ಬಿಜೆಪಿಯ ಹಿಂದುತ್ವ ಕೇವಲ ಮತಗೋಸ್ಕರ – ಸಿದ್ದರಾಮಯ್ಯ

ಬೆಂಗಳೂರು ಸೆ 16 : ಬಿಜೆಪಿಯವರದ್ದು ಮತಗೋಸ್ಕರ ನಡೆಸುತ್ತಿರುವ ರಾಜಕೀಯವಾಗಿದ್ದು ಬಿಜೆಪಿಯವರು ಹಿಂದುತ್ವ ಹೇಳುತ್ತಾ ರಾಮನ ಜಪ ಮಾಡ್ತಾರೆ.  ಆದರೆ ದೇವಸ್ಥಾನ ಒಡೆದು ಹಾಕ್ತಾರೆ,  ಬಿಜೆಪಿಯದ್ದು ಡೋಂಗಿ ಹಿಂದುತ್ವ ವೋಟ್ ಗೋಸ್ಕರ ಇರುವ ಹಿಂದುತ್ವ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಕಿಡಿಕಾರಿದರು.

ಈ ಬಗ್ಗೆ ಮಾತನಾಡಿದ ಅವರು ಸರ್ಕಾರದ ಗಮನಕ್ಕೆ ತರದೇ ಮುಖ್ಯಕಾರ್ಯದರ್ಶಿಗಳು ದೇವಸ್ಥಾನ ತೆರವುಗೊಳಿಸುವ ಕುರಿತು ಪತ್ರ ಬರೆಯಲು ಸಾಧ್ಯವಿಲ್ಲ. 15ನೇ ತಾರೀಖಿನಿಂದ ಜಿಲ್ಲಾಧಿಕಾರಿಗಳು ಹಾಗೂ ತಹಶಿಲ್ದಾರರು ಸುಪ್ರೀಂ ಕೋರ್ಟ್ ನ ತೀರ್ಮಾನದಂತೆ ಸಾರ್ವಜನಿಕ ಸ್ಥಳಗಳಲ್ಲಿ ಇರುವ ಧಾರ್ಮಿಕ ಕಟ್ಟಡಗಳನ್ನು ನೆಲಸಮ ಮಾಡುತ್ತಿದ್ದಾರೆ. ಇದಕ್ಕೆ ಸಾರ್ವಜನಿಕರ ವಿರೋಧ ವ್ಯಕ್ತವಾದ ಮೇಲೆ ತಮ್ಮ ಮಾನ ಉಳಿಸಿಕೊಳ್ಳಲು ಸರ್ಕಾರ ಬಣ್ಣ ಬದಲಾಯಿಸಿದೆ. ಈಗ ಅವರಿಗೆ ಒಡೆಯಬೇಡಿ ಎಂಬ ಸೂಚನೆ ಕೊಡ್ತೀವಿ ಎನ್ನುತ್ತಿದ್ದಾರೆ. ಸರ್ಕಾರದ ಗಮನಕ್ಕೆ ಬಾರದೆ ದೇವಾಲಯ ಒಡೆದಿದ್ದಾರ? ಮೈಸೂರು ಸಂಸದರು ಈಗ ದೇವಾಲಯ ಒಡೆದು ಆದಮೇಲೆ ಮಾತಾಡ್ತಾರೆ. ಇದರ ಬದಲು ಸರ್ಕಾರದ ಗಮನಕ್ಕೆ ತಂದು ದೇವಸ್ಥಾನ ಒಡೆಯುವುದನ್ನು ತಡೆಯಬೇಕಿತ್ತು ಎಂದು ಆಕ್ರೋಶ ವ್ಯೆಕ್ತಪಡಿಸಿದರು.

Exit mobile version