• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

370 ರದ್ದತಿ ಪರಿಣಾಮ 2100 ಕಾಶ್ಮೀರಿ ಪಂಡಿತರು ಕಾಶ್ಮೀರಕ್ಕೆ ವಾಪಸ್!

Mohan Shetty by Mohan Shetty
in ದೇಶ-ವಿದೇಶ, ಪ್ರಮುಖ ಸುದ್ದಿ
kashmir
0
SHARES
0
VIEWS
Share on FacebookShare on Twitter

2019ರ ಆಗಸ್ಟ್ ನಲ್ಲಿ ಕೇಂದ್ರ ಸರ್ಕಾರ(Central Government) ಜಮ್ಮು-ಕಾಶ್ಮೀರಕ್ಕೆ(Jammu Kashmir) ನೀಡಿದ್ದ ವಿಶೇಷ ಸಾಂವಿಧಾನಿಕ ಸ್ಥಾನಮಾನವನ್ನು ರದ್ದು ಮಾಡಿದ ಬಳಿಕ ಕಾಶ್ಮೀರದಲ್ಲಿ ಅನೇಕ ಬದಲಾವಣೆಗಳಾಗುತ್ತಿವೆ. ಕಲ್ಲುತೂರಾಟ, ಭಯೋತ್ಪಾದನಾ ದಾಳಿಗಳು ಕಡಿಮೆಯಾಗಿದ್ದರೇ, ಇನ್ನೊಂದೆಡೆ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದೆ. ಅದೇ ರೀತಿ ಕಾಶ್ಮೀರದ ಮೂಲ ನಿವಾಸಿಗಳಾದ ಕಾಶ್ಮೀರ ಪಂಡಿತರು(Kashmir Pandiths) ಮರಳಿ ಹೆಚ್ಚಿನ ಸಂಖ್ಯೆಯಲ್ಲಿ ಕಣಿವೆ ರಾಜ್ಯಕ್ಕೆ ವಾಪಸ್ ಬರುತ್ತಿದ್ದಾರೆ.

kashmiri

ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ 2019ರ ಆಗಸ್ಟ್ ನಲ್ಲಿ ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿದ ಬಳಿಕ 2100 ಕಾಶ್ಮೀರಿ ಪಂಡಿತರು ಕಾಶ್ಮೀರಕ್ಕೆ ವಾಪಸ್ ಆಗಿದ್ದಾರೆ. 1990ರಲ್ಲಿ ಕಾಶ್ಮೀರಲ್ಲಿ ಪಂಡಿತರ ಮೇಲೆ ಮೂಲಭೂತವಾದಿಗಳ ನಿರಂತರ ದಾಳಿಯ ಪರಿಣಾಮ ಸುಮಾರು 55000 ಕಾಶ್ಮೀರಿ ಪಂಡಿತರ ಕುಟುಂಬಗಳು ಕಣಿವೆ ರಾಜ್ಯವನ್ನು ಬಿಟ್ಟು ದೇಶದ ಬೇರೆ ರಾಜ್ಯಗಳಿಗೆ ವಲಸೆ ಹೋಗಿದ್ದರು. ಅನಂತರ ಕಾಶ್ಮೀರದಲ್ಲಿ ನಿರಂತರವಾಗಿ ಅಶಾಂತಿ ನೆಲೆಸಿದ್ದರ ಪರಿಣಾಮವಾಗಿ ಪಂಡಿತರು ಕಾಶ್ಮೀರಕ್ಕೆ ಮರಳಲು ಸಾಧ್ಯವಾಗಿರಲಿಲ್ಲ.

ಈ ಹಿಂದಿನ ಯುಪಿಎ ಸರ್ಕಾರ ಕಾಶ್ಮೀರಿ ಪಂಡಿತರನ್ನು ಕರೆತರಲು ಅನೇಕ ಯೋಜನೆಗಳನ್ನು ಘೋಷಣೆ ಮಾಡಿದ್ದರು, ಅವುಗಳನ್ನು ಜಾರಿಗೊಳಿಸುವಲ್ಲಿ ಬದ್ದತೆ ತೋರಿರಲಿಲ್ಲ. ಹೀಗಾಗಿ ಕಾಶ್ಮೀರದಲ್ಲಿ ಸೂಕ್ತ ಭದ್ರತೆ ಇಲ್ಲದ ಪರಿಣಾಮ ಪಂಡಿತರು ಕಾಶ್ಮೀರಕ್ಕೆ ಬರಲು ಹಿಂದೇಟು ಹಾಕುತ್ತಿದ್ದರು. 2019ರ ನಂತರ ಕಾಶ್ಮೀರದಲ್ಲಿ ಕಾನೂನು ಸುವ್ಯವಸ್ಥೆ ಹತೋಟಿಗೆ ಬಂದಿದೆ. ಹೀಗಾಗಿ ಅನೇಕ ಕಾಶ್ಮೀರಿ ಪಂಡಿತರು ತಮ್ಮ ಮೂಲ ನೆಲೆಗೆ ಬರುತ್ತಿದ್ದಾರೆ.

pandiths 1990

ಇನ್ನು ಕಾಶ್ಮೀರಿ ಪಂಡಿತರನ್ನು ಮರಳಿ ಕರೆ ತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 2020-21ರಲ್ಲಿ ವಿವಿಧ ಇಲಾಖೆಗಳ 842 ಸರ್ಕಾರಿ ಹುದ್ದೆಗಳನ್ನು ಕಾಶ್ಮೀರಿ ಪಂಡಿತರಿಗೆ ನೀಡಲಾಗಿತ್ತು. ಅಲ್ಲದೇ 2021-22ರಲ್ಲಿ 1264 ಕಾಶ್ಮೀರಿ ಪಂಡಿತರನ್ನು ಸರ್ಕಾರಿ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗಿದೆ. ಅದೇ ರೀತಿ ಇತ್ತೀಚೆಗೆ ಅನೇಕ ಖಾಸಗಿ ಕಂಪನಿಗಳು ಕಾಶ್ಮೀರದಲ್ಲಿ ಅಪಾರ ಪ್ರಮಾಣದ ಬಂಡವಾಳ ಹೂಡಿಕೆ ಮಾಡಿದ್ದು, ಸಾಕಷ್ಟು ಉದ್ಯೋಗಾವಕಾಶಗಳನ್ನು ಸೃಷ್ಟಿಸಲಾಗಿದೆ. ಪ್ರವಾಸೋದ್ಯಮವು ಸಾಕಷ್ಟು ಅಭಿವೃದ್ದಿ ಕಾಣುತ್ತಿದೆ. ಈ ಎಲ್ಲ ಕಾರಣದಿಂದ ಪಂಡಿತರು ಮರಳಿ ಕಾಶ್ಮೀರಕ್ಕೆ ಬರುತ್ತಿದ್ದಾರೆ.

Tags: 1990Indiajammukashmirkashmiripandits

Related News

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.

March 20, 2023
ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?
ದೇಶ-ವಿದೇಶ

ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?

March 15, 2023
ಮದುವೆ ಬರೀ ಲೈಂಗಿಕ ಸಂತೋಷದ ಸಾಧನವಲ್ಲ, ಅದು ಒಂದು ಸಂಸ್ಕಾರ: ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ
ಪ್ರಮುಖ ಸುದ್ದಿ

ಮದುವೆ ಬರೀ ಲೈಂಗಿಕ ಸಂತೋಷದ ಸಾಧನವಲ್ಲ, ಅದು ಒಂದು ಸಂಸ್ಕಾರ: ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ

March 15, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.