• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕಲಾಪ ಕೋಲಾಹಲ: ವಿಧಾನಪರಿಷತ್ ಕಾರ್ಯದರ್ಶಿಗೆ ಶೋಕಾಸ್ ನೋಟಿಸ್

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ
ಕಲಾಪ ಕೋಲಾಹಲ: ವಿಧಾನಪರಿಷತ್ ಕಾರ್ಯದರ್ಶಿಗೆ ಶೋಕಾಸ್ ನೋಟಿಸ್
0
SHARES
0
VIEWS
Share on FacebookShare on Twitter

ಬೆಂಗಳೂರು, ಡಿ. 18: ವಿಧಾನಪರಿಷತ್ ಕಲಾಪದಲ್ಲಿ ಡಿ. 15 ರಂದು ಹಿಂದೆಂದೂ ನಡೆಯದಂತಹ ದೊಡ್ಡ ಗಲಾಟೆ ನಡೆದು ಹೋಗಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಚಿಂತಕರ ಚಾವಡಿ ಎಂದೆನಿಸಿಕೊಂಡ ವಿಧಾನಪರಿಷತ್‌ನಲ್ಲಿ ಸದಸ್ಯರು ದಡ್ಡರಂತೆ ವರ್ತಿಸಿದ ರೀತಿ ನಿಜಕ್ಕೂ ನಾಚಿಕೆಗೇಡಿನ ಸಂಗತಿ. ಸಭಾಪತಿ ಪೀಠಕ್ಕೆ ಮರ್ಯಾದೆ ಇಲ್ಲದ ರೀತಿಯಲ್ಲಿ ವರ್ತನೆ ಮಾಡಿದ್ದನ್ನು ಇಡೀ ರಾಜ್ಯದ ಜನತೆ ನೋಡಿದ್ದಾರೆ. ಅಷ್ಟೇ ಅಲ್ಲ ಆ ಘಟನೆ ಸಂಬಂಧ ಜನಸಾಮಾನ್ಯರು ಕೂಡ ಅಸಮಾಧಾನ ವ್ಯಕ್ತಪಡಿಸಿದ್ದರು.

ಇದೀಗ ಈ ಗಲಭೆಗೆ ಸಂಬಂಧಪಟ್ಟಂತೆ ವಿಧಾನಪರಿಷತ್ ಕಾರ್ಯದರ್ಶಿಗೆ ಶೋಕಾಸ್ ನೋಟಿಸ್ ನೀಡಿದ್ದಾರೆ ವಿಧಾನಪರಿಷತ್ ಸಭಾಪತಿ ಪ್ರತಾಪ್‌ಚಂದ್ರ ಶೆಟ್ಟಿ. ಈ ನೋಟೀಸ್‌ನಲ್ಲಿ ಹಲವಾರು ಪ್ರಶ್ನೆಗಳನ್ನು ವಿಧಾನಪರಿಷತ್ ಕಾರ್ಯದರ್ಶಿಗೆ ಕೇಳಿದ್ದಾರೆ. ಅಲ್ಲದೆ ಈ ಪತ್ರದ ಮೂಲಕ ನೀವು 48 ಘಂಟೆಯೊಳಗೆ ಉತ್ತರ ಕೊಡಬೇಕು ಎಂದೂ ಹೇಳಲಾಗಿದೆ.

