Bengaluru : ನಾಳೆ ವಿಧಾನಸೌಧದಲ್ಲಿ (Janata Darshan program at Vidhansouda) ನಡೆಯಲಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ( CM Siddaramaiah)
ಅವರ ರಾಜ್ಯ ಮಟ್ಟದ ಎರಡನೇ ಜನತಾ ದರ್ಶನ ಕಾರ್ಯಕ್ರಮಕ್ಕೆ (Janata Darshan programme) ಸಕಲ ಸಿದ್ದತೆಗಳು ನಡೆದಿದೆ. ರಾಜ್ಯದ ವಿವಿಧ ಭಾಗಗಳಿಂದ
ಆಗಮಿಸಲಿರುವ ಸಾರ್ವಜನಿಕರು ಸಲ್ಲಿಸುವ ದೂರು ಹಾಗೂ ಮನವಿಗಳನ್ನು ಸ್ವೀಕರಿಸಲು ಇಲಾಖಾವಾರು ಕೌಂಟರ್ ಗಳು, ಅಧಿಕಾರಿಗಳ ನಿಯೋಜನೆ ಮಾಡಲಾಗಿದೆ.
ಜನಸಾಮಾನ್ಯರ ಅಹವಾಲು ಆಲಿಸಿ, ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಪ್ರಯತ್ನದೊಂದಿಗೆ ರಾಜ್ಯಮಟ್ಟದ ಈ ಜನತಾ ದರ್ಶನವನ್ನು ಶಕ್ತಿ ಕೇಂದ್ರ ವಿಧಾನಸೌಧದ ಮುಂಭಾಗ
ನಡೆಸುತ್ತಿರುವುದು ವಿಶೇಷವಾಗಿದೆ. ಸಿಎಂ ಸಿದ್ದರಾಮಯ್ಯ ( CM Siddaramaiah) ನಡೆಸುತ್ತಿರುವ 2ನೇ ಜನಸ್ಪಂದನ ಕಾರ್ಯಕ್ರಮ ಇದಾಗಿದೆ. ಲೋಕಸಭೆ ಚುನಾವಣೆ
ಹಿನ್ನೆಲೆಯಲ್ಲಿ ಪಕ್ಷದ ಮತ್ತು ಸರಕಾರದ ವರ್ಚಸ್ಸು ಹೆಚ್ಚಿಸಿ, ಜನಪರ ಮತ್ತು ಸ್ಪಂದನಶೀಲ ಆಡಳಿತದ ವಿಶ್ವಾಸವನ್ನು ಜನರಲ್ಲಿ ಮೂಡಿಸುವುದು ಇದರ ಮುಖ್ಯ ಉದ್ದೇಶವಾಗಿದೆ.
ಎಲ್ಲ ಇಲಾಖೆ ಕಾರ್ಯದರ್ಶಿಗಳು, ಇಲಾಖಾ ಮುಖ್ಯಸ್ಥರು ಸ್ಥಳದಲ್ಲಿ (Public) ಹಾಜರಿದ್ದು ಸಾರ್ವಜನಿಕ ಕುಂದುಕೊರತೆ, ದೂರು, ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸುವ
ಉದ್ದೇಶ ಹೊಂದಲಾಗಿದೆ. ಜನಸ್ಪಂದನಕ್ಕೆ ಬರುವ ಜನರಿಗಾಗಿ ಕುಡಿಯುವ ನೀರು, ಲಘು ಉಪಹಾರ ಮತ್ತಿತರ ವ್ಯವಸ್ಥೆಗಳನ್ನು ಮಾಡಲಾಗುತ್ತಿದ್ದು, ವಿಶೇಷ ಚೇತನರು ಮತ್ತು
ಹಿರಿಯ ನಾಗರಿಕರಿಗೆ ವಿಶೇಷ ವ್ಯವಸ್ಥೆಗಳನ್ನು (Special arrangements for citizens)ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈಗಾಗಲೇ ನಾನಾ ಇಲಾಖೆಗಳ ಅರ್ಜಿ ಸ್ವೀಕಾರಕ್ಕೆ ಪ್ರತ್ಯೇಕ (Application is separate for acceptance) ಕೌಂಟರುಗಳನ್ನು ಸ್ಥಾಪಿಸಿ, ಅಗತ್ಯವಿರುವ ಸಿಬ್ಬಂದಿಯನ್ನು
ನಿಯೋಜಿಸಲಾಗುತ್ತಿದ್ದು, ಸ್ವೀಕಾರವಾಗುವ ದೂರುಗಳನ್ನು ಪರಿಶೀಲಿಸಿ, ನಿಗದಿತ ಕೌಂಟರುಗಳಿಗೆ ತೆರಳಲು ಸೂಕ್ತ ಮಾರ್ಗದರ್ಶನ ನೀಡಲು ಪ್ರವೇಶ ದ್ವಾರದಲ್ಲಿಯೇ ಫೆಸಿಲಿಟೇಷನ್
ತಂಡವನ್ನು ನಿಯೋಜಿಸಲಾಗುತ್ತಿದೆ. ಮುಖ್ಯವಾಗಿ, ಜನಸ್ಪಂದನಕ್ಕೆ ಆಗಮಿಸುವವರ ಅನುಕೂಲಕ್ಕಾಗಿ ಮೆಜೆಸ್ಟಿಕ್ ಬಸ್ ನಿಲ್ದಾಣ (Majestic Bus Stand) ಹಾಗೂ ರೈಲ್ವೆ ನಿಲ್ದಾಣಕ್ಕೆ
ಉಚಿತ ಬಸ್ (Janata Darshan program at Vidhansouda) ವ್ಯವಸ್ಥೆ ಮಾಡಲಾಗುತ್ತಿದೆ.
ಸಿಎಂ ಸಿದ್ದರಾಮಯ್ಯ (CM Siddaramaiah) ಕಳೆದ ಬಾರಿ ನವೆಂಬರ್ 27ರಂದು ಗೃಹ ಕಚೇರಿ ಕೃಷ್ಣಾದಲ್ಲಿ ನವೆಂಬರ್ 27 (November 27 at Home Office Krishna)
ರಂದು ನಡೆದ ಜನತಾ ದರ್ಶನದಲ್ಲಿ 4030 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಈವರೆಗೆ 3738 ಅರ್ಜಿಗಳನ್ನು ವಿಲೇವಾರಿ (Dispose of applications) ಮಾಡಲಾಗಿದೆ.
ಒಟ್ಟಾರೆ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸುಗಮವಾಗಿ ಪರಿಹಾರವನ್ನು ಪಡೆಯಲು ಜನತಾ ದರ್ಶನ ಕಾರ್ಯಕ್ರಮ ನೆರವಾಗಲು
ಭರದ ಸಿದ್ಧತೆ ನಡೆದಿದೆ.
ಇದನ್ನು ಓದಿ: ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ಪ್ರತಿಯಾಗಿ ಬೆಂಗಳೂರಲ್ಲಿ ಬಿಜೆಪಿ ಪ್ರತಿಭಟನೆ!