- ಹೈಕೋರ್ಟ್ನ ಆದೇಶದಂತೆ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸಲು ಹೇಳಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
- ಆಟೋ ಚಾಲಕರು ಹಾಗು ಕ್ಯಾಬ್ ಚಾಲಕರ ಹೋರಾಟಕ್ಕೆ ಜಯ (Karnataka bans bike taxi)
- ರ್ಯಾಪಿಡೋ, ಉಬರ್ ಬೈಕ್ ಟ್ಯಾಕ್ಸಿ ಸೇವೆಗೆ ಕೊನೆಗೂ ಬಿತ್ತು ಮೂಗುದಾರ
Bengaluru: ಕರ್ನಾಟಕದಲ್ಲಿ ಈ ಕೂಡಲೇ ರ್ಯಾಪಿಡೋ, ಉಬರ್ ಬೈಕ್ ಟ್ಯಾಕ್ಸಿ (Bike Taxi) ಸೇವೆಯನ್ನು ಸ್ಥಗಿತಗೊಳಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಸಾರಿಗೆ ಇಲಾಖೆಯ ಕಾರ್ಯದರ್ಶಿ ಮತ್ತು ಸಾರಿಗೆ ಇಲಾಖೆಯ ಆಯುಕ್ತರಿಗೆ ಪತ್ರ ಬರೆಯಲಾಗಿದ್ದು, ಹೈಕೋರ್ಟ್ ಆದೇಶ (High Court order) ಪಾಲಿಸುವಂತೆ ಸೂಚನೆ ನೀಡಿದ್ದಾರೆ. ಆ ಮೂಲಕ ರಾಜ್ಯದ ಆಟೋ ಮತ್ತು ಕ್ಯಾಬ್ ಚಾಲಕರ ಹಲವಾರು (Auto and cab drivers) ವರ್ಷಗಳ ಹೋರಾಟಕ್ಕೆ ಜಯ ಸಿಕ್ಕಿದೆ.
ಮೋಟಾರ್ ಸೈಕಲ್ಗಳನ್ನು (Motorcycles) ಸಾರಿಗೆ ವಾಹನಗಳಾಗಿ ನೋಂದಾಯಿಸಲು 2022 ರಲ್ಲಿ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ (the State Govt) ನಿರ್ದೇಶನ ಕೋರಿ ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್ (Systems Private Limited) , ಎಎನ್ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಮತ್ತು ಇತರರು ಅರ್ಜಿ ಸಲ್ಲಿಸಿದ್ದರು.
ವಿಚಾರಣೆ ಕೈಗೆತ್ತಿಕೊಂಡಿದ್ದ ಹೈಕೋರ್ಟ್ ಏಪ್ರಿಲ್ – 2 ರಂದು ಆರು ವಾರದೊಳಗೆ ಬೈಕ್ ಟ್ಯಾಕ್ಸಿ ನಿಲ್ಲಿಸುವಂತೆ ಆದೇಶ ನೀಡಿತ್ತು. ಈ ಕುರಿತಾಗಿ ಸಾರಿಗೆ ಇಲಾಖೆಯ (Department of Transport) ಕಾರ್ಯದರ್ಶಿ ಮತ್ತು ಸಾರಿಗೆ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿರುವ ರಾಮಲಿಂಗಾ ರೆಡ್ಡಿ (Ramalingareddy) ಅವರು ಕರ್ನಾಟಕ ಹೈಕೋರ್ಟ್ನ ಆದೇಶ ಪಾಲಿಸುವಂತೆ ಖಡಕ್ ಸೂಚನೆ ನೀಡಿದ್ದಾರೆ. ಇದರಿಂದ ಆಟೋ ಮತ್ತು ಕ್ಯಾಬ್ (Auto and Cab) ಚಾಲಕರ ಹೋರಾಟಕ್ಕೆ ಕೊನೆಗೂ ಪ್ರತಿಫಲ ಸಿಕ್ಕಿದೆ ಎಂದು ಹೇಳಲಾಗುತ್ತಿದೆ.

