ಬೆಂಗಳೂರು, ಜೂ. 7: ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ರಾಜ್ಯ ರಾಜಕೀಯ ಸನ್ನಿವೇಶಗಳು ಗರಿಗೆದ್ದರಿದ್ದು, ಸಿಎಂ ಬಿಎಸ್ ಯಡಿಯೂರಪ್ಪ ಕೂಡ ಹೈ ಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡಲು ಸಿದ್ದ ಎಂದಿದ್ದರು. ಇದರ ಬೆನ್ನಲ್ಲೇ ಸಿಎಂ ಬಿಎಸ್ವೈ ಪರ ವಿರೋಧ ಗುಂಪುಗಳು ಹೈಕಮಾಂಡ್ಗೆ ಸುದ್ದಿ ಶಾಸಕರ ಅಭಿಪ್ರಾಯ ಸಹಿ ಸಂಗ್ರಹ ಮಾಡಿ ನೀಡಲು ಮುಂದಾಗಿವೆ. ಈಗಾಗಲೇ ಸಿಎಂ ಬಿಎಸ್ ಯಡಿಯೂರಪ್ಪ ಪರ ಬ್ಯಾಟಿಂಗ್ ನಡೆಸಿರುವ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಬಿಎಸ್ ಯಡಿಯೂರಪ್ಪ ಪರ ಸಹಿ ಸಂಗ್ರಹಕ್ಕೆ ಮುಂದಾಗಿದ್ದಾರೆ. ಈ ಎಲ್ಲಾ ಘಟನೆಗಳ ಕುರಿತು ಟೀಕಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಬಿಎಸ್ ಯಡಿಯೂರಪ್ಪ ಅವರ ಪರ 56 ಶಾಸಕರು ಸಹಿ ಮಾಡಿದ್ದರೆ ಎಂದು ಅವರು ಹೇಳುತ್ತಿದ್ದಾರೆ. ಆ ಶಾಸಕರ ಪಟ್ಟಿಯನ್ನು ಬಹಿರಂಗಪಡಿಸಲಿ ಎಂದು ಸವಾಲ್ ಹಾಕಿದ್ದಾರೆ.
ಇದೆಲ್ಲದರ ನಡುವೆ ಸಿಎಂ ಬಿ. ಎಸ್. ಯಡಿಯೂರಪ್ಪ ತಮ್ಮ ಟ್ವಿಟ್ಟರ್ ಮೂಲಕ ಕೋವಿಡ್ ಸಾಂಕ್ರಾಮಿಕದಿಂದ ಜನ ಸಂಕಷ್ಟಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ, ಪ್ರತಿಯೊಬ್ಬ ಬಿಜೆಪಿ ಶಾಸಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಕೋವಿಡ್ ನಿಯಂತ್ರಣ ಕಾರ್ಯಗಳಿಗೆ ಆದ್ಯತೆ ನೀಡಬೇಕು.ಯಾರೂ ಕೂಡ ಸಹಿ ಸಂಗ್ರಹಿಸುವುದಾಗಲಿ, ರಾಜಕೀಯ ಹೇಳಿಕೆಗಳನ್ನು ನೀಡುವುದಾಗಲಿ ಮಾಡದೆ, ಸಂಕಷ್ಟದಲ್ಲಿರುವ ಜನರಿಗೆ ನೆರವಾಗಬೇಕು ಎಂದು ವಿನಂತಿಸುತ್ತೇನೆ ಎಂದು ಸೂಚಿಸಿದ್ದಾರೆ.