ಇತ್ತೀಚೆಗಷ್ಟೇ ಬಿಡುಗಡೆಯಾದ ತರಗೆಲೆ ಸಂಸಾರ..' ಎನ್ನುವ ಕೈಲಾಷ್ ಖೇರ್ ಅವರ ಹಾಡು ಜನಪ್ರಿಯವಾಗುವುದರೊಂದಿಗೆ
ಕಾಲಚಕ್ರ’ ಚಿತ್ರ ಸಿನಿಪ್ರಿಯರ ಗಮನ ಸೆಳೆದಿತ್ತು. ಗುರುಕಿರಣ್ ಸಂಗೀತ ನಿರ್ದೇಶನದ ಗೀತೆಗಳಾಗಲೀ ಅಥವಾ ಅದಕ್ಕೂ ಮೊದಲು ಕಿಚ್ಚ ಸುದೀಪ್ ಬಿಡುಗಡೆಗೊಳಿಸಿದ ಟೀಸರ್ ಆಗಲೀ ವಸಿಷ್ಠ ಸಿಂಹ ನಟನೆಯ ಚಿತ್ರದ ಬಗ್ಗೆ ವಿಶೇಷ ನಿರೀಕ್ಷೆ ಮೂಡಿಸಿತ್ತು. ಅದು ಸತ್ಯ ಎನ್ನುವುದನ್ನು ಸಾರುವಂತೆ ಇದೀಗ ಚಿತ್ರದ ಮಲಯಾಳಂ ರಿಮೇಕ್ ಹಕ್ಕು ಬಿಡುಗಡೆಗೂ ಮುನ್ನವೇ ಮಾರಾಟವಾಗಿರುವುದು ತಿಳಿದು ಬಂದಿದೆ.
ಇಂದು ವಸಿಷ್ಠ ಸಿಂಹ ಅವರ ಜನ್ಮದಿನ. ಬಹುಶಃ ಇಂಥ ಖುಷಿಯ ವಿಚಾರವನ್ನು ಹಂಚಿಕೊಳ್ಳಲು ಇಷ್ಟು ಸರಿಯಾದ ಸಮಯ ಬೇರೆ ಸಿಗದು. ಮಲಯಾಳಂ ಚಿತ್ರರಂಗದ ಖ್ಯಾತ ನಿರ್ಮಾಪಕರೊಬ್ಬರು ‘ಕಾಲಚಕ್ರ’ ಚಿತ್ರದ ಕಥೆ ಇಷ್ಟಪಟ್ಟು ಕೇರಳದಲ್ಲಿ ಚಿತ್ರ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಹೊರಬರಬೇಕಿದೆ.
ಕನ್ನಡದಲ್ಲಿ ಆಗಲೇ ಹೇಳಿದಂತೆ ವಸಿಷ್ಠ ಸಿಂಹ ನಾಲ್ಕು ವಿಭಿನ್ನ ಪಾತ್ರಗಳಲ್ಲಿ ಅಭಿನಯಿಸಿರುವ ಈ ಚಿತ್ರದ ಟೀಸರ್ ಹಾಗೂ ಹಾಡುಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸದ್ಯದಲ್ಲೇ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.
ರಶ್ಮಿ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ‘ಕಾಲಚಕ್ರ’ ಚಿತ್ರಕ್ಕೆ ಈಗಾಗಲೇ ಸಿನಿಮಾರಂಗದ ಗಣ್ಯುರು ಶುಭಕೋರಿದ್ದಾರೆ.
`ನಾನಿ’ ಎನ್ನುವ ಚಿತ್ರದ ಮೂಲಕ ಪ್ರೇಕ್ಷಕರ ಮೆಚ್ಚುಗೆ ಪಡೆದ ಸುಮಂತ್ ಕ್ರಾಂತಿ ಅವರದೇ ನಿರ್ಮಾಣ, ರಚನೆ ಹಾಗೂ ನಿರ್ದೇಶನದ ಈ ಚಿತ್ರ
ಸೈಕಲಾಜಿಕಲ್ ಕಥಾ ಹಂದರ ಹೊಂದಿದೆ.
ಗುರುಕಿರಣ್ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳನ್ನು ಚೇತನ್ ಕುಮಾರ್, ಕವಿರಾಜ್, ಸಂತೋಷ್ ನಾಯಕ್ ಬರೆದಿದ್ದಾರೆ. ಸಂಚಿತ್ ಹೆಗ್ಡೆ, ಕೈಲಾಷ್ ಖೇರ್, ಪಂಚಮ್ ಜೀವ ಹಾಡಿದ್ದಾರೆ.
ಎಲ್ ಎಂ ಸೂರಿ ಛಾಯಾಗ್ರಹಣ, ಸೌಂದರ್ ರಾಜ್ ಸಂಕಲನ, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ ಹಾಗೂ ಮುರಳಿ ಅವರ ನೃತ್ಯ ನಿರ್ದೇಶನವಿರುವ ಈ ಚಿತ್ರಕ್ಕೆ ಬಿ.ಎ.ಮಧು ಸಂಭಾಷಣೆ ಬರೆದಿದ್ದಾರೆ.
ವಸಿಷ್ಠ ಎನ್ ಸಿಂಹ, ರಕ್ಷ, ದೀಪಕ್ ಶೆಟ್ಟಿ, ಸುಚೇಂದ್ರ ಪ್ರಸಾದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.