ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿಯನ್ನೇ ಕಣಕ್ಕಿಳಿಸುತ್ತೇವೆ! ಎಂದ ಎಚ್‌ಡಿ ಕುಮಾರಸ್ವಾಮಿ

Ramnagar:ಕಳೆದ ಬಾರಿಯಂತೆ ಈ ಬಾರಿಯೂ ಕೂಡ ಮಂಡ್ಯ (JDS candidate in Mandya) ಲೋಕಸಭಾ ಕ್ಷೇತ್ರ (Lok Sabha constituency) ಚುನಾವಣೆ ಘೋಷಣೆಗೂ

ಮುನ್ನವೇ ಭಾರೀ ಸದ್ದು ಮಾಡುತ್ತಿದೆ. ಬಿಜೆಪಿ ಜೊತೆ ಗುರುತಿಸಿಕೊಂಡಿರುವ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh), ಈ ಬಾರಿಯೂ ಮಂಡ್ಯ ಟಿಕೆಟ್‌ಗೆ ಪಟ್ಟು

ಹಿಡಿದಿದ್ದಾರೆ.

ಯಾವುದೇ ಕಾರಣಕ್ಕೂ ಮಂಡ್ಯ ಬಿಟ್ಟು ಕೊಡೋ ಮಾತೇ ಇಲ್ಲ ಎಂದಿದ್ದಾರೆ. ಮತ್ತೊಂದೆಡೆ ಬಿಜೆಪಿ (BJP) ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ (JDS), ಮಂಡ್ಯ ಕ್ಷೇತ್ರದ

ಮೇಲೆ ಕಣ್ಣಿಟ್ಟಿದೆ. ಹೀಗಾಗಿ ಮಂಡ್ಯ ಟಿಕೆಟ್‌ಗಾಗಿ ದಳಪತಿಗಳು ಪ್ರಯತ್ನ ನಡೆಸಿದ್ದಾರೆ. ಈ ನಡುವೆ ಇಂದು ತೋಟದ ಮನೆಯಲ್ಲಿ ಮಂಡ್ಯ ಜೆಡಿಎಸ್ ನಾಯಕರ ಸಭೆ ನಡೆಸಿರುವ ಎಚ್‌ಡಿ

ಕುಮಾರಸ್ವಾಮಿ (HD Kumaraswamy), ನಿಮ್ಮೆಲ್ಲರ ಒತ್ತಾಸೆಯಂತೆಯೇ ಜೆಡಿಎಸ್‌ (JDS candidate in Mandya) ಅಭ್ಯರ್ಥಿಯನ್ನೇ ಕಣಕ್ಕಿಳಿಸುತ್ತೇವೆ ಎಂದಿದ್ದಾರೆ.

ಇಂದು ತೋಟದ ಮನೆಯಲ್ಲಿ ಸಭೆ ನಡೆಸಿದ ಎಚ್‌ಡಿಕೆ (HDK), ಮಂಡ್ಯ ಟಿಕೆಟ್ ಕುರಿತಂತೆ ಮಹತ್ವದ ಚರ್ಚೆ ನಡೆಸಿದ್ದಾರೆ. ಮಂಡ್ಯ ಕ್ಷೇತ್ರ ಟಿಕೆಟ್ ಬಗ್ಗೆ ಯಾರಿಗೂ ಗೊಂದಲ ಬೇಡ,

ಚುನಾವಣೆಗೆ ಸಿದ್ಧರಾಗಿ ಎಂಬ ಸಂದೇಶ ರವಾನಿಸಿದ್ದಾರೆ ಎನ್ನಲಾಗಿದೆ.ಕಳೆದ ಲೋಕಸಭೆ ಚುನಾವಣೆಯಲ್ಲಿ ಆದಹಾಗೆ ಈ ಬಾರಿಯೂ ಆಗದಂತೆ ನೋಡಿಕೊಳ್ಳಿ. ಸ್ಥಳೀಯ ಮುಖಂಡರನ್ನು

ಭೇಟಿ ಮಾಡಿ ಮಾಹಿತಿ ಸಂಗ್ರಹಿಸಿ. ಯಾವುದೇ ಕಾರಣಕ್ಕೂ ಮಂಡ್ಯದಲ್ಲಿ ನಮ್ಮ ಅಭ್ಯರ್ಥಿ ಸೋಲಬಾರದು ಅಂತ ಎಚ್‌ಡಿಕೆ ಜೆಡಿಎಸ್ ನಾಯಕರಿಗೆ ಸೂಚನೆ ಕೊಟ್ಟಿದ್ದಾರೆ ಎಂದು

ಮೂಲಗಳು ತಿಳಿಸಿವೆ.

ಇದನ್ನು ಓದಿ: ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿಯನ್ನೇ ಕಣಕ್ಕಿಳಿಸುತ್ತೇವೆ! ಎಂದ ಎಚ್‌ಡಿ ಕುಮಾರಸ್ವಾಮಿ

Exit mobile version