`ಟಿಪ್ಪು ಶಿಷ್ಯ ಸಿದ್ದು ಖಾನ್, ಗೋ ಬ್ಯಾಕ್ʼ ; ಕೊಡಗಿನಲ್ಲಿ ಸಿದ್ದರಾಮಯ್ಯಗೆ ಘೇರಾವ್!

ಮಡಿಕೇರಿ : ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ವಿರುದ್ದ ಯುವ ಬಿಜೆಪಿ ಕಾರ್ಯಕರ್ತರು(BJP Workers) ಕಪ್ಪುಪಟ್ಟಿ ಪ್ರದರ್ಶಿಸಿ, `ಟಿಪ್ಪು ಶಿಷ್ಯ ಸಿದ್ದು ಖಾನ್, ಗೋ ಬ್ಯಾಕ್ʼ ಎಂದು ಪೋಸ್ಟರ್ ಪ್ರದರ್ಶಿಸಿ ಧಿಕ್ಕಾರ ಕೂಗಿದ ಘಟನೆ ನಡೆದಿದೆ.
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲು ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಕೊಡಗಿಗೆ(Kodagu) ಭೇಟಿ ನೀಡಿದ್ದಾರೆ.

ಈ ವೇಳೆ ಸಿದ್ದರಾಮಯ್ಯ ಕಾರಿಗೆ ಘೇರಾವ್ ಹಾಕಿ, ಕಪ್ಪುಪಟ್ಟಿ ಪ್ರದರ್ಶಿಸಿ, ಧಿಕ್ಕಾರ ಕೂಗಿದ ಯುವ ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯ ಹಿಂದೂ ವಿರೋಧಿ ಎಂದು ಆಕ್ರೋಶ ಹೊರಹಾಕಿದ್ಧಾರೆ. “ಸ್ವಾತಂತ್ರ್ಯ ದಿನದಂದು ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಯಾಕೆ ಹಾಕಬೇಕು..?” ಎಂದು ಇತ್ತೀಚೆಗೆ ಸಿದ್ದರಾಮಯ್ಯ ಪ್ರಶ್ನಿಸಿದ್ದರು. ಈ ಹೇಳಿಕೆ ವಿರುದ್ದ ಯುವ ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದಾರೆ.


ಟಿಪ್ಪುವಿನ ಫೋಟೋ ಎಲ್ಲಿ ಬೇಕಾದರೂ ಹಾಕಬಹುದು ಆದರೆ ಸಾವರ್ಕರ್ ಫೋಟೋ ಹಾಕಲು ಮಾತ್ರ ಸಿದ್ದರಾಮಯ್ಯ ಅವರಿಗೆ ಧರ್ಮ ಅಡ್ಡ ಬರುತ್ತದೆ. ಓಲೈಕೆ ರಾಜಕಾರಣದ ಪರಮಾವಧಿಯಿದು. ಜಿಹಾದಿ ಮಾನಸಿಕತೆಯನ್ನು ಕಾಂಗ್ರೆಸ್ ಪಕ್ಷ(Congress Party) ಬೆಳೆಸುತ್ತಿರುವುದು ನಿಜಕ್ಕೂ ಆತಂಕಕಾರಿ ಸಂಗತಿ. ಸಿದ್ದರಾಮಯ್ಯ ಅವರು ಸ್ವತಂತ್ರ ಭಾರತದ ಜಿನ್ಹಾ. ಮುಸ್ಲಿಂ ಏರಿಯಾಗಳನ್ನು ಈ ದೇಶದ ಅಖಂಡತೆಯಿಂದ ಛಿದ್ರಗೊಳಿಸುವುದಕ್ಕೆ ಹೊರಟಿದ್ದೀರಾ?

ಮತ್ತೊಮ್ಮೆ ದೇಶ ವಿಭಜಿಸುವ ಕಾಂಗ್ರೆಸ್ ಪಕ್ಷದ ಹಿಡನ್ ಅಜೆಂಡಾ ಸಿದ್ದರಾಮಯ್ಯ ಬಾಯಿಂದ ಬಹಿರಂಗವಾಗಿದೆ. ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಹಾಕಬಾರದಿತ್ತು ಎನ್ನಲು ಸಿದ್ದರಾಮಯ್ಯ ಯಾರು? ಮುಸ್ಲಿಂ ಏರಿಯಾಗಳು ಈ ದೇಶದ ಭಾಗವಲ್ಲವೇ ಅಥವಾ ನಿಮ್ಮ ನಾಯಕತ್ವದಲ್ಲಿ ಅವರಿಗೆ ಸ್ವಾಯತ್ತತೆ ನೀಡಲಾಗಿದೆಯೋ? ಎಂದು ಬಿಜೆಪಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿತ್ತು.

Exit mobile version