‘ಕಸ್ತೂರಿ ಮಹಲ್’ ಚಿತ್ರೀಕರಣ ಪೂರ್ಣ

ಖ್ಯಾತ ನಿರ್ದೇಶಕ ದಿನೇಶ್ ಬಾಬು ಅವರ ನಿರ್ದೇಶನದ 50ನೇ ಚಿತ್ರ ‘ಕಸ್ತೂರಿ ಮಹಲ್’ ನ ಚಿತ್ರೀಕರಣ ಪೂರ್ತಿಯಾಗಿದೆ. ಅಕ್ಟೋಬರ್ ತಿಂಗಳ ಆರಂಭದಲ್ಲಿ ‘ಕಸ್ತೂರಿ ಮಹಲ್’ನ ಚಿತ್ರೀಕರಣವು ಕೊಟ್ಟಿಗೆ ಹಾರ, ಬಾಳೂರು ಸುತ್ತಮುತ್ತಲಿನ ಸುಂದರ ಪರಿಸರದಲ್ಲಿ ಆರಂಭವಾಗಿತ್ತು.

ಆಯುಧ ಪೂಜೆಯ ಶುಭದಿನದಂದು ಅದೇ ಸ್ಥಳದಲ್ಲಿ ಚಿತ್ರೀಕರಣ ಪೂರ್ಣಗೊಳಿಸಿ ಕುಂಬಳಕಾಯಿ ಒಡೆಯಲಾಯಿತು. ಸುಮಾರು 20 ದಿನಗಳ ಕಾಲ ನಡೆದ ಚಿತ್ರೀಕರಣವನ್ನು ದಿನೇಶ್ ಬಾಬು ಅವರು ತಮ್ಮ ಎಂದಿನ ಶೈಲಿಯಂತೆ ಒಂದೇ ಹಂತದಲ್ಲಿ ಪೂರ್ಣಗೊಳಿಸಿದ್ದಾರೆ.
ಚಿತ್ರೀಕರಣದ ಬಳಿಕದ ನಿರ್ಮಾಣ ಸಂಬಂಧಿತ ಕಾರ್ಯಚಟುವಟಿಕೆಗಳು ಸದ್ಯದಲ್ಲೇ ಆರಂಭವಾಗಲಿದೆ. ಬಹುಭಾಷ ನಟಿ ಶಾನ್ವಿ ಶ್ರೀವಾಸ್ತವ್ ನಾಯಕಿಯಾಗಿರುವ ಈ ಚಿತ್ರದ ತಾರಾಬಳಗದಲ್ಲಿ ಸ್ಕಂದ ಅಶೋಕ್, ರಂಗಾಯಣ ರಘು, ಶ್ರುತಿ ಪ್ರಕಾಶ್, ನೀನಾಸಂ ಅಶ್ವಥ್ , ಅಕ್ಷರ್ ಮುಂತಾದವರಿದ್ದಾರೆ.

ಹಾರರ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ದಿನೇಶ್ ಬಾಬು ಅವರೇ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ.
ಶ್ರೀಭವಾನಿ‌ ಆರ್ಟ್ಸ್ ಲಾಂಛನದಲ್ಲಿ ರವೀಶ್ ಆರ್ ಸಿ ನಿರ್ಮಿಸುತ್ತಿರುವ‌ ಈ ಚಿತ್ರಕ್ಕೆ ನವೀನ್ ಆರ್ ಸಿ ಹಾಗೂ ಅಕ್ಷಯ್ ಸಿ.ಎಸ್ ಅವರ ಸಹ ನಿರ್ಮಾಣವಿದೆ. ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ ಹಾಗೂ ಸೌಂದರ್ ರಾಜ್ ಅವರ ಸಂಕಲನ ಕಸ್ತೂರಿ ಮಹಲ್ ಗಿದೆ.

Exit mobile version