Bengaluru: ಕಳೆದ ಕೆಲ ದಿನಗಳಿಂದ ರಾಜ್ಯ ಕಾಂಗ್ರೆಸ್ (State Congress) ಪಾಳಯದಲ್ಲಿ ಕೆಪಿಸಿಸಿ ಅಧ್ಯಕ್ಷ (KPCC President) ಪಟ್ಟ ಹಾಗೂ ನಾಯಕತ್ವ ಬದಲಾವಣೆ (Leadership change) ವಿಚಾರವಾಗಿ ಬಂಡಾಯ ತಾರಕಕ್ಕೇರಿದ್ದು, ಈ ನಡುವಲ್ಲೇ ಬಹಿರಂಗ ಹೇಳಿಕೆಗಳ ನೀಡದಂತೆ ನಾಯಕರಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು (Congress president Mallikarjuna Kharge) ಖಡಕ್ ಎಚ್ಚರಿಕೆ ರವಾನಿಸಿದ್ದಾರೆ ಕೆಪಿಸಿಸಿ ಅಧ್ಯಕ್ಷರ (KPCC President) ಬದಲಾವಣೆ ಕುರಿತು ಪ್ರಸ್ತಾಪ ಹಾಗೂ ಕೆಪಿಸಿಸಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ (KPCC President DK Shivakumar) ವಿರುದ್ಧ ಬಹಿರಂಗ ಹೇಳಿಕೆಗಳನ್ನು (Disclosure statements) ನೀಡುತ್ತಿರುವ ಬಗ್ಗೆ ಕೆ ಎನ್ ರಾಜಣ್ಣ ಅವರಿಗೆ ಖರ್ಗೆ (Kharge) ಎಚ್ಚರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹೆಚ್ಚುವರಿ ಉಪಮುಖ್ಯಮಂತ್ರಿ (Deputy Chief Minister) ಹುದ್ದೆ ಸೃಷ್ಟಿ ಬಗ್ಗೆ ಮಾತನಾಡುತ್ತಿದ್ದ ರಾಜಣ್ಣ ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ (Change of KPCC Chairman) ಬಗ್ಗೆ ಬಹಿರಂಗವಾಗಿ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದರು. ಅಲ್ಲದೆ ಸಿದ್ದರಾಮಯ್ಯ (Siddaramaiah) ಹೆಸರು ದುರ್ಬಳಕೆ ಮಾಡಿಕೊಳ್ಳುವುದು ಬೇಡ ಎಂಬ ಡಿ.ಕೆ.ಶಿವಕುಮಾರ್ (DK Shivakumar) ಸಲಹೆಗೆ ಪ್ರತಿಕ್ರಿಯೆಯಾಗಿ, ಡಿ.ಕೆ.ಶಿವಕುಮಾರ್ ಅವರೇ ಎಐಸಿಸಿ (AICC) ಹೆಸರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಮೊದಲು ಅದನ್ನು ನಿಲ್ಲಿಸಲಿ. ಅವರ ಎಚ್ಚರಿಕೆ ಗಿಚ್ಚರಿಕೆ ಎಲ್ಲ ನಡೆಯಲ್ಲ ಎಂದು ಕೆಪಿಸಿಸಿ ಅಧ್ಯಕ್ಷರ ವಿರುದ್ಧವೇ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕೆ ಎನ್ ರಾಜಣ್ಣ (K N Rajanna) ಅವರಿಗೆ ಖುದ್ದು ಖರ್ಗೆ ಅವರೇ ಬುದ್ಧಿವಾದ ಹೇಳಿದ್ದಾರೆ ಎನ್ನಲಾಗಿದೆ.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಹೈಕಮಾಂಡ್ಗೆ (High Command) ಬಿಟ್ಟದ್ದು. ಸೂಕ್ತ ಸಮಯದಲ್ಲಿ ನಾನು ಏನು ಮಾಡಬೇಕೋ ಮಾಡುತ್ತೇನೆ. ಅನಗತ್ಯವಾಗಿ ಈ ವಿಚಾರದಲ್ಲಿ ಗೊಂದಲ ಸೃಷ್ಟಿ ಮಾಡಬೇಡಿ. ಯಾವುದೇ ಕಾರಣಕ್ಕೂ ಬಹಿರಂಗ ಹೇಳಿಕೆ ನೀಡಬೇಡಿ ಎಂದು ತಿಳಿಸಿದ್ದಾಗಿ ಹೇಳಲಾಗಿದೆ. ಇನ್ನು ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಸ್ಥಾನದ (KPCC Chairmanship) ಮೇಲೆ ಬಲವಾದ ಕಣ್ಣಿಟ್ಟಿರುವ ಸಚಿವ ಜಾರಕಿಹೊಳಿ (Minister Jarakiholi), ಸಚಿವ ಕೆ.ಎನ್ ರಾಜಣ್ಣ (Minister KN Rajanna), ಪೂರ್ಣಪ್ರಮಾಣದ ಅಧ್ಯಕ್ಷರ ನೇಮಕಕ್ಕೆ 6 ತಿಂಗಳಿಂದ ಪಟ್ಟು ಹಿಡಿದಿದ್ದಾರೆ. ಇದೆಲ್ಲದರ ಮಧ್ಯೆ ಕೆ.ಎನ್. ರಾಜಣ್ಣ ಯಾರ ಮಾತಿಗೂ ಬಗ್ಗುವಂತೆ ಕಾಣುತ್ತಿರಲಿಲ್ಲ. ಇದೀಗ ಹೈಕಮಾಂಡ್ ನಾಯಕರೇ (Leaders of the High Command) ನೇರವಾಗಿ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.