ಹಿಂದಿಯನ್ನು ಬೋಧನಾ ಮಾಧ್ಯಮವಾಗಿ ಬಳಸುವುದನ್ನು ವಿರೋಧಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ವಿಜಯನ್

Kerala CM

Thiruvanthapuram : ಎಲ್ಲಾ ತಾಂತ್ರಿಕ ಮತ್ತು ತಾಂತ್ರಿಕೇತರ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಹಿಂದಿಯನ್ನು(Hindi Language) ಬೋಧನಾ ಮಾಧ್ಯಮವನ್ನಾಗಿ ಮಾಡುವ ಸಂಸದೀಯ ಸಮಿತಿಯ ಶಿಫಾರಸಿಗೆ ವಿನಾಯಿತಿ ನೀಡಿ, ಈ ವಿಚಾರದಲ್ಲಿ ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸುವಂತೆ ಕೇರಳ(Kerala) ಮುಖ್ಯಮಂತ್ರಿ(ChiefMinister) ಪಿಣರಾಯಿ ವಿಜಯನ್(Pinarayi Vijayan) ಅವರು, ಪ್ರಧಾನಿ ನರೇಂದ್ರ ಮೋದಿ(Narendra Modi) ಅವರಿಗೆ ಪತ್ರ ಬರೆದಿದ್ದಾರೆ.

ಪ್ರಧಾನಿಗೆ ಬರೆದ ಪತ್ರದಲ್ಲಿ ಪಿಣರಾಯಿ ವಿಜಯನ್ ಅವರು, ನಮ್ಮ ಸಂವಿಧಾನದಲ್ಲಿ(Constitution) ನಿರ್ದಿಷ್ಟಪಡಿಸಿದ ಎಲ್ಲಾ ರಾಷ್ಟ್ರೀಯ ಭಾಷೆಗಳ ಬಳಕೆಯನ್ನು ಪ್ರೋತ್ಸಾಹಿಸಬೇಕು. ನಮ್ಮ ಉನ್ನತ ಕಲಿಕಾ ಕೇಂದ್ರಗಳಲ್ಲಿ ಹಿಂದಿಯನ್ನು ಮುಖ್ಯ ಬೋಧನಾ ಭಾಷೆಯಾಗಿ ಹೇರಲು ಸಾಧ್ಯವಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ : https://vijayatimes.com/bengaluru-couple-high-drama/

ಈ ವಿಚಾರದ ಕುರಿತು ಟ್ವೀಟ್‌(Tweet) ಮಾಡಿರುವ ಪಿಣರಾಯಿ ವಿಜಯನ್‌, ಕೇಂದ್ರ ಸರ್ಕಾರದ(Central Government) ಹಿಂದಿ ಹೇರಿಕೆಯ ಕ್ರಮವು ಭಾರತ ಪಾಲಿಸಬೇಕಾದ ಆದರ್ಶ, ವೈವಿಧ್ಯತೆ ಮತ್ತು ಏಕತೆಯ ಮೇಲಿನ ಆಕ್ರಮಣವಾಗಿದೆ. ಇದು ಶಿಕ್ಷಣ ಮತ್ತು ಉದ್ಯೋಗದ ವಿಷಯಗಳಲ್ಲಿ ಬಹುಪಾಲು ಭಾರತೀಯರಿಗೆ ಅನನುಕೂಲತೆಯನ್ನುಂಟು ಮಾಡುತ್ತದೆ.

ಸಹಕಾರಿ ಫೆಡರಲಿಸಂಗೆ ಧಕ್ಕೆ ತರುವ ಈ ನಿರ್ದಯ ಕ್ರಮವನ್ನು ಒಗ್ಗಟ್ಟಿನಿಂದ ವಿರೋಧಿಸಬೇಕಾಗಿದೆ. ಭಾರತ ಸರ್ಕಾರದ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳನ್ನು ಸಂವಿಧಾನದ ಎಂಟನೇ ಶೆಡ್ಯೂಲ್ನಲ್ಲಿ ನಿರ್ದಿಷ್ಟಪಡಿಸಿದ ಎಲ್ಲಾ ಭಾಷೆಗಳಲ್ಲಿ ನೀಡಬಹುದು ಎಂದು ಸೂಚಿಸಲು ನಾನು ಈ ಅವಕಾಶವನ್ನು ಬಳಸಿಕೊಳ್ಳುತ್ತೇನೆ.

https://youtu.be/ZJObKtEkf4A ಭಾರಿ ಮಳೆಗೆ ರೈತನ ಬೆಳೆ ನಾಶ.

ಯಾವುದೇ ಭಾಷೆಯನ್ನು ಇತರ ಭಾಷೆಗಳಿಗಿಂತ ಬೋಧನಾ ಮಾಧ್ಯಮವಾಗಿ ಆದ್ಯತೆ ನೀಡಬಾರದು ಎಂದು ನಾನು ವಿನಂತಿಸುತ್ತೇನೆ. ಇದು ನಮ್ಮ ಸಹಕಾರಿ ಫೆಡರಲ್ ಸೆಟಪ್ಗೆ ಒಳ್ಳೆಯದಲ್ಲ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಪ್ರಧಾನಿ ಮೋದಿಗೆ ಬರೆದು ಪತ್ರದಲ್ಲಿ ಹೇಳಿದ್ದಾರೆ.

Exit mobile version