• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ದೇವಮೂಲೆಯಲ್ಲಿರುವ ಮಾಗಡಿಯಿಂದ ಹೆಚ್.ಡಿ ಕುಮಾರಸ್ವಾಮಿ ಸ್ಪರ್ಧೆ..?

Mohan Shetty by Mohan Shetty
in ರಾಜಕೀಯ, ರಾಜ್ಯ
JDS
0
SHARES
0
VIEWS
Share on FacebookShare on Twitter

ಮುಂಬರುವ 2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ(Vidhansabha Elections) ಜೆಡಿಎಸ್(JDS) ಶಾಸಕಾಂಗ ಪಕ್ಷದ ನಾಯಕರಾಗಿರುವ ಎಚ್.ಡಿ. ಕುಮಾರಸ್ವಾಮಿ(HD Kumarswamy) ಅವರು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕೆಂಬ ಚರ್ಚೆ ಜೆಡಿಎಸ್‍ನಲ್ಲಿ ಶುರುವಾಗಿದೆ.

HD Kumarswamy

ಸಾಮಾನ್ಯವಾಗಿ ರಾಜಕೀಯದಲ್ಲಿ ಪ್ರಬಲ ನಾಯಕರಿಗೆ ಒಂದು ನಿರ್ಧಿಷ್ಟ ಮತ್ತು ಸುರಕ್ಷಿತ ಕ್ಷೇತ್ರವಿರುತ್ತದೆ. ಆದರೆ ಕುಮಾರಸ್ವಾಮಿ ಅವರ ವಿಷಯದಲ್ಲಿ ಮಾತ್ರ ಈ ಮಾತು ನಿಜವಲ್ಲ. ಏಕೆಂದರೆ ಕುಮಾರಸ್ವಾಮಿ ಅವರು ತಮ್ಮ ರಾಜಕೀಯ ಜೀವನದಲ್ಲಿ ಅನೇಕ ಕ್ಷೇತ್ರಗಳಿಂದ ಸ್ಪರ್ಧಿಸಿದ್ದಾರೆ. ಹೀಗಾಗಿ ಅವರು ಯಾವುದೇ ಒಂದು ಕ್ಷೇತ್ರಕ್ಕೆ ಸೀಮಿತವಾದ ರಾಜಕಾರಣಿಯಲ್ಲ. ಇನ್ನು ತಮ್ಮ ರಾಜಕೀಯ ತಂತ್ರಗಾರಿಕೆಗೆ ತಕ್ಕಂತೆ ಕ್ಷೇತ್ರಗಳನ್ನು ಬದಲಿಸುವುದು ದೇವೇಗೌಡರ ಕುಟುಂಬದ ವಾಡಿಕೆ.

ಇದನ್ನೂ ಓದಿ : https://vijayatimes.com/four-men-gangrape-mentally-disabled-woman/

1998ರಲ್ಲಿ ಕುಮಾರಸ್ವಾಮಿ ಅವರು ಕನಕಪುರ ಲೋಕಸಭಾ ಕ್ಷೇತ್ರ ಮತ್ತು ಸಾತನೂರು ವಿಧಾನಸಭಾ ಕ್ಷೇತ್ರಗಳಿಂದ ಅಭ್ಯರ್ಥಿಯಾಗಿದ್ದರು. 2004ರಲ್ಲಿ ರಾಮನಗರ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡರು. ಆದರೆ 2018ರಲ್ಲಿ ರಾಮನಗರದೊಂದಿಗೆ ಚನ್ನಪಟ್ಟಣದಿಂದಲೂ ಸ್ಪರ್ಧಿಸಿ ಗೆದ್ದರು. ಹೀಗಾಗಿ ಸದಾ ಕ್ಷೇತ್ರಗಳನ್ನು ಬದಲಾಯಿಸುವ ಕುಮಾರಸ್ವಾಮಿ ಅವರು ಇದೀಗ ಮಾಗಡಿ ಕ್ಷೇತ್ರಕ್ಕೆ ಬರಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ. ಕರ್ನಾಟಕದ ಭೂಪಟದ ಪ್ರಕಾರ ಮಾಗಡಿ ಕ್ಷೇತ್ರ ದೇವಮೂಲೆಯಲ್ಲಿದೆ. ಈ ಕ್ಷೇತ್ರದಿಂದ ಸ್ಪರ್ಧಿಸಿದರೆ ಮುಖ್ಯಮಂತ್ರಿಯಾಗುವ ಸಾಧ್ಯತೆ ಹೆಚ್ಚಿದೆ.

jds

ಹೀಗಾಗಿ ಮಾಗಡಿ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಕುಮಾರಸ್ವಾಮಿ ಮುಂದಾಗಿದ್ದಾರೆ ಎನ್ನಲಾಗಿದೆ. ಇನ್ನು ಮಾಗಡಿ ಕ್ಷೇತ್ರ ಜೆಡಿಎಸ್‍ನ ಭದ್ರಕೋಟೆ ಎಂದೇ ಹೇಳಬಹುದು. ಈ ಕ್ಷೇತ್ರದಲ್ಲಿ ಸದ್ಯ ಜೆಡಿಎಸ್‍ನ ಎ. ಮಂಜು ಹಾಲಿ ಶಾಸಕರಾಗಿದ್ದಾರೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‍ನಿಂದ ಸ್ಪರ್ಧಿಸಿ ಸುಮಾರು 44 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್‍ನ ಎಚ್.ಸಿ. ಬಾಲಕೃಷ್ಣರನ್ನು ಸೋಲಿಸಿದ್ದರು. 2004 ರಿಂದಲೂ ಮಾಗಡಿ ಕ್ಷೇತ್ರ ಜೆಡಿಎಸ್ ಹಿಡಿತದಲ್ಲಿದೆ.

ಇದನ್ನೂ ಓದಿ : https://vijayatimes.com/jp-nadda-laughs-at-congress/

ಹೀಗಾಗಿ ಮಾಗಡಿ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ರೆ ಸುಲಭವಾಗಿ ಗೆಲ್ಲಬಹುದು. ಅದೇ ರೀತಿ ಮುಖ್ಯಮಂತ್ರಿ ಹುದ್ದೆಗೇರಲು ಅದೃಷ್ಟ ಒಲಿಯಬಹುದು ಎಂಬುದು ಕುಮಾರಸ್ವಾಮಿ ಅವರ ಲೆಕ್ಕಾಚಾರ. ಆದರೆ ಈ ಸಂಗತಿಯ ಕುರಿತು ಕುಮಾರಸ್ವಾಮಿ ಅವರೇ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

Tags: HDKJDSKarnatakapoliticalpolitics

Related News

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !
ರಾಜಕೀಯ

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !

March 20, 2023
ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!
ರಾಜಕೀಯ

ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!

March 20, 2023
ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ
ರಾಜಕೀಯ

ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.