Chennai: ಕೇರಳ ರಾಜ್ಯ ಆರ್ಟಿಸಿಯು ಕರ್ನಾಟಕ ರಾಜ್ಯ (Karnataka can use KSRTC logo) ರಸ್ತೆ ಸಾರಿಗೆ ನಿಗಮಕ್ಕೆ ಕೆಎಸ್ಆರ್ಟಿಸಿ ಟ್ರೇಡ್ ಮಾರ್ಕ್ ಬಳಸಲು ಅನುಮತಿಸಬಾರದು
ಎಂದು ಸಲ್ಲಿಸಿದ ಮನವಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಇದೀಗ ಯಾವುದೇ ಕಾನೂನಿನ ಸಮಸ್ಯೆಯಿಲ್ಲದೆ ಕೆಎಸ್ಆರ್ಟಿಸಿ ಹೆಸರನ್ನು
ಬಳಸಬಹುದಾಗಿದೆ. ಈ ಕುರಿತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಕೆಎಸ್ಆರ್ಟಿಸಿ ಹೆಸರು ಬಳಕೆ ಮಾಡಲು ಯಾವುದೇ ಅಭ್ಯಂತರವಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಹೇಳಿದ್ದು,
ಕೇರಳ ಆರ್ಟಿಸಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ಕೆಎಸ್ಆರ್ಟಿಸಿ ಎಂಬ ಟ್ರೇಡ್ ಮಾರ್ಕ್ ಬಳಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಇರುವ ಎಲ್ಲಾ ಕಾನೂನು
ಅಡೆತಡೆಗಳನ್ನು ಮದ್ರಾಸ್ ಹೈಕೋರ್ಟ್ (Karnataka can use KSRTC logo) ತೆರವುಗೊಳಿಸಿದೆ.
ಕೇರಳ ಮತ್ತು ಕರ್ನಾಟಕ ರಾಜ್ಯಗಳು ತಮ್ಮ ಸರ್ಕಾರಿ ಸ್ವಾಮ್ಯದ ಸಾರ್ವಜನಿಕ ಸಾರಿಗೆ ನಿಗಮಗಳಿಗೆ ಕ್ರಮವಾಗಿ 1965 ಮತ್ತು 1973 ರಿಂದ KSRTC ಎಂಬ ಸಂಕ್ಷೇಪಣವನ್ನು ಬಳಸುತ್ತಿವೆ.
ಕರ್ನಾಟಕವು 1973ರಿಂದ ಕೆಎಸ್ಆರ್ಟಿಸಿ ಲೋಗೊ ಬಳಸುತ್ತಿರುವ ಬಗ್ಗೆ ದಾಖಲೆಗಳನ್ನು ಚೆನ್ನೈ ಟ್ರೇಡ್ ಮಾರ್ಕ್ ನೋಂದಣಿ ಅಧಿಕಾರಿಗೆ ಸಲ್ಲಿಸಿ 2013ರಲ್ಲಿ ಟ್ರೇಡ್ ಮಾರ್ಕ್ ಪ್ರಮಾಣ ಪತ್ರವನ್ನು ಪಡೆದಿತ್ತು.
ಇದಲ್ಲದೆ ಭಾರತ ಸರಕಾರದ ರಿಜಿಸ್ಟ್ರಾರ್ ಆಫ್ ಕಾಪಿ ರೈಟ್ಸ್ ಅವರಿಂದ ‘ಕೆಎಸ್ಸಾರ್ಟಿಸಿ’ ಲೋಗೋ ಮತ್ತು ‘ಗಂಡಭೇರುಂಡ ಗುರುತು’ ಬಳಕೆಗಾಗಿ ಕಾಪಿ ರೈಟ್ ಸಹ ಪಡೆದಿದೆ. ಕೇರಳ ರಾಜ್ಯ
ರಸ್ತೆ ಸಾರಿಗೆ ಸಂಸ್ಥೆಯು ಚೆನ್ನೈನಲ್ಲಿರುವ ಬೌದ್ಧಿಕ ಆಸ್ತಿ ಮೇಲ್ಮನವಿ ಮಂಡಳಿಯ (ಇಂಟಲೆಕ್ಚುವಲ್ ಪ್ರಾಪರ್ಟಿ ಅಪೀಲ್ ಬೋರ್ಡ್) ಮುಂದೆ ಇದನ್ನು ಪ್ರಶ್ನಿಸಿತ್ತು. ಆದರೆ ಕೇಂದ್ರ ಸರ್ಕಾರವು ಬೌದ್ಧಿಕ
ಆಸ್ತಿ ಮೇಲ್ಮನವಿ ಮಂಡಳಿಯನ್ನು ರದ್ದುಗೊಳಿಸಿ ಅಲ್ಲಿರುವ ಪ್ರಕರಣಗಳನ್ನು ಮದ್ರಾಸ್ ಹೈಕೋರ್ಟ್ಗೆ ವರ್ಗಾಯಿಸಿತ್ತು.
42 ವರ್ಷಗಳಿಂದ ಕೇರಳ ರಾಜ್ಯ ಆರ್ಟಿಸಿಯು ಕೆಎಸ್ಆರ್ಟಿಸಿ ಬಳಸುತ್ತಿರುವುದರಿಂದ ಕರ್ನಾಟಕದ ಟ್ರೇಡ್ ಮಾರ್ಕ್ ಪ್ರಮಾಣ ಪತ್ರವನ್ನು ಅಮಾನ್ಯಗೊಳಿಸಬೇಕು ಎಂದು ಕೋರ್ಟ್ನಲ್ಲಿ ವಾದಿಸಿತ್ತು.
1937ರಿಂದ ತಿರುವಾಂಕೂರು ರಾಜ್ಯ ಸಾರಿಗೆ ಸಂಸ್ಥೆಯಿದ್ದು, ಕೇರಳ ರಾಜ್ಯ ಉದಯವಾದ ಬಳಿಕ 1965ರಿಂದ ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮ ಆರಂಭವಾಯಿತು.
ಈ ಪ್ರಕರಣವನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿದ ಮದ್ರಾಸ್ ಹೈಕೋರ್ಟ್, ಉಭಯ ರಾಜ್ಯಗಳ ವಾದ–ಪ್ರತಿವಾದ ಆಲಿಸಿ ಕೇರಳದ ಅರ್ಜಿಯನ್ನು ವಜಾಗೊಳಿಸಿ ಕರ್ನಾಟಕದ ವಾದವನ್ನು ಎತ್ತಿ ಹಿಡಿದಿದೆ.
ಇದನ್ನು ಓದಿ: ಕೆಂಪೇಗೌಡ ಜಾತಿ ಲಾಬಿಗಳ ಪ್ರಭಾವದಿಂದಾಗಿ ಐಕಾನ್ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿ: ವಿವಾದಾತ್ಮಕ ಹೇಳಿಕೆ ನೀಡಿದ ಚೇತನ್
- ಭವ್ಯಶ್ರೀ ಆರ್ ಜೆ