• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ʻಚಿತ್ರರಂಗಕ್ಕೆ ಕಪ್ಪು ಚುಕ್ಕಿ ಇಟ್ಟ ಈ ಘಟನೆ ಎಸಗಿದವರ ಸಣ್ಣತನ, ಹೇಡಿತನ ಮಾತ್ರ ಬಹಿರಂಗವಾಗಿದೆʼ : ಸಂಸದೆ ಸುಮಲತಾ

Mohan Shetty by Mohan Shetty
in ಮನರಂಜನೆ
ʻಚಿತ್ರರಂಗಕ್ಕೆ ಕಪ್ಪು ಚುಕ್ಕಿ ಇಟ್ಟ ಈ ಘಟನೆ ಎಸಗಿದವರ ಸಣ್ಣತನ, ಹೇಡಿತನ ಮಾತ್ರ ಬಹಿರಂಗವಾಗಿದೆʼ : ಸಂಸದೆ ಸುಮಲತಾ
0
SHARES
267
VIEWS
Share on FacebookShare on Twitter

Bengaluru : ಕ್ರಾಂತಿ ಚಿತ್ರದ ಎರಡನೇ ಹಾಡನ್ನು ಅಭಿಮಾನಿಗಳಿಂದ ಬಿಡುಗಡೆಗೊಳಿಸಲು ಹೊಸಪೇಟೆಗೆ ತೆರಳಿದ್ದ ನಟ ಚಾಲೆಂಜಿಂಗ್‌ ಸ್ಟಾರ್‌ ನಟ ದರ್ಶನ್‌(kranthi movie tweet by sumalatha) ಮೇಲೆ ಕಿಡಿಗೇಡಿಗಳು ಚಪ್ಪಲಿ ಎಸೆದ ಕೃತ್ಯಕ್ಕೆ ಇದೀಗ ನಾಡಿನೆಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

kranthi

ನಟ ದಾಸ ದರ್ಶನ್‌ ಅಭಿನಯದ ʻಕ್ರಾಂತಿʼ(Kranthi) ಚಿತ್ರ ಇದೇ 23 ಜನವರಿ 2023ರಂದು ರಾಜ್ಯಾದ್ಯಂತ ಬಿಡುಗಡೆಯಾಗಲು ಸಜ್ಜಾಗಿದ್ದು, ಚಿತ್ರದ ಪ್ರಚಾರಕ್ಕೆ ಚಿತ್ರತಂಡ ಮೊನ್ನೆಯಷ್ಟೇ ವಿಜಯನಗರದ, ಹೊಸಪೇಟೆ ನಗರಕ್ಕೆ ತೆರಳಿತ್ತು.

ಈ ವೇಳೆ ಕಿಡಿಗೇಡಿಗಳ ಗುಂಪೊಂದು ವೇದಿಕೆ ಮೇಲೆ ನಿಂತಿದ್ದ ನಟ ದರ್ಶನ್‌ ಅವರ ಮೇಲೆ ಚಪ್ಪಲಿ ಎಸೆದಿರುವ ಕೃತ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ದರ್ಶನ್‌ ಅವರ ಅಭಿಮಾನಿಗಳು ಮಾತ್ರವಲ್ಲದೇ ಇಡೀ ಕನ್ನಡ ಚಿತ್ರರಂಗ ಬೆಂಬಲಕ್ಕೆ ನಿಂತಿದೆ.

ಇದನ್ನೂ ನೋಡಿ : https://fb.watch/hx63Uij7Hr/ ಜಯನಗರದ 48 ಆಸ್ತಿಗಳಲ್ಲಿ ಅತಿಕ್ರಮಣ ಮತ್ತು ಅಕ್ರಮ !

ಕ್ರಾಂತಿ ಚಿತ್ರದ ಮೊದಲ ಹಾಡನ್ನು ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಹಾಗೂ ಚಿತ್ರತಂಡ, ಅಭಿಮಾನಿಯೊಬ್ಬರ ಆಗಮನದ ಮೂಲಕ ಹಾಡನ್ನು ಬಿಡುಗಡೆಗೊಳಿಸಿತ್ತು.