ಈ ಬೈಕ್ ಟ್ಯಾಕ್ಸಿ ಸೇವೆಯನ್ನು ಖಾಸಗಿ ಬೈಕ್ಗಳಲ್ಲಿ ನೀಡುತ್ತಿದ್ದರಿಂದ ಭಾರಿ ವಿರೋಧಕ್ಕೆ ಕಾರಣವಾಗಿತ್ತು. ವೈಟ್ ಬೋರ್ಡ್ (White board) ಇರುವ ವಾಹನಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸಲಾಗುತ್ತಿದೆ. ಆದರೆ ಯೆಲ್ಲೋ ಬೋರ್ಡ್ ಇರುವ ನಾವು ಹೆಚ್ಚು ತೆರಿಗೆ ಕಟ್ಟುತ್ತೇವೆ. ಬೈಕ್ ಟ್ಯಾಕ್ಸಿಗಳಿಗೆ ಯಾವುದೇ ತೆರಿಗೆ ಇಲ್ಲ. ಇದರಿಂದ ಪ್ರಯಾಣಿಕರ ಸಂಖ್ಯೆ (Number of passengers) ಕೂಡ ಕಡಿಮೆಯಾಗಿದೆ ಎಂದು ಆಟೋ ಹಾಗೂ ಕ್ಯಾಬ್ ಚಾಲಕರು ಗರಂ ಆಗಿದ್ದರು.
ಅಲ್ಲದೆ ರ್ಯಾಪಿಡೋ ಹಾಗೂ ಇನ್ನಿತರೆ ಬೈಕ್ ಟ್ಯಾಕ್ಸಿ ಓಡಿಸುತ್ತಿದ್ದ ಬೈಕ್ ಸವಾರರ (Bikers) ಮೇಲೆ ರಸ್ತೆಗಳಲ್ಲೇ ಗಲಾಟೆ ಕೂಡ ಮಾಡುತ್ತಿದ್ದರು.ಅಲ್ಲದೆ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ (Bike taxi in the state) ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ಹಾಗಾಗಿ ಆರು ವಾರಗಳ ಒಳಗೆ ಎಲ್ಲ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಗೊಳ್ಳುವಂತೆ ಹೈಕೋರ್ಟ್ ರಾಜ್ಯ ಸರ್ಕಾರ (High Court State Govt) ಹಾಗೂ ಸಾರಿಗೆ ಇಲಾಖೆಗೆ ನಿರ್ದೇಶಿಸಿತ್ತು.
ಇದನ್ನು ಓದಿ : http://ಸೌಂದರ್ಯಕ್ಕೆ ಮಾತ್ರವಲ್ಲ ಆರೋಗ್ಯಕ್ಕೂ ನೇರಳೆ ಹಣ್ಣು ಬೆಸ್ಟ್
ಈ ತೀರ್ಪನ್ನು ಸ್ವಾಗತಿಸಿದ್ದ ಸಚಿವ ರಾಮಲಿಂಗಾರೆಡ್ಡಿ, ಈ ಸಂಬಂಧ ನಿಯಮ ರೂಪಿಸಲು ಸರ್ಕಾರಕ್ಕೆ (Government to formulate) ಮೂರು ತಿಂಗಳ ಕಾಲಾವಕಾಶ ನೀಡಲಾಗಿದ್ದು, ಆಪ್ ಆಧಾರಿತ ಈ ಸೇವೆಯಲ್ಲಿ ಅಸುರಕ್ಷತೆಯೂ ಇದೆ ಎಂದು ಹೇಳಿದ್ದರು.ಇದರಿಂದ ಬೈಕ್ ಟ್ಯಾಕ್ಸಿ (Bike taxi) ಓಡಿಸಿಕೊಂಡು ಚೂರು ಹಣ (Karnataka bans bike taxi) ಸಂಪಾದನೆ ಮಾಡಿಕೊಳ್ಳುತ್ತಿದ್ದವರಿಗೆ ದೊಡ್ಡ ಶಾಕ್ ನೀಡಿದಂತಾಗಿದೆ