ಶೀಘ್ರದಲ್ಲೇ ನಾನು ಯರಗೋಳ್ ಅಣೆಕಟ್ಟೆಗೆ(Dam) ಭೇಟಿ ನೀಡುತ್ತೇನೆ. ಗಂಗಾ ಮಾತೆಗೆ ಪೂಜೆ ಸಲ್ಲಿಸಿ ಬಾಗೀನ ಸಮರ್ಪಿಸುತ್ತೇನೆ.
ಕೋಲಾರ(Kolar),ಚಿಕ್ಕಬಳ್ಳಾಪುರದಲ್ಲಿ(Chikkaballapur) ಮಳೆ ನೀರು ಉಳಿಸಿ, ಕೆರೆ-ಕಟ್ಟೆ ಅಭಿವೃದ್ಧಿಪಡಿಸಿ ಜನತೆಗೆ ಪರಿಶುದ್ಧ ನೀರು ಕೊಡುವುದು ನನ್ನ ವಾಗ್ದಾನ.
ಪಂಚರತ್ನ ಕಾರ್ಯಕ್ರಮದಲ್ಲಿ ಇದನ್ನು ಸೇರ್ಪಡೆ ಮಾಡಲಾಗುವುದು ಎಂದು ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ(JDS Leader HDK statement) ಅವರು ತಿಳಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್(Tweet) ಮಾಡಿರುವ ಅವರು, ಕೆರೆ-ಕಟ್ಟೆ, ಕಾಲುವೆ, ಗೋಕುಂಟೆಗಳಂಥ ಸಾಂಪ್ರದಾಯಿಕ ಜಲಮೂಲಗಳನ್ನು ನಾಶಗೊಳಿಸಿ ಕಾಗದದ ಮೇಲಷ್ಟೇ ಬಣ್ಣಬಣ್ಣವಾಗಿ ಕಾಣುವ, ದುಡ್ಡು ಹೊಡೆಯುವ ಯೋಜನೆಗಳು ಇನ್ನಾದರೂ ನಿಲ್ಲಲಿ. ಈ ಜಿಲ್ಲೆಗಳನ್ನು `ಶಾಶ್ವತ ಮರುಭುಮಿʼ ಮಾಡುವುದು ಬೇಡ. https://vijayatimes.com/us-house-speaker-nancy-pelosi/
ಮಳೆ ನೀರನ್ನು ಸದ್ಬಳಕೆ ಮಾಡಿಕೊಂಡರೆ ಬರಪೀಡಿತ ಜಿಲ್ಲೆಗಳ ಬವಣೆ ನೀಗುತ್ತದೆ. ಕೆಲ ವರ್ಷದಿಂದ ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಸಮೃದ್ಧ ಮಳೆ ಆಗುತ್ತಿದೆ. ಕೆರೆಗಳಲ್ಲಿ ಮಳೆನೀರು ನಿಲ್ಲದೆ, ಪಕ್ಕದ ಆಂಧ್ರ, ತಮಿಳುನಾಡು ಪಾಲಾಗುತ್ತಿದೆ.
ಗುತ್ತಿಗೆದಾರರ(Contractar) ಜೇಬು ತುಂಬಿಸಲು ರಾಷ್ಟ್ರೀಯ ಪಕ್ಷಗಳ ಜನವಿರೋಧಿ ಸರಕಾರಗಳು ಕೆಸಿ ವ್ಯಾಲಿ, ಎಚ್ಎನ್ ವ್ಯಾಲಿಯಂಥ ಕೆಟ್ಟ ಯೋಜನೆಗಳನ್ನು ರೂಪಿಸಿ ಹಣ ಲೂಟಿ ಹೊಡೆಯುತ್ತಿವೆ. ನೆರೆ ರಾಜ್ಯಗಳ ಜತೆ ನೀರಿಗಾಗಿ ಗುದ್ದಾಡುವ ಸರಕಾರಕ್ಕೆ ಮಳೆ ನೀರಿನ ಕನಿಷ್ಠ ಪ್ರಜ್ಞೆಯೇ ಇಲ್ಲ.
ಬದಲಿಗೆ ಬೆಂಗಳೂರಿನ ವಿಷತ್ಯಾಜ್ಯ ನೀರನ್ನು ಅರೆಬರೆ ಸಂಸ್ಕರಿಸಿ ಹರಿಸುತ್ತಿದೆ. ಈ ಜಿಲ್ಲೆಗಳನ್ನು ಭವಿಷ್ಯದಲ್ಲಿ ರಾಜ್ಯದ ಅತಿದೊಡ್ಡ ಅನಾರೋಗ್ಯ ಕೂಪʼವನ್ನಾಗಿ ಮಾಡಲೊರಟಿದೆ. ಈ ಜಿಲ್ಲೆಯ
`ಸ್ವಯಂ ಘೋಷಿತ ಭಗೀರಥʼರ ಹುನ್ನಾರವೂ ಇದೇ ಎಂದು ಟೀಕಿಸಿದ್ದಾರೆ.

