- ಕೋಲ್ಕತ್ತಾದ ರಿತುಜಾರ್ ಹೋಟೆಲ್ನಲ್ಲಿ ಸಂಭವಿಸಿದ ಬೆಂಕಿ (Kolkata hotel fire tragedy) ದುರಂತದಲ್ಲಿ ಕನಿಷ್ಠ 14 ಜನರು ಸಾವು
- ಘಟನೆಯಲ್ಲಿ 14 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಹಲವರನ್ನು ರಕ್ಷಿಸಲಾಗಿದೆ
- ಕೋಲ್ಕತ್ತಾ ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ
Kolkata: ಕೋಲ್ಕತ್ತಾ ನಗರದ ಬುರ್ರಾಬಜಾರ್ ಪ್ರದೇಶದಲ್ಲಿರೋ ರಿತುರಾಜ್ ಹೋಟೆಲ್ನಲ್ಲಿ (Rituraj Hotel) ಭಾರೀ ಬೆಂಕಿ ಅವಘಡ ಸಂಭವಿಸಿದೆ. ಈ ದುರಂತದಲ್ಲಿ 14 ಜನರು ಜೀವ ಕಳೆದುಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು (Police officers) ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಸುಮಾರು 8 ಅಗ್ನಿ ಶಾಮಕ ವಾಹನಗಳು ಆಗಮಿಸಿ ಬೆಂಕಿ ನಂದಿಸುವಲ್ಲಿ (extinguishing a fire) ಯಶಸ್ವಿಯಾಗಿದೆ. ಪೊಲೀಸರು ಮತ್ತು ಅಗ್ನಿಶಾಮಕದಳ ಸಿಬ್ಬಂದಿ ಸತತ ರಕ್ಷಣೆ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಬೆಂಕಿಯಲ್ಲಿ ಸಜೀವ ದಹನಗೊಂಡ14 ಮೃತದೇಹವನ್ನು ಹೊರತೆಗೆಯಲಾಗಿದೆ. ಬೆಂಕಿ ಅವಘಡ ಬಗ್ಗೆ (Fire accident) ತನಿಖೆಗಾಗಿ ವಿಶೇಷ ತಂಡ ರಚಿಸಲಾಗಿದೆ.
ಸಂತ್ರಸ್ತರನ್ನು ರಕ್ಷಣೆ (Rescue the victims) ಮಾಡುವಂತೆ ಕೇಂದ್ರ ಸಚಿವ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ್ ಅವರು ರಾಜ್ಯ ಸರ್ಕಾರವನ್ನು (State Govt) ಒತ್ತಾಯಿಸಿದ್ದಾರೆ. ಭವಿಷ್ಯದಲ್ಲಿ ಇಂತಹ ದುರಂತಗಳು ಸಂಭವಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು (Precautionary measures) ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ. ಇನ್ನು ಈ ಸಂಬಂಧ ಟ್ವೀಟ್ (Relationship tweet) ಮಾಡಿರುವ ಅವರು, ತಕ್ಷಣವೇ ಸಂತ್ರಸ್ತರನ್ನು ರಕ್ಷಿಸಿ ಎಂದು ನಾನು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತೇನೆ.
ಅವರಿಗೆ ಸೂಕ್ತ ಸುರಕ್ಷತೆ ನೀಡಿ. ಅಗತ್ಯ ವೈದ್ಯಕೀಯ ಮತ್ತು ಮಾನವೀಯ (Medical and humanitarian) ಸಹಾಯವನ್ನು ಒದಗಿಸಿ. ಮುಂದೆ ಇಂತಹ ದುರಂತಗಳು ಮರುಕಳಿಸದಂತೆ ನೋಡಿಕೊಳ್ಳಿ. ಅಗ್ನಿ ಸುರಕ್ಷತಾ ಕ್ರಮಗಳ ಬಗ್ಗೆ ಹೆಚ್ಚಿನ ಗಮನಹರಿಸಿ,ಎಂದು ಅವರು ಮನವಿ ಮಾಡಿದ್ದಾರೆ.

ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ (Congress president) ಸುಭಂಕರ್ ಸರ್ಕಾರ್ ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ್ದು, ಕೋಲ್ಕತ್ತಾ ಮಹಾನಗರ (Kolkata Metropolis) ಪಾಲಿಕೆ ವಿರುದ್ಧ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಬೆಂಕಿ ಕಾಣಿಸಿಕೊಂಡಿದ್ದು (“The fire appeared) , ಇದು ದುರಂತದ ಘಟನೆ. ಇನ್ನೂ ಬಹಳಷ್ಟು ಜನರು ಕಟ್ಟಡದಲ್ಲಿ ಸಿಲುಕಿಕೊಂಡಿದ್ದಾರೆ. ಯಾವುದೇ ಸುರಕ್ಷತೆ ಇಲ್ಲ. ಮಹಾನಗರ ಪಾಲಿಕೆ (Mahanagara Corporation) ಏನು ಮಾಡುತ್ತಿದೆಯೋ ನನಗೆ ಗೊತ್ತಿಲ್ಲ ಎಂದು ಅವರು ಕಿಡಿಕಾರಿದ್ದಾರೆ.
ಅಲ್ಲದೆ ಕೋಲ್ಕತ್ತಾ ಹೋಟೆಲ್ನಲ್ಲಿ ನಡೆದ ಅಗ್ನಿ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ತೀವ್ರ ದುಃಖ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಅಲ್ಲದೆ ಸಂತ್ರಸ್ತರಿಗೆ ಆರ್ಥಿಕ ನೆರವು ಘೋಷಿಸಿದ್ದಾರೆ.
ಇದನ್ನು ಓದಿ : CBSE ಪಠ್ಯದಲ್ಲಿ ಮೊಘಲರು, ದಿಲ್ಲಿ ಸುಲ್ತಾನ್ರ ಪಾಠಕ್ಕೆ ಕತ್ತರಿ : ಮಹಾಕುಂಭ ಸೇರಿದಂತೆ ಹಲವು ವಿಚಾರಗಳು ಸೇರ್ಪಡೆ
ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಕೂಡ ಕೋಲ್ಕತ್ತಾದಲ್ಲಿ ಸಂಭವಿಸಿದ ಭೀಕರ (Kolkata hotel fire tragedy) ಅಗ್ನಿ ದುರಂತದ ಬಗ್ಗೆ ತಮ್ಮ ದುಃಖ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.