Bengaluru: ಇತ್ತೀಚಿಗೆ ಕೆಲ ಖಾಸಗಿ ಆಸ್ಪತ್ರೆಗಳು (Private Hospital) ರೋಗಿಗಳ ಸುಲಿಗೆಗೆ ಇಳಿದಿವೆ. ತಮಗೆ ಇಷ್ಟ ಬಂದಂತೆ ಚಿಕಿತ್ಸಾ ದರವನ್ನು ವಿಧಿಸುತ್ತಿವೆ ಎಂಬುದಾಗಿ ಸಾರ್ವಜನಿಕರಿಂದ ಸರ್ಕಾರಕ್ಕೆ ದೂರುಗಳು ಸಲ್ಲಿಕೆಯಾಗಿದ್ದವು. ಈ ದೂರುಗಳ ಬೆನ್ನಲ್ಲೇ ಇನ್ಮುಂದೆ ರಾಜ್ಯಾಧ್ಯಂತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ (Treatment) ದರಪಟ್ಟಿ ಬೋರ್ಡ್ ಅಳವಡಿಸೋದನ್ನು ಕಡ್ಡಾಯಗೊಳಿಸಿ ಸರ್ಕಾರ ಆದೇಶ ಮಾಡಿದೆ. ರಾಜ್ಯದಲ್ಲಿ ಖಾಸಗೀ ಆಸ್ಪತ್ರೆಗಳಲ್ಲಿ ಅವರದ್ದೇ ದರ್ಬಾರ್.
ತಮಗೆ ಇಷ್ಟಬಂದಂತೆ ರೋಗಿಗಳಿಗೆ ಚಿಕಿತ್ಸೆಯ ದರವನ್ನು ವಿಧಿಸಲಾಗುತ್ತಿವೆ. ಈ ದರಪಟ್ಟಿಯಿಂದಾಗಿ ರಾಜ್ಯದಲ್ಲಿನ ಜನರು ಸುಲಿಗೆಗೆ ಒಳಗಾಗಿದ್ದು, ಬಡವರು, ಮಧ್ಯಮ ವರ್ಗದವರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಎಂಬುದೇ ಸಿಂಹಸ್ವಪ್ನವಾದಂತೆ ಆಗಿದೆ ಎನ್ನಲಾಗುತ್ತಿದೆ. ಈ ಹಿನ್ನಲೆಯಲ್ಲಿ ಸರ್ಕಾರಕ್ಕೆ, ಆರೋಗ್ಯ ಇಲಾಖೆಗೆ ಸಾರ್ವಜನಿಕರು ವಿವಿಧ ಖಾಸಗಿ ಆಸ್ಪತ್ರೆಗಳ ವಿರುದ್ಧ ದೂರು ಸಲ್ಲಿಸಲಾಗಿತ್ತು. ಈ ದೂರಿನ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundurao) ಅವರು, ಖಾಸಗಿ ಆಸ್ಪತ್ರೆಗಳಲ್ಲಿ ಇನ್ಮುಂದೆ ಚಿಕಿತ್ಸಾ ದರಪಟ್ಟಿ ಬೋರ್ಡ್ (Treatment Tariff Board) ಹಾಕುವುದನ್ನು ಕಡ್ಡಾಯಗೊಳಿಸುವಂತೆ ಆದೇಶ ಹೊರಡಿಸಲು ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ.
ಗುರುವಾರ ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು ಜ್ವರ, ಕೆಮ್ಮು, ನೆಗಡಿ ಎಂದು ಆಸ್ಪತ್ರೆಗಳಿಗೆ ಚಿಕಿತ್ಸೆಗೆ ತೆರಳಿದರೂ ಸಾವಿರಾರು ರೂಪಾಯಿ ಬಿಲ್ ವಸೂಲಿ ಮಾಡಲಾಗುತ್ತಿದೆ ಎಂಬ ದೂರುಗಳು ಸಲ್ಲಿಕೆಯಾಗಿವೆ. ಈ ಬಗ್ಗೆ ಸಾರ್ವಜನಿಕರು ನಮ್ಮ ಇಲಾಖೆ ಹಾಗೂ ಸಿಎಂ ಸಿದ್ದರಾಮಯ್ಯಗೆ (Siddaramaiah) ಪತ್ರ ಬರೆದು ದೂರು ನೀಡಿದ್ದಾರೆ. ಹೀಗಾಗಿ ಕಠಿಣ ಕ್ರಮಕೈಗೊಳ್ಳುತ್ತೇವೆ ಎಂದು ಹೇಳಿದರು. ಆರೋಗ್ಯ ಸಚಿವರ ಸೂಚನೆಯಂತೆ ಆರೋಗ್ಯ ಇಲಾಖೆಯಿಂದ ಖಾಸಗಿ ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಚಿಕಿತ್ಸಾ ದರಪಟ್ಟಿಯ ಬೋರ್ಡ್ ಅಳವಡಿಸುವಂತೆ ಖಡಕ್ ಸೂಚನೆಯನ್ನು ಹೊರಡಿಸಿದೆ.
ಕೆಪಿಎಂಇ (KPME) ಮುಖಾಂತರ ಅಂಗೀಕೃತವಾದ ಆಸ್ಪತ್ರೆಗಳು ಆವರಣದಲ್ಲಿ ಹಾಗೂ ಹೊರ ಭಾಗದಲ್ಲಿ ಚಿಕಿತ್ಸಾ ದರ ಪಟ್ಟಿಯನ್ನು ಅಳವಡಿಸಬೇಕು. ಯಾವ್ಯಾವ ಚಿಕಿತ್ಸೆಗಳಿಗೆ ಎಷ್ಟು ದರ ಎಂಬ ಪಟ್ಟಿಯನ್ನು ಅಳವಡಿಸಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದೆ.ಒಂದು ವೇಳೆ ಈ ನಿಯಮವನ್ನು ಪಾಲಿಸದೇ ಇದ್ದರೇ, ಅಂತಹ ಆಸ್ಪತ್ರೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳೋದಾಗಿ ಎಚ್ಚರಿಕೆ ನೀಡಿದೆ.