- ಸಮೀರ್ ವಾಂಖೆಡೆ ವೈಯಕ್ತಿಕ ದ್ವೇಷವೇ ಆರ್ಯನ್ ಬಂಧನಕ್ಕೆ ಕಾರಣ – ಕಿಶೋರ್ ತಿವಾರಿ
ಮುಂಬೈನಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ) ಮತ್ತು ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಬಂಧನಕ್ಕೊಳಗಾದ ಪ್ರಕರಣದಲ್ಲಿ ನ್ಯಾಯಾಂಗ ತನಿಖೆ ನಡೆಸುವಂತೆ ಶಿವಸೇನಾ ನಾಯಕ ಕಿಶೋರ್ ತಿವಾರಿ ಸುಪ್ರೀಂ ಕೋರ್ಟ್ಗೆ ಮನವಿ ಮಾಡಿದ್ದಾರೆ.
ಡ್ರಗ್ಸ್ ಪಾರ್ಟಿ ಮಾಡಿದ ಆರೋಪದ ಮೇಲೆ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅವರನ್ನು ಎನ್ಸಿಬಿ ಅಧಿಕಾರಿಗಳು ಬಂಧಿಸಿದ ಕುರಿತು ಪರ-ವಿರೋಧದ ಚರ್ಚೆ ನಡೆಯುತ್ತಲೇ ಇದೆ. ಕೆಲವರು ಎನ್ಸಿಬಿ ಅಧಿಕಾರಿಗಳ ಪರ ಮಾತನಾಡುತ್ತಿದ್ದರೆ, ಇನ್ನೂ ಕೆಲವರು ಆರ್ಯನ್ ಖಾನ್ಗೆ ಬೆಂಬಲ ಸೂಚಿಸುತ್ತಿದ್ದಾರೆ. ಸ್ಟಾರ್ ಪುತ್ರನನ್ನು ಬಂಧಿಸಿದ ಎನ್ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಮೇಲೆ ಕೆಲವರು ಆರೋಪ ಹೊರಿಸುತ್ತಿದ್ದಾರೆ. ತಮ್ಮ ವೈಯಕ್ತಿಕ ದ್ವೇಷಕ್ಕಾಗಿ ಅವರು ಬಾಲಿವುಡ್ ಸೆಲೆಬ್ರಿಟಿಗಳನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಶಿವಸೇನಾ ಮುಂಖಡ ಕಿಶೋರ್ ತಿವಾರಿ ಆರೋಪಿಸಿದ್ದಾರೆ.
ಈ ಬಗ್ಗೆ ಸುಪ್ರೀಂ ಕೋರ್ಟ್ಗೆ ಸಲ್ಲಿಸಿರುವ ಅರ್ಜಿಯಲ್ಲಿ ಕಿಶೋರ್ ತಿವಾರಿ ಅವರು ಎನ್ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಮೇಲೆ ಕೆಲವು ಆರೋಪಗಳನ್ನು ಹೊರಿಸಿದ್ದಾರೆ. ಸಮೀರ್ ವಾಂಖೆಡೆ ಪತ್ನಿ ಕ್ರಾಂತಿ ಕೇದ್ಕರ್ ಅವರು ಬಾಲಿವುಡ್ನಲ್ಲಿ ಮಿಂಚಬೇಕು ಎಂದುಕೊಂಡಿದ್ದರು. ಆದರೆ ಯಶಸ್ವಿ ಆಗಲಿಲ್ಲ. ಆ ಸೇಡಿಗಾಗಿ ಅವರು ಬಾಲಿವುಡ್ ಸೆಲೆಬ್ರಿಟಿಗಳ ಮೇಲೆ ಪದೇಪದೇ ದಾಳಿ ಮಾಡುತ್ತಿದ್ದಾರೆ. ಕಳೆದ ಒಂದೂವರೆ ವರ್ಷದಿಂದ ನಡೆದ ಡ್ರಗ್ಸ್ ದಾಳಿಗೆ ಈ ದ್ವೇಷವೇ ಕಾರಣ ಎಂಬುದು ಕಿಶೋರ್ ತಿವಾರಿ ಆರೋಪವಾಗಿದೆ.