ಕಾಂತಾರ ಪಾರ್ಟ್ 2 ನಲ್ಲಿ ತಲೈವಾ ರಜನಿಕಾಂತ್ ಎಂಟ್ರಿ? ; ಇಲ್ಲಿದೆ ನೋಡಿ ಈ ಪ್ರಶ್ನೆಗೆ ಉತ್ತರ!

Bengaluru : ಕಾಂತಾರ ಭಾಗ 2(Kanthara 2) ಚಿತ್ರದ ಕೆಲಸಗಳು ಈಗಾಗಲೇ ಪ್ರಾರಂಭಗೊಂಡಿದೆ ಎಂಬ ಸುದ್ದಿಯ ಬೆನ್ನಲ್ಲೇ ಇದೀಗ ತಮಿಳು ಚಿತ್ರರಂಗದ ದಿಗ್ಗಜ ನಟ ಸೂಪರ್‌ಸ್ಟಾರ್‌ ರಜನಿಕಾಂತ್‌(Rajinikanth) ಅವರು ರಿಷಬ್‌ ಶೆಟ್ಟಿ (Rishab Shetty) ಅವರ ಕಾಂತಾರ ಭಾಗ 2 ರ ಭಾಗವಾಗಲಿದ್ದಾರೆ ಎಂಬ ವದಂತಿಯೊಂದು (Kantara2 Rajinikanth entry rumor) ಸಾಮಾಜಿಕ ಜಾಲತಾಣದಲ್ಲಿ ಭಾರಿ ಹರಿದಾಡಿದೆ!

ಕಳೆದ ವರ್ಷ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದ್ದಲ್ಲದೇ ಅತ್ಯುತ್ತಮ ಗಳಿಕೆಯನ್ನು ಕಂಡ ಯಶಸ್ವಿ ಸಿನಿಮಾ ಎಂದರೆ ಅದು ಕನ್ನಡ ಚಿತ್ರರಂಗದ ಸ್ಟಾರ್‌ ನಿರ್ದೇಶಕ, ನಟ ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶಿಸಿದ ಕಾಂತಾರ ಭಾಗ 1!

(Kanthara 1)ಕಾಂತಾರ ಊಹೆಗೂ ಮೀರಿದ ಯಶಸ್ಸನ್ನು ಕಂಡಿದ್ದು ಮಾತ್ರವಲ್ಲ, ದೇಶಾದ್ಯಂತ ಸದ್ದು ಮಾಡಿದ ಚಿತ್ರಗಳ ಸಾಲಿನಲ್ಲಿ ಮೊದಲ ಸ್ಥಾನವನ್ನು ಕಬಳಿಸಿಕೊಂಡ ಚಿತ್ರವಾಗಿದೆ.

ಭಾರತೀಯ ಚಿತ್ರರಂಗದಲ್ಲಿ ವಿಶೇಷ ದಾಖಲೆಯನ್ನು ಬರೆದ ಚಿತ್ರ ಎಂಬ ಹೆಗ್ಗಳಿಕೆ ಕಾಂತಾರ ಚಿತ್ರ ಪಾತ್ರವಾಗಿದೆ.

ಇದನ್ನೂ ಓದಿ: ಜಾಮೀನಿನ ಮೇಲೆ ಹೊರಬರುತ್ತಿದ್ದಂತೆ ಪೃಥ್ವಿ ಶಾ ವಿರುದ್ಧ ಕೇಸ್‌ ದಾಖಲಿಸಿದ ಸಪ್ನಾ ಗಿಲ್!

ಮೊದ ಮೊದಲು ಕನ್ನಡ ಭಾಷೆಯಲ್ಲಿ ಮಾತ್ರ ಏಕಕಾಲಕ್ಕೆ ಬಿಡುಗಡೆಗೊಂಡ ಕಾಂತಾರ ಚಿತ್ರ, ತದನಂತರ ಅನ್ಯ ಭಾಷೆಯ ಸಿನಿಪ್ರೀಯರ ಒತ್ತಾಯದ ಮೇರೆಗೆ ಹಿಂದಿ, ತಮಿಳು, ತೆಲುಗು ಭಾಷೆಗಳಲ್ಲಿ ಡಬ್‌ ಆಗಿ ಬಿಡುಗಡೆಯಾಯಿತು.

ಡಬ್‌ ಆದರೂ ಕೂಡ ಜನರನ್ನು ಇದನ್ನು ಹೆಚ್ಚಿನ ಸಂಖ್ಯೆಯಲ್ಲಿ ಒಪ್ಪಿ, ಅಪ್ಪಿಕೊಂಡರು! ಕೇವಲ ಹಿಂದಿ ಭಾಷೆಯಲ್ಲಿ ನೂರು ಕೋಟಿ ಕಲೆಕ್ಷನ್ ಅನ್ನು ಚಿತ್ರ ಕಂಡಿತು.

