• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಪ್ರಭು ಶ್ರೀರಾಮ ಹೇಳಿರುವುದೆಲ್ಲವೂ ಹಿಂದುತ್ವವೇ ಆಗಿದೆ : ಕೇಜ್ರಿವಾಲ್!

Mohan Shetty by Mohan Shetty
in ದೇಶ-ವಿದೇಶ, ಪ್ರಮುಖ ಸುದ್ದಿ
aravind kejrival
0
SHARES
0
VIEWS
Share on FacebookShare on Twitter

ರಾಮಾಯಣದಲ್ಲಿ(Ramayana) ಪ್ರಭು ಶ್ರೀರಾಮ(Sri Ram) ಹೇಳಿರುವುದೆಲ್ಲವೂ ಹಿಂದುತ್ವವೇ ಆಗಿದೆ. ಶ್ರೀರಾಮ ಎಲ್ಲಿಯೂ ದ್ವೇಷ(Grudge) ಮಾಡುವುದನ್ನು ಹೇಳಿಲ್ಲ. ರಾಮಾಯಣ ಮತ್ತು ಭಗವದ್ಗೀತೆಯಲ್ಲಿರುವ(Bhagavadgitha) ಹಿಂದುತ್ವದ ಬಗ್ಗೆ ನನಗೆ ಅಪಾರ ನಂಬಿಕೆ ಇದೆ ಎಂದು ದೆಹಲಿ(Delhi) ಮುಖ್ಯಮಂತ್ರಿ(ChiefMinister) ಅರವಿಂದ್ ಕೇಜ್ರಿವಾಲ್(Aravind Kejrival) ಹೇಳಿದ್ದಾರೆ.

aravind kejrival

ಖಾಸಗಿ ಮಾದ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಕೆಲವರು ಶ್ರೀರಾಮನ ಹೆಸರಿನಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಆದರೆ ಶ್ರೀರಾಮ ಎಂದಿಗೂ ದ್ವೇಷದ ಬಗ್ಗೆ ಹೇಳಿಲ್ಲ. ಕೆಲವರು ದ್ವೇಷದ ಹೆಸರಿನಲ್ಲಿ ಹತ್ಯೆಗಳನ್ನು ಮಾಡುತ್ತಿದ್ದಾರೆ. ಇದು ಅತ್ಯಂತ ದುರದೃಷ್ಟಕರ ಬೆಳವಣಿಗೆ ಎಂದರು. ಹಿಂದುತ್ವ ಎನ್ನುವುದು ಶ್ರೀರಾಮನ ವಾಕ್ಯಗಳಾಗಿವೆ. ರಾಮಾಯಣದಲ್ಲಿ ಶ್ರೀರಾಮ ಹೇಳಿದ ಎಲ್ಲ ಮಾತುಗಳು ಹಿಂದುತ್ವವೇ ಆಗಿದೆ. ನನಗೆ ರಾಮಾಯಣದಲ್ಲಿ ನಂಬಿಕೆ ಇದೆ. ಹೀಗಾಗಿ ಶ್ರೀರಾಮನ ಹಿಂದುತ್ವವನ್ನು ನಾನು ನಂಬುತ್ತೇನೆ. ಆದರೆ ಶ್ರೀರಾಮ ಎಂದಿಗೂ ದ್ವೇಷದ ಬಗ್ಗೆ ಹೇಳಿಲ್ಲ.

