- ಖಾದಿ ಉತ್ಪನ್ನಗಳ ಉತ್ತೇಜನಕ್ಕೆ (Khadi mandatory for state government employees) ಸರ್ಕಾರದ ಮಹತ್ವದ ತೀರ್ಮಾನ
- ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ ಧರಿಸಿ ಕರ್ತವ್ಯ ನಿರ್ವಹಿಸಲು ಸರ್ಕಾರ ಆದೇಶ
- ಸರ್ಕಾರಿ ಕಚೇರಿಗಳಲ್ಲಿ ಸ್ವದೇಶಿ ಉಡುಪಿಗೆ ಅಧಿಕೃತ ಪ್ರೋತ್ಸಾಹ
Bengaluru: ರಾಜ್ಯ ಸರ್ಕಾರವು ಖಾದಿ ಉತ್ಪನ್ನಗಳ ಬಳಕೆಯನ್ನು (Khadi mandatory for state government employees) ಉತ್ತೇಜಿಸುವ ಉದ್ದೇಶದಿಂದ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.
ಈ ನಿರ್ಧಾರದಂತೆ, ರಾಜ್ಯದ ಎಲ್ಲಾ ಸರ್ಕಾರಿ ನೌಕರರು ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆಗಳನ್ನು ಧರಿಸಿ ಕಚೇರಿಗೆ ಹಾಜರಾಗುವುದು ಕಡ್ಡಾಯವಾಗಿದೆ.
ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ (Dr. Shalini Rajneesh) ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಖಾದಿ ಬಟ್ಟೆಗಳಿಗೆ ಸಾರ್ವಜನಿಕ ಮಟ್ಟದಲ್ಲಿ ಹೆಚ್ಚಿನ ಪ್ರೋತ್ಸಾಹ ನೀಡುವ ಜೊತೆಗೆ, ಗಾಂಧಿವಾದಿ (Khadi mandatory for state government employees) ಮೌಲ್ಯಗಳನ್ನು ಪುನರುಜ್ಜೀವನಗೊಳಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಈ ಯೋಜನೆಗೆ ಅಧಿಕೃತ ಚಾಲನೆ ಏಪ್ರಿಲ್ 24ರಂದು ದೊರೆಯಲಿದೆ.
ಈ ನಿಯಮವು ಕೇವಲ ಸರ್ಕಾರಿ ಕಚೇರಿಗಳಿಗೆ ಮಾತ್ರ ಸೀಮಿತವಾಗದೇ, ಸರ್ಕಾರಿ ಸ್ವಾಮ್ಯದ ನಿಗಮ-ಮಂಡಳಿಗಳು, ಪ್ರಾಧಿಕಾರಗಳು, ವಿಶ್ವವಿದ್ಯಾಲಯಗಳು ಹಾಗೂ ಅನುದಾನಿತ ಸಂಸ್ಥೆಗಳ ಅಧಿಕಾರಿ ಮತ್ತು ನೌಕರರಿಗೂ ಅನ್ವಯವಾಗಲಿದೆ.
ಖಾದಿ ಗ್ರಾಮೋದ್ಯೋಗ ಮಂಡಳಿಯ ಉತ್ಪನ್ನಗಳನ್ನು ಹೆಚ್ಚು ಜನಪ್ರಿಯಗೊಳಿಸುವ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಸಭೆಯಲ್ಲಿ ಮಾತನಾಡಿದ ಮುಖ್ಯ ಕಾರ್ಯದರ್ಶಿಗಳು, ಉಡುಪಿನಲ್ಲಿನ ಬದಲಾವಣೆ ವ್ಯಕ್ತಿಯ ಮನೋಭಾವ ಮತ್ತು ವರ್ತನೆಯಲ್ಲಿ ಸಕಾರಾತ್ಮಕ ಬದಲಾವಣೆ ತರಬಲ್ಲದು ಎಂದು ಅಭಿಪ್ರಾಯಪಟ್ಟರು.
ವಿಧಾನಸೌಧದ ಮೇಲಿರುವ “ಸರ್ಕಾರಿ ಕೆಲಸ ದೇವರ ಕೆಲಸ” ಎಂಬ ಶಾಸನವು ಈ ಮೌಲ್ಯವನ್ನು ಪ್ರತಿಬಿಂಬಿಸುತ್ತದೆ ಎಂದೂ ಅವರು ಹೇಳಿದರು.
ವಿಧಾನಸೌಧದಲ್ಲಿ ಸಂರಕ್ಷಿಸಲ್ಪಟ್ಟಿರುವ ಹಳೆಯ ಛಾಯಾಚಿತ್ರಗಳು 1940, 1950 ಮತ್ತು 1960ರ ದಶಕಗಳಲ್ಲಿ ಮುಖ್ಯಮಂತ್ರಿಗಳು, ಸಚಿವರು ಹಾಗೂ ಶಾಸಕರು ನಿಯಮಿತವಾಗಿ ಖಾದಿ ಬಟ್ಟೆ ಧರಿಸುತ್ತಿದ್ದ ಕಾಲಘಟ್ಟವನ್ನು ನೆನಪಿಸುತ್ತವೆ.