ನನ್ನ ಸರಕಾರದ ನಂತರ ಬಿಜೆಪಿ(BJP) ಮತ್ತು ಕಾಂಗ್ರೆಸ್ ಪಕ್ಷಗಳು(Congress Party) ತಲಾ 5 ವರ್ಷ ಆಡಳಿತ ನಡೆಸಿದರೂ ಯೋಜನೆ ಪೂರ್ಣವಾಗಲಿಲ್ಲ. 3 ವರ್ಷದಿಂದ ಸರಕಾರಕ್ಕೆ ಯರಗೋಳ್ ಕಡೆ ಚಿತ್ತವೇ ಇಲ್ಲ. ಅಣೆಕಟ್ಟಿಗೆ ಪಂಪು ಜೋಡಿಸುವುದರಲ್ಲೇ ವರ್ಷಗಳನ್ನೇ ನುಂಗುತ್ತಿದೆ.
ಬರಪೀಡಿತ ಜಿಲ್ಲೆಗಳೆಂದರೆ ಬಿಜೆಪಿಗೆ ಅಪಥ್ಯ. ಇದು ನಾಚಿಕೆಗೇಡು. 2006 ಮಾ. 26ರಂದು ಬಾಗೇಪಲ್ಲಿಯ ಚಿತ್ರಾವತಿ ಅಣೆಕಟ್ಟಿಗೆ ಲೋಕಾರ್ಪಣೆ ಮಾಡಿದ ವೇಳೆ ಮಾಧ್ಯಮ ಮಿತ್ರರೊಬ್ಬರು ಯರಗೋಳ್ ಬಗ್ಗೆ ಕೇಳಿದ್ದ ಪ್ರಶ್ನೆ ನನ್ನ ಮನಸ್ಸಿಗೆ ನಾಟಿತು.
ನಾನು ತಡ ಮಾಡದೇ ಅಧಿಕಾರಿಗಳ ಜತೆ ಚರ್ಚಿಸಿ ಯರಗೋಳ್ ಯೋಜನೆಗೆ ಒಪ್ಪಿಗೆ ಕೊಟ್ಟು ಬಜೆಟ್ನಲ್ಲೇ 50 ಕೋಟಿ ರೂ. ಅನುದಾನ ಮೀಸಲಿಟ್ಟೆ. ಅಂದೇ ನಾನು ಮುಖ್ಯ ಎಂಜಿನೀಯರ್, ಸಂಬಂಧಿತ ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನು ಸ್ಥಳದಿಂದಲೇ ಸಂಪರ್ಕಿಸಿ, ತಕ್ಷಣವೇ ಈ ಯೋಜನೆ ಉದ್ಘಾಟಿಸುವಂತೆ ಆಗ್ರಹಿಸಿದ್ದೆ.
ಪಂಪ್ ಅಳವಡಿಕೆ ಬಾಕಿ ಇದೆ ಎಂದು ಅವರು ಹೇಳಿದ್ದರು. ಗುತ್ತಿಗೆದಾರರಿಗೆ ಹಣ ಬಾಕಿ ಇದೆ ಎಂಬ ಮಾಹಿತಿಯೂ ಇದೆ. ಬಿಜೆಪಿ ಸರಕಾರದ ನಿರ್ಲಕ್ಷ್ಯದ ಪರಾಕಾಷ್ಠೆಇದು ಎಂದು ಆರೋಪಿಸಿದ್ದಾರೆ.

ಪಕ್ಷ ಜನತಾ_ಜಲಧಾರೆ(Janatha Jaladhare) ಕಾರ್ಯಕ್ರಮ ಹಮ್ಮಿಕೊಂಡಿದ್ದಾಗ ಕಳೆದ ಏ.24 ರಂದು ನಾನೇ ಯರಗೋಳ್ʼಗೆ ತೆರಳಿ ಕಳಸಕ್ಕೆ ನೀರು ತುಂಬಿಕೊಂಡಿದ್ದೆ. ಆ ಕ್ಷಣ ನನ್ನ ಸಂತಸಕ್ಕೆ ಪಾರವೇ ಇರಲಿಲ್ಲ. ಬರಪೀಡಿತ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಇಂಥ ಇನ್ನಷ್ಟು ಯೋಜನೆಗಳ ಅಗತ್ಯವಿದೆ.
ಆ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತೇವೆ. ಈ ಅಣೆಕಟ್ಟೆಗೆ ನೀರೆಲ್ಲಿಂದ ಬರುತ್ತದೆ ಎಂದು ಮೂಗು ಮುರಿದಿದವರು ಈಗೊಮ್ಮೆ ನೋಡಬೇಕು. ಅಲ್ಲಿ ಕಂಗೊಳಿಸುತ್ತಿರುವ `ಜಲಸಿರಿʼ ನೋಡಲು ಎರಡು ಕಣ್ಣು ಸಾಲದು.
ಕೋಲಾರ, ಮಾಲೂರು, ಬಂಗಾರಪೇಟೆ, ಕೆಜಿಎಫ್ ಸೇರಿ 4 ತಾಲೂಕುಗಳಿಗೆ ನೀರೊದಗಿಸುವ ಈ ಯೋಜನೆಯನ್ನು ಬಿಜೆಪಿ ಸರಕಾರ(BJP Government) ಕೂಡಲೇ ಲೋಕಾರ್ಪಣೆ ಮಾಡಬೇಕು. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಯರಗೋಳ್ ಅಣೆಕಟ್ಟೆ ತುಂಬಿ ಹರಿಯುತ್ತಿರುವ ದೃಶ್ಯ ಕಂಡು ನನ್ನ ಮನದುಂಬಿ ಬಂದಿದೆ.