Bengaluru: ಕರ್ನಾಟಕ ವಿಧಾನ ಮಂಡಲದ ಬಜೆಟ್ (Kar Budget Session 2024) ಅಧಿವೇಶನದ ಆರಂಭದ ದಿನ ಜಂಟಿ ಅಧಿವೇಶನ ಉದ್ದೇಶಿಸಿ ಸೋಮವಾರ
ಮಾತನಾಡಿದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ (Thawarchand Gehlot) ಅವರು ದೇಶಕ್ಕೆ ಕರ್ನಾಟಕ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳು ಮಾದರಿಯಾಗಿವೆ
ಎಂದು (Kar Budget Session 2024) ಬಣ್ಣಿಸಿದ್ದಾರೆ.
ಕರ್ನಾಟಕ (Karntaka) ಮಾದರಿಯನ್ನು ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೇ ಅನುಸರಿಸುತ್ತಾ ಬಂದಿದೆ. ಸರ್ಕಾರವು ನಡೆ ನುಡಿಗಳನ್ನು ಒಂದಾಗಿಸಿಕೊಂಡು ಕೆಲಸ
ಮಾಡುತ್ತಿದೆ. ಹೆಚ್ಚುತ್ತಿರುವ ಆರ್ಥಿಕ ಅಸಮಾನತೆಯಿಂದಾಗಿ ಬಡವರಿಗೆ ಸರ್ಕಾರದ ಪಂಚ ಗ್ಯಾರಂಟಿ (Guarantee) ಯೋಜನೆಗಳು ಸಾಂತ್ವನವನ್ನು ಒದಗಿಸಿವೆ ಎಂದು
ಹೇಳಿದರು. ಶಕ್ತಿ, ಅನ್ನಭಾಗ್ಯ, ಯುವನಿಧಿ, ಗೃಹಲಕ್ಷ್ಮೀ, ಗೃಹಜ್ಯೋತಿ ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ. ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಬಡವರಿಗೆ ತೃಪ್ತಿ ನೀಡಿವೆ ಎಂದರು.
ಸರ್ಕಾರವು ಜಾರಿಗೆ ತಂದ ಗ್ಯಾರಂಟಿ ಯೋಜನೆಗಳಿಂದ ಎರಡು ಕೋಟಿಗೂ ಅಧಿಕ ಕುಟುಂಬಗಳು ಬಡತನ ರೇಖೆಗಿಂತ ಹೊರಗೆ ಬಂದು ಮಧ್ಯಮ ವರ್ಗದ ಸ್ಥಿತಿಗೆ ಏರುತ್ತಿವೆ.
ಆರ್ಥಿಕ ಅಸಮಾನತೆಯಿಂದ ಅಶಕ್ತರಾಗಿರುವ ಜನತೆಯ ಬದುಕಿಗೆ ಕೇವಲ ಈ ಗ್ಯಾರಂಟಿಗಳು ಮಾತ್ರ ಸಾಕಾಗುವುದಿಲ್ಲ ಎನ್ನುವ ಅರಿವು ಸರ್ಕಾರಕ್ಕೆ ಇದೆ. ಸರ್ಕಾರದ ಒಂದು
ನಿರ್ಣಯದಿಂದ ರಾಜ್ಯದ 5 ಕೋಟಿಗೂ ಹೆಚ್ಚು ಜನರು ಮಧ್ಯಮ ವರ್ಗದ ಸ್ಥಿತಿಗೆ ಬಂದಿರುವುದು ಜಾಗತಿಕ ದಾಖಲೆಯಾಗಿದೆ ಎಂದು ರಾಜ್ಯಪಾಲರು ಹೇಳಿದರು.
ನಮ್ಮ ರಾಜ್ಯದ ಜಿಎಸ್ಟಿ (GST) ಸಂಗ್ರಹಣೆಯ ಬೆಳವಣಿಗೆ ದರವು ಜನವರಿ ತಿಂಗಳ ಅಂತ್ಯದವರೆಗೆ ಇಡೀ ದೇಶದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ ಎಂದು ಹೇಳಲು ಖುಷಿಪಡುತ್ತೇನೆ.