ಆ ಕಾಲದ ನಾಯಕತ್ವ ಗಾಂಧಿವಾದಿ ತತ್ವಗಳು ಮತ್ತು ರಾಷ್ಟ್ರಸೇವೆಯ ನಿಷ್ಠೆಯನ್ನು ಪ್ರತಿನಿಧಿಸುತ್ತಿತ್ತು. ಇಂತಹ ಮೌಲ್ಯಗಳನ್ನು ಇಂದಿನ ಆಡಳಿತ ವ್ಯವಸ್ಥೆಯಲ್ಲೂ ಪುನಃ ಬೆಳೆಸುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ.
ಖಾದಿ ಕೇವಲ ಒಂದು ಉಡುಪಲ್ಲ, ಅದು ಸ್ವಾವಲಂಬನೆ, ಶಿಸ್ತು ಮತ್ತು ರಾಷ್ಟ್ರಭಕ್ತಿಯ ಸಂಕೇತ ಎಂಬ ಸಂದೇಶವನ್ನು ಸರ್ಕಾರ ಸಾರಲು ಮುಂದಾಗಿದೆ.
ಸಭೆಯಲ್ಲಿ ತೆಗೆದುಕೊಳ್ಳಲಾದ ನಿರ್ಧಾರಗಳಂತೆ, ಪುರುಷ ನೌಕರರು ಖಾದಿ ಶರ್ಟ್, ಪ್ಯಾಂಟ್, ಓವರ್ ಕೋಟ್ (Overcoat) ಹಾಗೂ ಇತರೆ ಶಿಸ್ತಿನ ಉಡುಗೆಗಳನ್ನು ಧರಿಸಬೇಕು.
ಮಹಿಳಾ ನೌಕರರು ಖಾದಿ ಅಥವಾ ಖಾದಿ ಸಿಲ್ಕ್ ಸೀರೆ, ಚೂಡಿದಾರ್ ಸೇರಿದಂತೆ ಶಿಸ್ತಿನ ಉಡುಗೆಗಳನ್ನು ಬಳಸಬಹುದು. ಖಾದಿ ಗ್ರಾಮೋದ್ಯೋಗ ಮಂಡಳಿಯ ಮಳಿಗೆಗಳಲ್ಲಿ ಖಾದಿ ಬಟ್ಟೆ ಖರೀದಿಸಲು ನೌಕರರಿಗೆ ಈಗಾಗಲೇ ನೀಡಲಾಗುತ್ತಿರುವ ರಿಯಾಯಿತಿಗೆ ಹೆಚ್ಚುವರಿಯಾಗಿ ಶೇ.5 ರಷ್ಟು ವಿಶೇಷ ರಿಯಾಯಿತಿ ನೀಡಲು ಸರ್ಕಾರ ನಿರ್ಧರಿಸಿದೆ.
ಇದರಿಂದ ಖಾದಿ ಉತ್ಪನ್ನಗಳ ಮಾರಾಟ ಹೆಚ್ಚಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
ಇದಲ್ಲದೆ, 2026-27ನೇ ಸಾಲಿನ ಆಯ-ವ್ಯಯದಲ್ಲಿ ‘ಸರ್ಕಾರಿ ನೌಕರರ ಕ್ಯಾಂಟೀನ್’ ಆರಂಭಿಸುವ ಯೋಜನೆಯನ್ನು ಘೋಷಿಸಲು ಸರ್ಕಾರ ಮುಂದಾಗಿದೆ.
ಎಂಎಸ್ಐಎಲ್ ಸಂಸ್ಥೆಯ ಮೂಲಕ ಸೇನಾ ಕ್ಯಾಂಟೀನ್ ಮಾದರಿಯಲ್ಲಿ ದಿನಬಳಕೆ ವಸ್ತುಗಳನ್ನು ರಿಯಾಯಿತಿ ದರದಲ್ಲಿ ಪೂರೈಸುವ ಉದ್ದೇಶವಿದೆ.
ಹಾಗೆಯೇ, ಕೆಎಸ್ಐಸಿ ಸಂಸ್ಥೆಯು ಈಗ ಭಾರತೀಯ ಆಡಳಿತ ಸೇವೆಯ ಅಧಿಕಾರಿಗಳಿಗೆ ನೀಡುತ್ತಿರುವ ಶೇ.5 ರಷ್ಟು ವಿಶೇಷ ರಿಯಾಯಿತಿಯನ್ನು ರಾಜ್ಯದ ಎಲ್ಲಾ ಸರ್ಕಾರಿ ನೌಕರರಿಗೂ ವಿಸ್ತರಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಎಲ್ಲ ಕ್ರಮಗಳು ಸರ್ಕಾರಿ ನೌಕರರ ಕಲ್ಯಾಣದ ಜೊತೆಗೆ ಸ್ಥಳೀಯ ಉತ್ಪಾದನೆ ಮತ್ತು ಸ್ವದೇಶಿ ಚಳವಳಿಗೆ ಹೊಸ ಚೈತನ್ಯ ನೀಡಲಿದೆ.