ಇಂದು ರಾಜಕೀಯಕ್ಕಾಗಿ ಧರ್ಮವನ್ನು ಬಳಸಿಕೊಳ್ಳಲಾಗುತ್ತಿದೆ. ಇತ್ತೀಚೆಗೆ ನಡೆದ ಉತ್ತರಪ್ರದೇಶ ಚುನಾವಣೆಯಲ್ಲಿ ಧಾರ್ಮಿಕ ಭಾವನೆಗಳನ್ನೇ ಚುನಾವಣೆಯ ಅಜೆಂಡಾವನ್ನಾಗಿ ಬಳಸಿಕೊಳ್ಳಲಾಯಿತು. ಹೀಗಾಗಿಯೇ ಬಿಜೆಪಿ ಉತ್ತರಪ್ರದೇಶದಲ್ಲಿ ಅಧಿಕಾರ ಹಿಡಿಯಿತು. ಆದರೆ ಪಂಜಾಬ್‍ನಲ್ಲಿ ನಾವು ಅಭಿವೃದ್ದಿ ಮತ್ತು ಭವಿಷ್ಯದ ದೃಷ್ಟಿಕೋನವನ್ನು ಜನರ ಮುಂದಿಟ್ಟು ಚುನಾವಣೆ ಎದುರಿಸಿ ಗೆಲುವು ಸಾಧಿಸಿದ್ದೇವೆ. ಇನ್ನು ಮುಂಬರುವ ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ದತೆ ನಡೆಸಿದ್ದೇವೆ.

aravind kejrival

ಗುಜರಾತ್‍ನಲ್ಲಿ ನಮ್ಮ ಪಕ್ಷದ ಸಂಘಟನೆ ಉತ್ತಮವಾಗಿದ್ದು, ಮುಂಬರುವ ಚುನಾವಣೆಯಲ್ಲಿ ಅಭಿವೃದ್ದಿಯ ದೃಷ್ಟಿಕೋನದೊಂದಿಗೆ ಜನರ ಬಳಿ ಮತ ಕೇಳುತ್ತೇವೆ. ಧರ್ಮವನ್ನು ನಾವು ಎಂದಿಗೂ ರಾಜಕೀಯಕ್ಕಾಗಿ ಬಳಸಿಕೊಳ್ಳುವುದಿಲ್ಲ ಎಂದಿದ್ದಾರೆ. ಇನ್ನು ಪಂಚರಾಜ್ಯಗಳ ಚುನಾವಣೆಯ ನಂತರ ಅರವಿಂದ್ ಕೇಜ್ರಿವಾಲ್ ಬಿಜೆಪಿ ಮೇಲೆ ಸರಣಿ ವಾಗ್ದಾಳಿ ನಡೆಸುತ್ತಿದ್ದಾರೆ. ಮುಂಬರುವ ಗುಜರಾತ ಚುನಾವಣೆಯ ತಂತ್ರವಾಗಿ ಬಿಜೆಪಿಯ ನೇರ ಎದುರಾಳಿ ಆಮ್ ಆದ್ಮಿ ಪಕ್ಷ ಎಂಬುದನ್ನು ಬಿಂಬಿಸಲು ಎಎಪಿ ನಾಯಕರು ಈ ರೀತಿ ಮಾಡುತ್ತಿದ್ದಾರೆ. ಆದರೆ ಗುಜರಾತನಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೇರಲಿದೆ ಎಂದು ಬಿಜೆಪಿ ಹೇಳಿದೆ.

Tags: aravindkejrivalDelhiIndiapolitics

Related News

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023
ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ
Vijaya Time

ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ

March 23, 2023
ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!
Vijaya Time

ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!

March 24, 2023
12 ವರ್ಷ ವಾಹನ ಸಂಚಾರವನ್ನೇ ಮಾಡಲಿಲ್ಲ, ಇಲ್ಲಿವರೆಗೆ ಮೊಬೈಲೇ ಬಳಸಿಲ್ಲ: ಚಾರುಕೀರ್ತಿ ಭಟ್ಟಾರಕ ಶ್ರೀಗಳು ಬಿಚ್ಚಿಟ್ಟ ವಿಚಿತ್ರ ಸತ್ಯ
Vijaya Time

ಚಾರುಕೀರ್ತಿ ಭಟ್ಟಾರಕ ಶ್ರೀ ವಿಧಿವಶ: 12 ವರ್ಷ ವಾಹನ ಸಂಚಾರವನ್ನೇ ಮಾಡದ, ಮೊಬೈಲನ್ನೇ ಬಳಸದ ಸಂತರಿವರು

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.