ಇಂದು ಬಸವರಾಜ್‌ ಬೊಮ್ಮಾಯಿ ದೆಹಲಿ ಪ್ರವಾಸ, ಸಂಪುಟ ವಿಸ್ತರಣೆ ಬಗ್ಗೆ ಮಾತುಕತೆ ?

The Chief Minister of Karnataka, Shri Basavaraj Bommai calling on the Union Minister for Defence, Shri Rajnath Singh, in New Delhi on July 30, 2021.

ಬೆಂಗಳೂರು ಸೆ 7 : ಸಿಎಂ ಬಸವರಾಜ್‌ ಬೊಮ್ಮಾಯಿ ಇಂದು ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ಸಂಪುಟ ವಿಸ್ತರಣೆ ಕುರಿತು ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಬಸವರಾಜ್‌ ಬೊಮ್ಮಾಯಿ ಅವರು ಇಂದು 11.30ಕ್ಕೆ ಬೆಂಗಳೂರಿನಿಂದ ದೆಹಲಿಗೆ ತೆರಳಲಿದ್ದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ, ನಡ್ಡಾ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ, ಇಂದು ದೆಹಲಿಯಲ್ಲೇ ಉಳಿದುಕೊಳ್ಳಲಿರುವ ಅವರು ಸಂಪುಟ ವಿಸ್ತರಣೆ ಬಗ್ಗೆ ಮಾತುಕತೆ ನಡೆಸಲಿದ್ದಾರೆ. ರಾಜ್ಯ ಸಚಿವ ಸಂಪುಟದಲ್ಲಿ ಖಾಲಿಯಿರುವ 4 ಸ್ಥಾನಗಳನ್ನು ಭರ್ತಿ  ಮಾಡುವ ಬಗ್ಗೆ ಮಾತುಕತೆ ನಡೆಸಲಿದ್ದಾರೆ.

ಈಗಾಗಲೇ ಈ ಸ್ಥಾನಗಳಿಗೆ  ಪೂರ್ಣಿಮಾ ಶ್ರೀನಿವಾಸ್, ಸಿ.ಪಿ ಯೋಗೀಶ್ವರ್, ಎಂಪಿ ಕುಮಾರಸ್ವಾಮಿ, ಎಂಪಿ ರೇಣುಕಾಚಾರ್ಯ, ರಾಜೂಗೌಡ, ಬಾಲಚಂದ್ರ ಜಾರಕಿಹೊಳಿ ಸೇರಿದಂತೆ ಹಲವರು ಲಾಭಿ ನಡೆಸುತ್ತಿದ್ದು, ಅಂತಿಮವಾಗಿ ಯಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗಲಿದೆ ಎಂದು ಕಾದು ನೋಡಬೇಕಿದೆ. ಸಚಿವ ಸಂಪುಟ ಹೊರತುಪಡಿಸಿ ರಾಜ್ಯಕ್ಕೆ ಸಂಬಂಧಿಸಿದ ಬೇರೆ ವಿಷಯಗಳ ಬಗ್ಗೆ ಕೂಡ ಸಿಎಂ ಜೆ.ಪಿ. ನಡ್ಡಾ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ.

Exit mobile version