• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕಲಾಪ ಕೋಲಾಹಲ: ವಿಧಾನಪರಿಷತ್ ಕಾರ್ಯದರ್ಶಿಗೆ ಶೋಕಾಸ್ ನೋಟಿಸ್

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ
ಕಲಾಪ ಕೋಲಾಹಲ: ವಿಧಾನಪರಿಷತ್ ಕಾರ್ಯದರ್ಶಿಗೆ ಶೋಕಾಸ್ ನೋಟಿಸ್
0
SHARES
0
VIEWS
Share on FacebookShare on Twitter

ಬೆಂಗಳೂರು, ಡಿ. 18: ವಿಧಾನಪರಿಷತ್ ಕಲಾಪದಲ್ಲಿ ಡಿ. 15 ರಂದು ಹಿಂದೆಂದೂ ನಡೆಯದಂತಹ ದೊಡ್ಡ ಗಲಾಟೆ ನಡೆದು ಹೋಗಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಚಿಂತಕರ ಚಾವಡಿ ಎಂದೆನಿಸಿಕೊಂಡ ವಿಧಾನಪರಿಷತ್‌ನಲ್ಲಿ ಸದಸ್ಯರು ದಡ್ಡರಂತೆ ವರ್ತಿಸಿದ ರೀತಿ ನಿಜಕ್ಕೂ ನಾಚಿಕೆಗೇಡಿನ ಸಂಗತಿ. ಸಭಾಪತಿ ಪೀಠಕ್ಕೆ ಮರ್ಯಾದೆ ಇಲ್ಲದ ರೀತಿಯಲ್ಲಿ ವರ್ತನೆ ಮಾಡಿದ್ದನ್ನು ಇಡೀ ರಾಜ್ಯದ ಜನತೆ ನೋಡಿದ್ದಾರೆ. ಅಷ್ಟೇ ಅಲ್ಲ ಆ ಘಟನೆ ಸಂಬಂಧ ಜನಸಾಮಾನ್ಯರು ಕೂಡ ಅಸಮಾಧಾನ ವ್ಯಕ್ತಪಡಿಸಿದ್ದರು.

ಇದೀಗ ಈ ಗಲಭೆಗೆ ಸಂಬಂಧಪಟ್ಟಂತೆ ವಿಧಾನಪರಿಷತ್ ಕಾರ್ಯದರ್ಶಿಗೆ ಶೋಕಾಸ್ ನೋಟಿಸ್ ನೀಡಿದ್ದಾರೆ ವಿಧಾನಪರಿಷತ್ ಸಭಾಪತಿ ಪ್ರತಾಪ್‌ಚಂದ್ರ ಶೆಟ್ಟಿ. ಈ ನೋಟೀಸ್‌ನಲ್ಲಿ ಹಲವಾರು ಪ್ರಶ್ನೆಗಳನ್ನು ವಿಧಾನಪರಿಷತ್ ಕಾರ್ಯದರ್ಶಿಗೆ ಕೇಳಿದ್ದಾರೆ. ಅಲ್ಲದೆ ಈ ಪತ್ರದ ಮೂಲಕ ನೀವು 48 ಘಂಟೆಯೊಳಗೆ ಉತ್ತರ ಕೊಡಬೇಕು ಎಂದೂ ಹೇಳಲಾಗಿದೆ.

ಪತ್ರದಲ್ಲಿ ಡಿ.15 ರಂದು ಪರಿಷತ್ ಕಲಾಪದಲ್ಲಿ ಗಲಭೆ ಆಗಿದ್ದು ಏಕೆ..? ಸಭಾಪತಿಗಳು ಬಂದು ಸ್ಥಾನ ಅಲಂಕರಿಸುವ ಮುನ್ನ ಸದನದ ಜವಾಬ್ದಾರಿ ನಿಮ್ಮದಾಗಿರುತ್ತೆ. ಸದನದಲ್ಲಿ ಕೋರಂ ಆಗುವವರೆಗೂ ಸಭಾಪತಿಗಳು ಬರುವುದಿಲ್ಲ. ಸಭಾಪತಿಗಳ ಆಸನದಲ್ಲಿ ಬೆಲ್ ಆಗುವಾಗ ಯಾರು ಕುಳಿತುಕೊಂಡಿರಬಾರದು. ಇದ್ಯಾವುದೂ ನಿಮ್ಮ ಗಮನಕ್ಕೆ ಬರಲಿಲ್ಲವೇ..? ಅಥವಾ ಇದು ನಿಮಗೆ ಗೊತ್ತಿಲ್ಲವೇ..? ವಿಧಾನಪರಿಷತ್ ಕಲಾಪದ ಲೈವ್ ದೃಶ್ಯಗಳನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ನೀವು ಕೂಡ ಉಪ-ಸಭಾಪತಿಗಳು ಬಂದು ಸ್ಥಾನದಲ್ಲಿ ಕುಳಿತಾಗ ಅನುವು ಮಾಡಿಕೊಟ್ಟಿರಬಾರದೇಕೆ ಎಂಬ ಅನುಮಾನ ಇದೆ. ನಿಮಗೆ ಎಲ್ಲಾ ಗಮನಕ್ಕೆ ಬಂದಿದ್ದರೂ ಸುಮ್ಮನಿದ್ದಿದ್ದು ಏಕೆ..? ಎಂದು ಪ್ರಶ್ನೆ ಮಾಡಿದ್ದಾರೆ.‌

ಅಲ್ಲದೆ ಶತಮಾನದ ಇತಿಹಾಸವುಳ್ಳ ವಿಧಾನ ಪರಿಷತ್ತಿನ ಗೌರವ, ಸಂಪ್ರದಾಯ ಹಾಗೂ ಪರಂಪರೆಗೆ ಅಂದು ಸದನದಲ್ಲಿ ನಡೆದ ಘಟನೆಗಳಿಂದ ಧಕ್ಕೆಯಾಗಿರುತ್ತದೆ ಹಾಗಾಗಿ ಈ ಬಗ್ಗೆ ಉತ್ತರ ನೀಡಿ ಎಂದು ಹೇಳಿದ್ದಾರೆ.

Related News

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.
ಆರೋಗ್ಯ

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.

March 29, 2023
224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ
ರಾಜಕೀಯ

224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ

March 29, 2023
ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ
ರಾಜಕೀಯ

ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ

March 29, 2023
ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ
ರಾಜಕೀಯ

ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ

March 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.