ಈ ಮೂಲಕ ಈ ಹಿಂದೆ ದಾಖಲಾಗಿದ್ದ ಹಲವು ಸಿನಿಮಾಗಳ ದಾಖಲೆಯನ್ನು ಹಿಂದಿಕ್ಕಿ ಮೊದಲ ಸ್ಥಾನವನ್ನು ಅಲಂಕರಿಸಿತು.

ಇದರೊಟ್ಟಿಗೆ ಕರ್ನಾಟಕ(Karnataka) ರಾಜ್ಯದಲ್ಲಿ ಕೆಜಿಎಫ್ ಚಾಪ್ಟರ್ 2(KGF Chapter 2) ಚಿತ್ರದ ಬಳಿಕ ಅತಿಹೆಚ್ಚು ಗಳಿಕೆಯನ್ನು ಕಂಡ ಚಿತ್ರ ಎಂಬ ದಾಖಲೆಯನ್ನು ಕೂಡ ತನ್ನದಾಗಿಸಿಕೊಂಡಿತು.

ಸದ್ಯ ಕಾಂತಾರ ಭಾಗ ೧ ರ ಯಶಸ್ಸಿನ ಬೆನ್ನಲ್ಲೇ ಇದೀಗ ಕಾಂತಾರ ಭಾಗ ೨ರ ಚಿತ್ರದ ಬಗ್ಗೆ ಅಧಿಕೃತ ಮಾಹಿತಿ ಪ್ರಕಟವಾಗಿದ್ದು,

ಈ ಬಗ್ಗೆ ರಿಷಬ್‌ ಶೆಟ್ಟಿ ಮುಂದಿನ ವರ್ಷ 2024 ರಂದು ಕಾಂತಾರ ಭಾಗ 2 ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ವೀಕ್ಷಿಸಲು (Kantara2 Rajinikanth entry rumor) ತಯಾರಾಗಿ ಎಂದು ಹೇಳಿದರು.

ಸದ್ಯ ಕಾಂತಾರ ಭಾಗ ೨ರ ಚಿತ್ರೀಕರಣ ಸೇರಿದಂತೆ ಚಿತ್ರದ ಪೂರ್ವ ಕೆಲಸಗಳು ಈಗಾಗಲೇ ಪ್ರಾರಂಭವಾಗಿದೆ ಎನ್ನಲಾಗಿದೆ,

ಈ ಮಧ್ಯೆ ಕಾಂತಾರ ಚಿತ್ರಕ್ಕೆ ದೊಡ್ಡ ದೊಡ್ಡ ಕಲಾವಿದರು ಸೇರುವ ನಿರೀಕ್ಷೆಯಿದೆ ಎಂಬುದು ದಿನೇ ದಿನೇ ಸಾಮಾಜಿಕ ಜಾಲತಾಣದಲ್ಲಿ(Social Media) ಚರ್ಚೆಯಾಗುತ್ತಿದೆ.

ಈ ಪೈಕಿ ಇದೀಗ ತಮಿಳು(Tamil) ಚಿತ್ರರಂಗದ ಸೂಪರ್‌ಸ್ಟಾರ್‌ ರಜನಿಕಾಂತ್‌ ಅವರ ಹೆಸರು ಮುನ್ನೆಲೆಗೆ ಬಂದಿದೆ.

ಹೌದು, ಕಾಂತಾರ ಭಾಗ 2ರ ಚಿತ್ರದಲ್ಲಿ ರಜನಿಕಾಂತ್‌ ಅವರು ವಿಶೇಷ ಪಾತ್ರದಲ್ಲಿ ಅದು ಅತಿ ಮುಖ್ಯ ಪಾತ್ರವೊಂದನ್ನು ನಿಭಾಯಿಸಲಿದ್ದಾರೆ.

ಈ ಮೂಲಕ ಕನ್ನಡ ಚಿತ್ರರಂಗಕ್ಕೆ ಮತ್ತೊಮ್ಮೆ ಎಂಟ್ರಿ ಕೊಡಲಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿವೆ.

ಈ ಬಗ್ಗೆ ಚಿತ್ರತಂಡ ಕೂಡ ರಜನಿಕಾಂತ್ ಅವರನ್ನು ಸಂಪರ್ಕಿಸಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ!

ಆದ್ರೆ, ಈ ಬಗ್ಗೆ ರಿಷಬ್‌ ಶೆಟ್ಟಿ ತಂಡದಿಂದ ಯಾವುದೇ ಅಧಿಕೃತ ಮಾಹಿತಿ ದೊರೆತಿಲ್ಲ. ಹರಿದಾಡುತ್ತಿರುವ ವದಂತಿಗಳ ಬಗ್ಗೆ ಖಚಿತಪಡಿಸುವ ಬಗ್ಗೆ ಚಿತ್ರತಂಡ ಹೆಚ್ಚು ಗಮನಹರಿಸಿಲ್ಲ ಎಂಬುದು ಸ್ಪಷ್ಟವಾಗಿದೆ.

Exit mobile version