• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ನಿಲ್ಲದ ವರುಣನ ಅಬ್ಬರ: ಹಲವೆಡೆ ಪ್ರವಾಹಭೀತಿ, ಜನಜೀವನ ತತ್ತರ

Kiran K by Kiran K
in ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ನಿಲ್ಲದ ವರುಣನ ಅಬ್ಬರ: ಹಲವೆಡೆ ಪ್ರವಾಹಭೀತಿ, ಜನಜೀವನ ತತ್ತರ
0
SHARES
2
VIEWS
Share on FacebookShare on Twitter

ರಾಜ್ಯದಲ್ಲಿ ಎಡಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಬಹುತೇತ ಜಲಾಶಯಗಳು ಅಪಾಯದ ಮಟ್ಟ ತಲುಪಿವೆ. ಪ್ರಮುಖವಾಗಿ ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಕನ್ನಡ, ಮಡಿಕೇರಿ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಅಬ್ಬರಕ್ಕೆ ತತ್ತರಿಸಿ ಹೋಗಿವೆ. ಈ ಜಿಲ್ಲೆಗಳ ಎಲ್ಲಾ ಜಲಾಶಯಗಳು ಸಂಪೂರ್ಣ ಭರ್ತಿಯಾಗಿದ್ದು, ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿವೆ.

ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವು ಕಡೆಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಭಾರೀ ಮಳೆಯಿಂದಾಗಿ ಕೊಡಗು ಜಿಲ್ಲೆಯಲ್ಲಿ ಜನಜೀವನ ಸಂಪೂರ್ಣ ಹದಗೆಟ್ಟಿದೆ. ಹಲವು ಕಡೆಗಳಲ್ಲಿ ಭೂಕುಸಿತ ಉಂಟಾಗಿದ್ದು, ಜನರನ್ನು ಆತಂಕಕ್ಕೆ ತಳ್ಳಿದೆ. ಮಡಿಕೇರಿ ಸಮೀಪದ ಕಡಗದಾಳುವಿನಲ್ಲಿ ಭೂಕುಸಿತ ಉಂಟಾಗಿದ್ದು, ಕಡಗದಾಳು ಬೊಟ್ಲಪ್ಪ ದೇವಾಲಯಕ್ಕೆ ತೆರಳುವ ರಸ್ತೆ ಕುಸಿತವಾಗಿದ್ದು, ಗ್ರಾಮದಲ್ಲಿ ಸಿಕ್ಕಿಹಾಕಿಕೊಂಡವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಬೊಟ್ಲಪ್ಪ ಯುವಕ ಸಂಘದಿಂದ ರಕ್ಷಣಾ ಕಾರ್ಯಪ್ರವೃತ್ತವಾಗಿದೆ. ಇನ್ನೂ ಜಿಲ್ಲೆಯ ಬಿಳಿಗೇರಿ-ಹಾಕತ್ತೂರು ರಸ್ತೆಯ ಸೇತುವೆ ಕುಸಿತವಾಗಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ಹೀಗಾಗಿ ಸುತ್ತಮುತ್ತಲಿನ ಜನರಲ್ಲಿ ಆತಂಕ ತಂದೊಡ್ಡಿದೆ. ಅಲ್ಲದೇ ಮಡಿಕೇರಿ-ಮೈಸೂರು ರಾಷ್ಟ್ರೀಯ ಹೆದ್ದಾರಿಗೂ ಕಂಟಕ ಎದುರಾಗಿದ್ದು, ಕುಶಾಲನಗರ ಬಳಿ ಹೆದ್ದಾರಿಯಲ್ಲಿ ಕಾವೇರಿ ನದಿ ನೀರಿನ ಪ್ರವಾಹ ಉಂಟಾಗಿದೆ. ಈ ಭಾಗದಲ್ಲಿ ಕ್ಷಣಕ್ಷಣಕ್ಕೂ ನೀರಿನ ಮಟ್ಟ ಹೆಚ್ಚಳದಿಂದ ಜನರ ಆತಂಕ ಉಲ್ಭಣಗೊಂಡಿದೆ. ಇನ್ನೂ ಭಾಗಮಂಡಲ ವ್ಯಾಪ್ತಿಯಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ತ್ರಿವೇಣಿ ಸಂಗಮದಲ್ಲಿ ಪ್ರವಾಹ ಹೆಚ್ಚುತ್ತಿದೆ. ಭಗಂಡೇಶ್ವರ ದೇವಾಲಯ ಪ್ರವೇಶಿಸಿರುವ ಕಾವೇರಿದೇವಾಲಯ ಒಳಭಾಗದಲ್ಲಿ ಪ್ರವಾಹ ನೀರು ನುಗ್ಗಿದ್ದು, ದೇವಸ್ಥಾನ ಜಲಾವೃತಗೊಂಡಿದೆ. ದಕ್ಷಿಣ ಕೊಡಗಿನಲ್ಲೂ ವರುಣನ ಅಬ್ಬರ ಜೋರಾಗಿದ್ದು, ಗೋಣಿಕೊಪ್ಪ ನಗರದ 3ನೇ ವಾರ್ಡ್ ಮನೆಗಳಿಗೆ ನೀರು ನುಗ್ಗಿದೆ. ನೀರುಕೀರೆಹೊಳೆಯಲ್ಲಿ ನೀರಿನ ಮಟ್ಟ ಏರಿಕೆಯಾದ ಹಿನ್ನೆಲೆಯಲ್ಲಿ ಜಲಾವೃತವಾಗಿದ್ದಯ, ಕೀರೆಹೊಳೆ ಅಪಾಯದ  ಮಟ್ಟ ಮೀರಿ ಹರಿಯುತ್ತಿದೆ. ಇನ್ನೂ ಕೊಡಗಿನಲ್ಲಿ ಸುರಿಯುತ್ತಿರುವ ವಿಪರೀತ ಮಳೆಯಿಂದ ಆದಿವಾಸಿ ಜನರು ತಮ್ಮ ಬದುಕನ್ನು ಕಳೆದುಕೊಂಡಿದ್ದಾರೆ, 5 ದಿನಗಳು ಆದರೂ ಜಿಲ್ಲಾ ಆಡಳಿತ ಮತ್ತು ಗ್ರಾಮ ಪಂಚಾಯತಿ ಇವರ ನೆರವಿಗೆ ಬಂದಿಲ್ಲ ಎನ್ನಲಾಗಿದೆ. ಮಳೆಯ ಅಬ್ಬರಕ್ಕೆ ಕೊಡಗಿನ ಜಿಲ್ಲಾಧಿಕಾರಿ ಕಚೇರಿಯೂ ಕುಸಿಯುವ ಭೀತಿ ಉಂಟಾಗಿದ್ದು, ಕಚೇರಿ ಮುಂಭಾಗದಲ್ಲೇ ಮಣ್ಣು ಕುಸಿಯುತ್ತಿದ್ದು, ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. 