ಬರಗಾಲವಿದ್ದರೂ ರಸ್ತೆ, ನೀರು, ಶಿಕ್ಷಣ, ಆರೋಗ್ಯ, ಕೃಷಿ, ತೋಟಗಾರಿಕೆ, ಹೈನುಗಾರಿಕೆ (Agriculture, Horticulture, Dairying), ಕೈಗಾರಿಕೆ ಮುಂತಾದ ಕ್ಷೇತ್ರಗಳಲ್ಲಿ ರಾಜ್ಯವು
ದಾಖಲಾರ್ಹ ಮಟ್ಟದಲ್ಲಿ ಅಭಿವೃದ್ಧಿ ಸಾಧಿಸುತ್ತಿದೆ ಎಂದು ರಾಜ್ಯಪಾಲರು ತಿಳಿಸಿದರು.
ಇತ್ತೀಚಿನ ವರ್ಷಗಳಲ್ಲಿ ಬಜೆಟ್ನಲ್ಲಿ ಘೋಷಿಸಿದ ಒಟ್ಟು ಘೋಷಣೆಗಳಲ್ಲಿ ಶೇಕಡ 97ರಷ್ಟು ಘೋಷಣೆಗಳಿಗೆ ಅಧಿಸೂಚನೆ ಹೊರಡಿಸಿ ಕಾರ್ಯಗತಗೊಳಿಸಲಾಗುತ್ತಿರುವುದು ದಾಖಲೆಯ
ಸಂಗತಿ ಎಂದು ಅವರು ಹೆಮ್ಮೆ ವ್ಯಕ್ತಪಡಿಸಿದರು.
ಅತಿಹೆಚ್ಚು ತೆರಿಗೆ ಸಂಗ್ರಹಿಸಿ ಕೊಡುವ ರಾಜ್ಯ ಕರ್ನಾಟಕ
ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ಸಂಗ್ರಹಿಸಿ ಕೊಡುವ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದ್ದು, ತೆರಿಗೆಯ ಪಾಲು ಪಡೆಯುವ ವಿಚಾರದಲ್ಲಿ 10ನೇ ಸ್ಥಾನದಲ್ಲಿದೆ. ಈ ಹಿನ್ನಲೆಯಲ್ಲಿ
ನಮಗೆ ನ್ಯಾಯ ಮತ್ತು ನ್ಯಾಯಯುತವಾಗಿ ಸಿಗಬೇಕಾದ ಪಾಲನ್ನು ಪಡೆಯಲು ನನ್ನ ಸರ್ಕಾರವು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ರಾಜ್ಯಪಾಲರು ಹೇಳಿದರು.
ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಿಗೆ ವಿಧಾನಸೌಧ ಗ್ರ್ಯಾಂಡ್ ಸ್ಟೆಪ್ ದ್ವಾರದಲ್ಲಿ ಮೈಸೂರು ಕರ್ನಾಟಿಕ್ ಬ್ಯಾಂಡ್ (Mysore Carnatic Band), ಮೈಸೂರು ಇಂಗ್ಲಿಷ್
ಬ್ಯಾಂಡ್, ಮೌಂಟೆಡ್ ಲ್ಯಾನ್ಸ್ ಮೇನ್, ಮೌಂಟೆಡ್ ಹಾರ್ಸ್ ಎಸ್ಕಾರ್ಟ್, ಸಿಎಆರ್ ಪೊಲೀಸ್ ಬ್ಯಾಂಡ್ (CAR Police Band) ಮೂಲಕ ಸ್ವಾಗತ ಕೋರಲಾಯಿತು.
ಇದನ್ನು ಓದಿ: Indian Railways: ರೈಲಿನಲ್ಲಿ ತೊಂದರೆಗೀಡಾಗುವ ಪ್ರಯಾಣಿಕರಿಗಾಗಿ ಒಂದೇ ಟೋಲ್ ಫ್ರೀ ಹೆಲ್ಪ್ ಲೈನ್ ಆರಂಭ.