ಬೆಂಗಳೂರು ಸೆ 6 : ಕೃಷಿ ಮಾರುಕಟ್ಟೆ ಕಾಯ್ದೆ ಹಾಗೂ ಭೂ ಸುದಾರಣಾ ಕಾಯ್ದೆ ಹಾಗೂ ಭೂ ಸ್ವಾದೀನ ಕಾಯ್ದೆಗೆ ತಡೆಗೆ ಆಗ್ರಹಿಸಿ ಸೆ 13 ರಂದು ರೈತರಿಂದ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ರಾಜ್ಯ ರೈತ ಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ. ಹಾಗೂ ಈ ವಿಚಾರಕ್ಕೆ ಸಂಬಂಧಿಸಿದಂತೆ ಸೆ 27ರಂದು ಭಾರತ್ ಬಂದ್ ಕೂಡ ಇದ್ದು, ರಾಜ್ಯದಲ್ಲೂ ಕೂಡ ಬಂದ್ಗೆ ಕರೆ ನೀಡಲಾಗುವುದು ಎಂದು ಅವರು ತಿಳಿಸಿದರು.
ಉದ್ಯಮಿ ಗಳು ಬಹುರಾಷ್ಟ್ರೀಯ ಕಂಪೆನಿಗಳು ಮತ್ತು ರಿಯಲ್ ಎಸ್ಟೇಟ್ ವ್ಯಾಪಾರಿ ಗಳು ಅಸಹಾಯಕ ರೈತರಿಗೆ ವಂಚಿಸಿ ಸುಲಭ ದಲ್ಲಿ ಭೂಮಿ ಖರೀದಿ ಮಾಡಲು ನೆರವಾಗುವ ಉದ್ದೇಶದಿಂದಲೇ ಈ ತಿದ್ದುಪಡಿ ತರಲಾಗಿದೆ. ಇದರಲ್ಲಿ ಯಾವ ರೈತರ ಹಿತದೃಷ್ಟಿಯೂ ಕಂಡು ಬರುತ್ತಿಲ್ಲವೆಂಬುವುದು ಹಲವರ ವಾದವಾಗಿದೆ.