• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಹಿಜಾಬ್ ಅವಕಾಶ ನಿರಾಕರಿಸಿದ ಕೇರಳ.!

Mohan Shetty by Mohan Shetty
in ಪ್ರಮುಖ ಸುದ್ದಿ
ಹಿಜಾಬ್ ಅವಕಾಶ ನಿರಾಕರಿಸಿದ ಕೇರಳ.!
0
SHARES
0
VIEWS
Share on FacebookShare on Twitter

ತಿರುವನಂತಪುರಂ : ರಾಜ್ಯದಲ್ಲಿ ಹಿಜಾಬ್ ಕುರಿತು ಸಾಕಷ್ಟು ಸದ್ದು ಮಾಡುತ್ತಿರುವ ಹಿನ್ನೆಲೆಯಲ್ಲಿ ಅತ್ತ ಕೇರಳದಲ್ಲೂ ಕೂಡ ಸ್ಟೂಡೆಂಟ್ ಪೊಲೀಸ್ ಕೆಡೆಟ್(ಎಸ್ಪಿಸಿ) ಯೋಜನೆಯಲ್ಲಿ ಹಿಜಾಬ್ ಮತ್ತು ಪೂರ್ಣ ತೋಳಿನ ಉಡುಪನ್ನು ಧರಿಸಲು ಅವಕಾಶ ನೀಡುವುದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಎಸ್ಪಿಸಿ ಯೋಜನೆಯಲ್ಲಿ ಹಿಜಾಬ್ ಮತ್ತು ಪೂರ್ಣ ತೋಳಿನ ಉಡುಪನ್ನು ಧರಿಸಲು ಅನುಮತಿ ನೀಡುವಂತೆ ಕೋರಿ ಮುಸ್ಲಿಮ್ ವಿದ್ಯಾರ್ಥಿನಿಯೊಬ್ಬಳು ರಾಜ್ಯ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದಳು.

ಈ ಮನವಿಯನ್ನು ಮಾನ್ಯ ಮಾಡಿದರೆ ಎಸ್ಪಿಸಿಯ ಜಾತ್ಯಾತೀತ ನಿಲುವಿನ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ಅಭಿಪ್ರಾಯಪಟ್ಟು ಅರ್ಜಿಯನ್ನು ವಜಾಗೊಳಿಸಿದೆ.
ಎಸ್ಪಿಸಿ ಯೋಜನೆಯೂ ಶಾಲಾ ಆಧಾರಿತ ಯುವ ಅಭಿವೃದ್ಧಿಯ ಭಾಗವಾಗಿದ್ದು, ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ಕಾನೂನು, ಶಿಸ್ತು, ನಾಗರಿಕ ಪ್ರಜ್ಞೆ, ಸಮಾಜದ ದುರ್ಬಲ ವರ್ಗಗಳ ಬಗ್ಗೆ ಸಹಾನುಭೂತಿ ಮೂಡಿಸಿ ಭವಿಷ್ಯದಲ್ಲಿ ಉತ್ತಮ ನಾಯಕರಾಗಿ ರೂಪುಗೊಳ್ಳಲು ತರಬೇತಿ ನೀಡಲಾಗುತ್ತದೆ.


