ಕನ್ನಡ ಸಾಹಿತ್ಯ ಪ್ರೇಮಿಗಳಿಗೆ ಸಿಹಿ ಸುದ್ದಿ!

ಬೆಂಗಳೂರು, ನ. 25: ಕನ್ನಡ ಸಾಹಿತ್ಯ ಅಭಿಮಾನಿಗಳಿಗೆ ಸಿಹಿ ಸುದ್ದಿ ದೊರೆತಿದ್ದು, 86ನೇ ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ನಿಗದಿಯಾಗಿದೆ. ಈ ಬಾರಿಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಾವೇರಿಯಲ್ಲಿ ನಡೆಸಲು ಸಿದ್ಧತೆ ನಡೆಸಿದ್ದು, 2021ರ ಫೆಬ್ರವರಿ 26, 27 ಮತ್ತು 28ರಂದು ದಿನಾಂಕ ನಿಗದಿಪಡಿಸಲಾಗಿದೆ. ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ. ಮನು ಬಳಗಾರ್‌ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಮನು ಬಳಗಾರ್‌, ‘ಕೊರೋನಾ ಸೋಂಕು ಇಳಿಮುಖವಾಗುತ್ತಿದ್ದು, ಮಾರ್ಗಸೂಚಿಗಳನ್ನು ಸಡಿಲಗೊಳಿಸಿ ಅಕ್ಷರ ಜಾತ್ರೆಗೆ ಅನುವು ಮಾಡಿಕೊಡುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗುತ್ತದೆ ಎಂದರು.  

Exit mobile version