ಪತ್ರದಲ್ಲಿ ಡಿ.15 ರಂದು ಪರಿಷತ್ ಕಲಾಪದಲ್ಲಿ ಗಲಭೆ ಆಗಿದ್ದು ಏಕೆ..? ಸಭಾಪತಿಗಳು ಬಂದು ಸ್ಥಾನ ಅಲಂಕರಿಸುವ ಮುನ್ನ ಸದನದ ಜವಾಬ್ದಾರಿ ನಿಮ್ಮದಾಗಿರುತ್ತೆ. ಸದನದಲ್ಲಿ ಕೋರಂ ಆಗುವವರೆಗೂ ಸಭಾಪತಿಗಳು ಬರುವುದಿಲ್ಲ. ಸಭಾಪತಿಗಳ ಆಸನದಲ್ಲಿ ಬೆಲ್ ಆಗುವಾಗ ಯಾರು ಕುಳಿತುಕೊಂಡಿರಬಾರದು. ಇದ್ಯಾವುದೂ ನಿಮ್ಮ ಗಮನಕ್ಕೆ ಬರಲಿಲ್ಲವೇ..? ಅಥವಾ ಇದು ನಿಮಗೆ ಗೊತ್ತಿಲ್ಲವೇ..? ವಿಧಾನಪರಿಷತ್ ಕಲಾಪದ ಲೈವ್ ದೃಶ್ಯಗಳನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ನೀವು ಕೂಡ ಉಪ-ಸಭಾಪತಿಗಳು ಬಂದು ಸ್ಥಾನದಲ್ಲಿ ಕುಳಿತಾಗ ಅನುವು ಮಾಡಿಕೊಟ್ಟಿರಬಾರದೇಕೆ ಎಂಬ ಅನುಮಾನ ಇದೆ. ನಿಮಗೆ ಎಲ್ಲಾ ಗಮನಕ್ಕೆ ಬಂದಿದ್ದರೂ ಸುಮ್ಮನಿದ್ದಿದ್ದು ಏಕೆ..? ಎಂದು ಪ್ರಶ್ನೆ ಮಾಡಿದ್ದಾರೆ.‌

ಅಲ್ಲದೆ ಶತಮಾನದ ಇತಿಹಾಸವುಳ್ಳ ವಿಧಾನ ಪರಿಷತ್ತಿನ ಗೌರವ, ಸಂಪ್ರದಾಯ ಹಾಗೂ ಪರಂಪರೆಗೆ ಅಂದು ಸದನದಲ್ಲಿ ನಡೆದ ಘಟನೆಗಳಿಂದ ಧಕ್ಕೆಯಾಗಿರುತ್ತದೆ ಹಾಗಾಗಿ ಈ ಬಗ್ಗೆ ಉತ್ತರ ನೀಡಿ ಎಂದು ಹೇಳಿದ್ದಾರೆ.

Related News

ತಮಿಳುನಾಡಿಗೆ ನೀರು ಬಿಡಬಾರದು ಎಂಬ ಬೇಡಿಕೆಯು ನಿರಂಕುಶ ಮತ್ತು ಸ್ವಾರ್ಥಿಯಾಗಿದೆ: ನಟ ಚೇತನ್
ದೇಶ-ವಿದೇಶ

ತಮಿಳುನಾಡಿಗೆ ನೀರು ಬಿಡಬಾರದು ಎಂಬ ಬೇಡಿಕೆಯು ನಿರಂಕುಶ ಮತ್ತು ಸ್ವಾರ್ಥಿಯಾಗಿದೆ: ನಟ ಚೇತನ್

September 27, 2023
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗೊಂದಲ ಸೃಷ್ಟಿಸಿದ ಡ್ರೋನ್ ಹಾರಾಟ: ತನಿಖೆ ಶುರು
ಪ್ರಮುಖ ಸುದ್ದಿ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗೊಂದಲ ಸೃಷ್ಟಿಸಿದ ಡ್ರೋನ್ ಹಾರಾಟ: ತನಿಖೆ ಶುರು

September 27, 2023
ರಾಜ್ಯದ ವಿದ್ಯುತ್ ಉತ್ಪಾದನೆ ಕುಸಿತ ಕಂಡಿರುವುದು ಏಕೆ ? ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ
ಪ್ರಮುಖ ಸುದ್ದಿ

ಕಾವೇರಿ ರಾಜಿ ಇಲ್ಲ: CWRC ಆದೇಶವನ್ನ ಚಾಲೆಂಜ್ ಮಾಡುತ್ತೇವೆ, ಸಿದ್ದರಾಮಯ್ಯ ಖಡಕ್ ಮಾತು

September 27, 2023
ಕಟುಕರಿಗೆ ಗೋವುಗಳನ್ನು ಮಾರುತ್ತಿರುವ ಇಸ್ಕಾನ್: ಬಿಜೆಪಿ ಸಂಸದೆ ಮೇನಕಾ ಗಾಂಧಿ ಗಂಬೀರ ಆರೋಪ
ದೇಶ-ವಿದೇಶ

ಕಟುಕರಿಗೆ ಗೋವುಗಳನ್ನು ಮಾರುತ್ತಿರುವ ಇಸ್ಕಾನ್: ಬಿಜೆಪಿ ಸಂಸದೆ ಮೇನಕಾ ಗಾಂಧಿ ಗಂಬೀರ ಆರೋಪ

September 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.