ಸ್ಟೂಡೆಂಟ್ ಪೊಲೀಸ್ ಕೆಡೆಟ್ ಯೋಜನೆಯ ಸಮವಸ್ತ್ರದಲ್ಲಿ ಪ್ರತ್ಯೇಕತೆ ತರುವುದು ಸರಿಯಲ್ಲ. ಈ ಸಮವಸ್ತ್ರವನ್ನು ಧರಿಸಲು ಇಷ್ಟವಿಲ್ಲದವರು ಎಸ್ಪಿಸಿಯನ್ನು ಸೇರಬಾರದು. ಎಸ್ಪಿಸಿಗೆ ಸೇರಿದ ಬಳಿಕ ಈಗಾಗಲೇ ಸಿದ್ಧಪಡಿಸಲಾಗಿರುವ ಸಮವಸ್ತ್ರವನ್ನು ಧರಿಸಬೇಕು. ಪ್ರಸ್ತುತ ಪರಿಸ್ಥಿತಿಯಲ್ಲಿ ಸಮವಸ್ತ್ರದೊಂದಿಗೆ ಧಾರ್ಮಿಕ ವಿಷಯಗಳನ್ನು ಸಂಯೋಜಿಸಿದರೆ ಮುಂದೆ ಇದೇ ರೀತಿಯ ಬೇಡಿಕೆ ಬೇರೆ ವಿಭಾಗಗಳಲ್ಲಿಯೂ ಬರಬಹುದು. ಇದರಿಂದಾಗಿ ಜಾತ್ಯಾತೀತ ತತ್ವಕ್ಕೆ ಭಂಗವಾಗುತ್ತದೆ ಎಂದು ಗೃಹ ಸಚಿವಾಲಯ ತನ್ನ ಆದೇಶದಲ್ಲಿ ಹೇಳಿದೆ. ಪ್ರಸ್ತುತ ಕೇರಳದ ಎಲ್ಲಾ ಪೊಲೀಸ್ ಸಿಬ್ಬಂದಿ ಒಂದೇ ಸಮವಸ್ತ್ರವನ್ನು ಧರಿಸುತ್ತಾರೆ ಮತ್ತು ಸಮವಸ್ತ್ರದಲ್ಲಿ ಯಾವುದೇ ಧಾರ್ಮಿಕ ಚಿಹ್ನೆಗಳ ಬಳಕೆಗೆ ಅನುಮತಿಯಿಲ್ಲ. ಎಸ್ಪಿಸಿಗೂ ಇದೇ ವ್ಯವಸ್ಥೆಯನ್ನು ಅನುಸರಿಸಲಾಗುತ್ತಿದೆ ಎಂದು ಸರ್ಕಾರ ತಿಳಿಸಿದೆ.

Tags: controversyEducationhijaabkeralamuslimtrending

Related News

ತಾಂತ್ರಿಕ ದೋಷದಿಂದ ಹಸಿರು ಮಾರ್ಗದಲ್ಲಿ ಹಳಿ ತಪ್ಪಿದ ರೀ ರೈಲ್ ಸ್ಥಳಾಂತರ: ಮತ್ತೆ ಸಂಚಾರ ಆರಂಭ
ಪ್ರಮುಖ ಸುದ್ದಿ

ತಾಂತ್ರಿಕ ದೋಷದಿಂದ ಹಸಿರು ಮಾರ್ಗದಲ್ಲಿ ಹಳಿ ತಪ್ಪಿದ ರೀ ರೈಲ್ ಸ್ಥಳಾಂತರ: ಮತ್ತೆ ಸಂಚಾರ ಆರಂಭ

October 3, 2023
ಸಕ್ಕರೆ ಕಾಯಿಲೆಯಿಂದ ನೀವು ಬಳಲುತ್ತಿದ್ದೀರಾ? ಹಾಗಾದ್ರೆ ಡ್ರೈಫ್ರೂಟ್ಸ್ ಅನ್ನು ಈ ರೀತಿ ಸೇವಿಸಿ
ಆರೋಗ್ಯ

ಸಕ್ಕರೆ ಕಾಯಿಲೆಯಿಂದ ನೀವು ಬಳಲುತ್ತಿದ್ದೀರಾ? ಹಾಗಾದ್ರೆ ಡ್ರೈಫ್ರೂಟ್ಸ್ ಅನ್ನು ಈ ರೀತಿ ಸೇವಿಸಿ

October 3, 2023
ಈಶಾನ್ಯ, ಉತ್ತರ ಭಾರತದಲ್ಲಿ ಸರಣಿ ಭೂಕಂಪ – ಆತಂಕದಲ್ಲಿ ಜನತೆ..!
ದೇಶ-ವಿದೇಶ

ಈಶಾನ್ಯ, ಉತ್ತರ ಭಾರತದಲ್ಲಿ ಸರಣಿ ಭೂಕಂಪ – ಆತಂಕದಲ್ಲಿ ಜನತೆ..!

October 3, 2023
ಹುಬ್ಬಳ್ಳಿಯಲ್ಲಿ ಮೂವರು ಉಗ್ರರ ಬಂಧನ, ಕರ್ನಾಟಕವನ್ನು ಭಯೋತ್ಪಾದನೆಯ ಕೇಂದ್ರವನ್ನಾಗಿ ಮಾಡಲು ದೊಡ್ಡ ಪ್ಲಾನ್
ದೇಶ-ವಿದೇಶ

ಹುಬ್ಬಳ್ಳಿಯಲ್ಲಿ ಮೂವರು ಉಗ್ರರ ಬಂಧನ, ಕರ್ನಾಟಕವನ್ನು ಭಯೋತ್ಪಾದನೆಯ ಕೇಂದ್ರವನ್ನಾಗಿ ಮಾಡಲು ದೊಡ್ಡ ಪ್ಲಾನ್

October 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.