ದಕ್ಷಿಣಕನ್ನಡ ಜಿಲ್ಲೆಯ ಹಲವೆಡೆ ಇಂದು ಕೂಡಾ ಭಾರೀ ಮಳೆಯಾಗುತ್ತಿದೆ. ಪಶ್ಚಿಮಘಟ್ಟ ಅಂಚಿನ ಪ್ರದೇಶಗಳಾದ ಸುಬ್ರಹ್ಮಣ್ಯ, ದಿಡುಪೆ, ಮಲವಂತಿಕೆ, ಚಾರ್ಮಾಡಿ, ಬಿಸಿಲೆ ಮೊದಲಾದ ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆ ಹಿನ್ನಲೆಯಲ್ಲಿ ಬಿಸಿಲೆ ಘಾಟ್ ನಲ್ಲಿ ಮತ್ತೆ ಗುಡ್ಡ ಕುಸಿದಿದ್ದು, ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದಿವೆ. ಬಿಸಿಲೆ ಘಾಟ್ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ- ಬಿಸಿಲೆ ಘಾಟ್ ಸಂಪರ್ಕಿಸುವ ರಸ್ತೆಯಲ್ಲಿ ವಾಹನ ಸಂಚಾರಕ್ಕೂ ಅಡ್ಡಿಯಾಗಿದೆ.


ಸಕಲೇಶಪುರ, ಶಿರಾಡಿ, ಕುಮಾರ ಪರ್ವತ ಭಾಗದಲ್ಲಿ ಎಡೆಬಿಡದೆ ಮಳೆಯಾಗುತ್ತಿದ್ದು, ಕುಮಾರಧಾರಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಸತತ ಐದನೇ ದಿನವೂ ಮುಳುಗಡೆಯಾಗಿದೆ. ಸ್ನಾನಘಟ್ಟ ಪರಿಸರದಲ್ಲಿ ನೀರಿ‌ನ ಹರಿವು ಹೆಚ್ಚಾಗುತ್ತಿದ್ದು, ಸ್ನಾನಘಟ್ಟದಲ್ಲಿರುವ ಭಕ್ತರ ಸ್ನಾನಗೃಹ, ಶೌಚಾಲಯ, ಲಗೇಜ್ ಕೊಠಡಿಗಳು ಸಂಪೂರ್ಣ ಜಲಾವೃತವಾಗಿದೆ. ಈ ಭಾಗದಲ್ಲಿ ಮಳೆಯ ಪ್ರಮಾಣ ಇನ್ನಷ್ಟು ಹೆಚ್ಚಾಗುತ್ತಿದ್ದು, ಕುಮಾರಧಾರಾ ನದಿ ನೀರು ರಸ್ತೆಗೆ ಬರುವ ಸಾಧ್ಯತೆಯೂ ಹೆಚ್ಚಾಗಿದೆ. ಇದರಿಂದ ಮಂಜೇಶ್ವರ- ಸುಬ್ರಹ್ಮಣ್ಯ ಅಂತರ್ ರಾಜ್ಯ ಹೆದ್ದಾರಿ ಬಂದ್ ಆಗುವ ಲಕ್ಷಣ ಗೋಚರಿಸುತ್ತಿದೆ.


ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ಬಂಟ್ವಾಳ, ಪಾಣೆಮಂಗಳೂರು, ಜಪ್ಪಿನ ಮೊಗರು ಮೊದಲಾದ ಕಡೆಗಳಲ್ಲಿ ನೀರು ನುಗ್ಗುವ ಆತಂಕವೂ ಎದುರಾಗಿದೆ. ನದಿ ಪಾತ್ರದ ಜನರು ಎಚ್ಚರಿಕೆಯಲ್ಲಿರುವಂತೆ ಸೂಚಿಸಲಾಗಿದೆ. ಭಾರೀ ಮಳೆಯ ಕಾರಣ ಕಡಲು ತೀರಗಳಲ್ಲಿ ಅಲೆಗಳ ಆರ್ಭಟ ಹೆಚ್ಚಾಗುತ್ತಿದೆ. ಸೋಮೇಶ್ವರ, ಉಚ್ಚಿಲ, ಬಟ್ಟಪ್ಪಾಡಿ ಕಡಲ ತೀರದಲ್ಲಿ ಕಡಲ್ಕೊರೆತ ಹೆಚ್ಚಾಗುತ್ತಿದೆ. ಉಚ್ಚಿಲ- ಬಟ್ಟಪ್ಪಾಡಿ ಸಂಪರ್ಕಿಸುವ ರಸ್ತೆ ಬಹುತೇಕ ಕುಸಿದು‌ ಬಿದ್ದಿದೆ.

Related News

ಹಿಂದಿ ಭಾಷೆಗೆ ಗ್ರೇಡ್ ವಿಚಾರ ಸರ್ಕಾರಕ್ಕೆ ಹಿನ್ನೆಡೆ: ಮಹತ್ವದ ತೀರ್ಪು ಪ್ರಕಟಿಸಿದ ಹೈಕೋರ್ಟ್
ದೇಶ-ವಿದೇಶ

ಹಿಂದಿ ಭಾಷೆಗೆ ಗ್ರೇಡ್ ವಿಚಾರ ಸರ್ಕಾರಕ್ಕೆ ಹಿನ್ನೆಡೆ: ಮಹತ್ವದ ತೀರ್ಪು ಪ್ರಕಟಿಸಿದ ಹೈಕೋರ್ಟ್

April 21, 2026
ಜಪಾನ್​ನಲ್ಲಿ 7.4 ತೀವ್ರತೆಯ ಭೂಕಂಪ: ಸುನಾಮಿ ಭೀತಿ ನಡುವೆ ಕರಾವಳಿ ಪ್ರದೇಶಗಳಿಗೆ ತುರ್ತು ಎಚ್ಚರಿಕೆ
ದೇಶ-ವಿದೇಶ

ಜಪಾನ್​ನಲ್ಲಿ 7.4 ತೀವ್ರತೆಯ ಭೂಕಂಪ: ಸುನಾಮಿ ಭೀತಿ ನಡುವೆ ಕರಾವಳಿ ಪ್ರದೇಶಗಳಿಗೆ ತುರ್ತು ಎಚ್ಚರಿಕೆ

April 21, 2026
ಕದನ ವಿರಾಮಕ್ಕೆ ಇನ್ನೊಂದೇ ದಿನ ಬಾಕಿ : ಅಮೆರಿಕ ಹಠ ಬಿಟ್ಟರಷ್ಟೇ ಚರ್ಚೆ ಮಾಡುತ್ತೇವೆ ಎಂದ ಇರಾನ್
ದೇಶ-ವಿದೇಶ

ಕದನ ವಿರಾಮಕ್ಕೆ ಇನ್ನೊಂದೇ ದಿನ ಬಾಕಿ : ಅಮೆರಿಕ ಹಠ ಬಿಟ್ಟರಷ್ಟೇ ಚರ್ಚೆ ಮಾಡುತ್ತೇವೆ ಎಂದ ಇರಾನ್

April 21, 2026
KSRTC-BMTC ನೌಕರರ ಮುಷ್ಕರ: ಪರಿಷ್ಕೃತ ವೇತನಕ್ಕೆ ಆಗ್ರಹ, ಪೊಲೀಸ್ ನಿರ್ಬಂಧದ ನಡುವೆಯೇ ಪ್ರತಿಭಟನೆ
ಪ್ರಮುಖ ಸುದ್ದಿ

KSRTC-BMTC ನೌಕರರ ಮುಷ್ಕರ: ಪರಿಷ್ಕೃತ ವೇತನಕ್ಕೆ ಆಗ್ರಹ, ಪೊಲೀಸ್ ನಿರ್ಬಂಧದ ನಡುವೆಯೇ ಪ್ರತಿಭಟನೆ

April 21, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.