ್ವಕವಾಗಿ ಇಂಧನ ಸುರಿದು ಬೆಂಕಿ ಹಚ್ಚಿದ್ದಾರೆ. ಮನೆಯಲ್ಲಿದ್ದ ಎಲ್ಲಾ ಪೀಠೋಪಕರಣಗಳು, ಗ್ಲಾಸ್ಗಳು ಸಂಪೂರ್ಣವಾಗಿ ನಾಶವಾಗಿವೆ.
ಅಗ್ನಿಶಾಮಕ ದಳ ಮತ್ತು ಪೊಲೀಸರು ಸಮಯಕ್ಕೆ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಿಯಂತ್ರಿಸಿದ್ದಾರೆ” ಎಂದು ವಿವರಿಸಿದರು.
ಈ ಘಟನೆಯಿಂದ ಕುಟುಂಬಕ್ಕೆ ಮಾತ್ರವಲ್ಲದೆ, ಲೇಔಟ್ ಯೋಜನೆಗೂ ದೊಡ್ಡ ಹಾನಿಯಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಇನ್ನೊಂದೆಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಪನ್ನೇಕರ್ ಅವರು ಘಟನೆಯ ಪ್ರಾಥಮಿಕ ಹಂತದ ತನಿಖೆಯ ಬಗ್ಗೆ ಮಾತನಾಡಿ, “ಮಾಡೆಲ್ ಹೌಸ್ಗೆ ಬೆಂಕಿ ಬಿದ್ದಿರುವುದು ನಿಜ. ಆದರೆ ಯಾವ ರೀತಿಯಲ್ಲಿ ಮತ್ತು ಯಾರಿಂದ ಈ ಕೃತ್ಯ ನಡೆದಿದೆ ಎಂಬುದು ತನಿಖೆಯಿಂದಲೇ ಸ್ಪಷ್ಟವಾಗಬೇಕು.
ಆರಂಭದಲ್ಲಿ ರಾತ್ರಿಯ ಸಮಯವಾಗಿದ್ದರಿಂದ ಸಂಪೂರ್ಣ ತಪಾಸಣೆ ಸಾಧ್ಯವಾಗಿರಲಿಲ್ಲ. ಈಗ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಲಭ್ಯವಾಗುವ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದರು.
ಈ ಪ್ರಕರಣವು ರಾಜ್ಯ ರಾಜಕೀಯ ಹಾಗೂ ಕಾನೂನು ವಲಯದಲ್ಲಿ ಹೆಚ್ಚಿನ ಕುತೂಹಲಕ್ಕೆ ಕಾರಣವಾಗಿದ್ದು, ಮುಂದಿನ ತನಿಖಾ ವರದಿ ಮಹತ್ವ ಪಡೆದಿದೆ.
ಇದನ್ನು ಓದಿ : https://vijayatimes.com/us-quits-who-membership/