Bengaluru: ಅಣ್ಣಾ, ಅಣ್ಣಾ ಎಂದ ಆ ಆಚಾರವಿಲ್ಲದ ನಾಲಿಗೆ ನೀಚ ಬುದ್ದಿ ಬಿಡುವುದು ಯಾವಾಗ? ಎಂದು ಪ್ರಶ್ನೆ (JDS Tweet against DKS) ಮಾಡುವ ಮೂಲಕ ಜೆಡಿಎಸ್, ಉಪಮುಖ್ಯಮಂತ್ರಿ
ಡಿಕೆ ಶಿವಕುಮಾರ್ (D.K Shivakumar) ಅವರ ವಿರುದ್ಧ ಕೆಂಡಕಾರಿದೆ.
ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರ ಮೇಲೆ ಕಾಂಗ್ರೆಸ್ (Congress) ನಾಯಕರು ಮೈತ್ರಿ ಹಾಗೂ ಸರ್ಕಾರದ ಟೀಕೆ ಹಿನ್ನೆಲೆ ಮುಗಿಬಿದ್ದಿದ್ದಾರೆ. ಈ ಹಿಂದೆ ಕಾಂಗ್ರೆಸ್, ಜೆಡಿಎಸ್ ಜೊತೆಗಿನ
ಮೈತ್ರಿ ವೇಳೆ ಮಾಡಿರುವ ಮೋಸದ ಬಗ್ಗೆ ಜೆಡಿಎಸ್ ಸರಣಿ ಟ್ವೀಟ್ ಮಾಡಿ (JDS Tweet against DKS) ಅಸಮಾಧಾನ ಹೊರ ಹಾಕಿದೆ.
ಡಿಕೆಶಿ ಅವರ ವಿರುದ್ಧ, ಕುಮಾರಸ್ವಾಮಿ ಅವರ ಕಣ್ಣುಗಳಲ್ಲಿ ಕಣ್ಣೀರು ಬರುತ್ತದೆ. ಇಲ್ಲ ಎಂದವರು ಯಾರು? ಆದರೆ ಇನ್ನೊಬ್ಬರ ಕಣ್ಣಲ್ಲಿ ರಕ್ತ ಹರಿಸುವ ಕೆಲಸವನ್ನು ಅವರೆಂದೂ ಮಾಡಿಲ್ಲ, ಅವರ ನಾಲಿಗೆ
ಸತ್ಯದ ಕಡೆಗೆ ಹೊರಳಿದೆಯೇ ಹೊರತು, ಅಸತ್ಯದೆಡೆಗಲ್ಲ. ಅಣ್ಣಾ, ಅಣ್ಣಾ ಎಂದ ಆಚಾರವಿಲ್ಲದ ಆ ನಾಲಿಗೆ, ಇಂಥಾ ನೀಚ ಬುದ್ಧಿ ಬಿಡುವುದು ಯಾವಾಗ? ಪಿಎಚ್ಡಿ ಮಾಡೋದಕ್ಕೆ ಅವರಿಂತ ಉತ್ತಮ
ಗೈಡ್ ಬೇರೆ ಸಿಕ್ಕಾರೆಯೇ ನಿಮಗೆ? ಎಂದು ಪರೋಕ್ಷವಾಗಿ ಜೆಡಿಎಸ್ (JDS) ವಾಗ್ದಾಳಿ ನಡೆಸಿದೆ.
ಜೆಡಿಎಸ್ ಪ್ರಶ್ನೆ?
ಅಧಿಕಾರದ ಮದದಿಂದ ಅವರ ಮಿದುಳಿಗೂ ಗೆದ್ದಲು ಹಿಡಿದಿದ್ದು, ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ (Siddaramaiah) ಅವರ ಮನೆಗೆ 4 ವರ್ಷದ ಹಿಂದೆ ಸರ್ಕಾರ ಮಾಡಲು ಎಚ್ಡಿ ಕುಮಾರಸ್ವಾಮಿ
(H D Kumaraswamy) ಅವರು ಬಂದಿದ್ರಾ? ಸುಳ್ಳು ಹೇಳುವುದಕ್ಕೆ ಸಾಸಿವೆ ಕಾಳಿನಷ್ಟಾದರೂ ಸಂಕೋಚ ಬೇಡವೇ? ಎಂದು ಜೆಡಿಎಸ್ ಪ್ರಶ್ನೆ ಮಾಡಿದೆ.
135 ಸೀಟು ಗೆದ್ದಿದ್ದೇವೆ ಎನ್ನುವ ಅಹಂಕಾರದಲ್ಲಿ ಏನು ಹೇಳಿದರೂ ಜನ ನಂಬುತ್ತಾರೆಂಬ ಅಹಂಕಾರವೇ? ಆಗ ದೇವೇಗೌಡ (Devegowda) ಅವರ ಮನೆ ಅಂಗಳದಲ್ಲಿ ಅಂಗಿ ಮಡಚಿ ಮುಖ ಒಣಗಿಸಿಕೊಂಡು
ನಿಂತ ಧೀರರು ಯಾರೆಂದು ಗೊತ್ತಿಲ್ಲವೇ? ಆಮೇಲೆ ಕಾಡಿ ಬೇಡಿ ದೇವೇಗೌಡರ ಪದತಲಕ್ಕೆ ಬಿದ್ದವರ ಪುರಾಣ ಬಿಚ್ಚಿಡಬೇಕೆ? ಎಂದು ಎಚ್ಚರಿಕೆ ನೀಡಿದೆ.
ಕನಕಪುರ (Kanakapura) ಸುತ್ತಮುತ್ತ ಅದೇ ಮಹಾನುಭಾವರಿಂದ ಒಕ್ಕಲೆದ್ದವರು ಎಷ್ಟೋ ಜನ. ಮಾತೆತ್ತಿದರೆ ಜಾತಿಗಳನ್ನು ಎಳೆದು ತರುತ್ತೀರಿ. ಅವರೆಲ್ಲ ಯಾವ ಜಾತಿಯವರು? ಅಧಿಕಾರಕ್ಕೊಂದು
ಜಾತಿ, ಕೊಳ್ಳೆ ಹೊಡೆಯುವುದಕ್ಕೊಂದು ಜಾತಿಯೇ, ಅಲ್ಲಿ ಹರಿದಿದ್ದು ರಕ್ತ ಕಣ್ಣೀರು, ಅವರ ಉಸಿರು ತಟ್ಟಿದ್ದಕ್ಕೇ ತಿಹಾರು, ಕರ್ಮಕ್ಕೆ ತಕ್ಕಂತೆಯೇ ಫಲ, ಶ್ಲೋಕಗಳನ್ನು ಶೋಕಿಗೆ ಬಳಸಿಕೊಳ್ಳುವ ವ್ಯಕ್ತಿಗೆ
ಇಷ್ಟು ಸಾಮಾನ್ಯ ಜ್ಞಾನವೂ ಇಲ್ಲವೇ? ಎಂದು ಜೆಡಿಎಸ್ ಕೇಳಿದೆ.
ಇದನ್ನು ಓದಿ: ಬೆಂಗಳೂರು ನಗರ ಫುಲ್ ಟ್ರಾಫಿಕ್ ಜಾಂ: ಸಂಚಾರ ದಟ್ಟಣೆ ಆಗದಂತೆ ಹೊಸ ಹೊಸ ಮಾರ್ಗಗಳ ಅನುಷ್ಠಾನ
- ಭವ್ಯಶ್ರೀ ಆರ್.ಜೆ