ಅದೇ ರೀತಿಯಲ್ಲಿ ಚಿತ್ರದ ಎರಡನೇ ಹಾಡನ್ನು ಬಿಡುಗಡೆಗೊಳಿಸಲು ಉತ್ತರ ಕರ್ನಾಟಕದ, ಹೊಸಪೇಟೆ ನಗರಕ್ಕೆ ಇಡೀ ಕ್ರಾಂತಿ ಚಿತ್ರತಂಡ ಬಸ್ಸಿನಲ್ಲಿ ಆಗಮಿಸಿ,

kranthi

ಸಹಸ್ರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಅಭಿಮಾನಿಗಳ ಮಧ್ಯೆ ಎರಡನೇ ಚಿತ್ರದ ಹಾಡನ್ನು ಅಭಿಮಾನಿಯೊಬ್ಬರಿಂದ ಬಿಡುಗಡೆಗೊಳಿಸಿತು.

ಈ ವೇಳೆ ವೇದಿಕೆಯ ಮೇಲೆ ನಿಂತಿದ್ದ ನಟ ದರ್ಶನ್‌ ನೆರದಿದ್ದ ಸಹಸ್ರಾರು ಸಂಖ್ಯೆಯ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಲು ಮುಂದಾದಾಗ ಪೊಲೀಸರ ಮುಂದೆಯೇ ಯುವಕರ ಗುಂಪೊಂದು ದರ್ಶನ್‌(kranthi movie tweet by sumalatha) ಅವರ ಮುಖಕ್ಕೆ ಚಪ್ಪಲಿಯನ್ನು ಎಸೆದು ಉದ್ಧಟತನ ಪ್ರದರ್ಶಿಸಿದ್ದಾರೆ.

ಚಪ್ಪಲಿ ವೇದಿಕೆಯ ಮೇಲೆ ಬೀಳುತ್ತಿದ್ದಂತೆ ಪೊಲೀಸರು ಚಪ್ಪಲಿಯನ್ನು ಕೆಳೆಗೆ ಎಸೆದು, ಕಿಡಿಗೇಡಿಗಳತ್ತ ಗಮನ ಹರಿಸಿದ್ದಾರೆ.

ದರ್ಶನ್‌ ಅವರು ಈ ಘಟನೆಗೆ ಹೆಚ್ಚು ಸ್ಪಂದಿಸದೇ, ಇರಲಿ ಪರವಾಗಿಲ್ಲ ಬಿಡಿ ಎಂದು ಹೇಳುವ ಮೂಲಕ ಸ್ಥಳದಿಂದ ಕೂಡಲೇ ಹೊರಟಿದ್ದಾರೆ.

ಇದನ್ನೂ ಓದಿ : https://vijayatimes.com/cbi-raid-on-dkc/

ಈ ಒಂದು ಘಟನೆಯ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವೀಡಿಯೋ ಟ್ವಿಟರ್‌(twitter) ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್‌ ಆಗಿದೆ.

ಈ ಒಂದು ವೀಡಿಯೊಗೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದು, ಕನ್ನಡ ಚಿತ್ರರಂಗದ ಅನೇಕ ನಟ-ನಟಿಯರು, ಹಿರಿಯ ಕಲಾವಿದರು ದರ್ಶನ್‌ ಅವರಿಗೆ ಬೆಂಬಲ ಸೂಚಿಸಿದ್ದಾರೆ.

ಈ ಘಟನೆ ಕುರಿತು ಹಿರಿಯ ನಟಿ, ಸಂಸದೆ ಸುಮಲತಾ ಅವರು ಟ್ವೀಟ್‌ ಮಾಡಿದ್ದು,

sumalata

“ಯಾವುದೇ ನಿಜವಾದ ಅಭಿಮಾನಿ ಮಾಡದ ಕೃತ್ಯ ದರ್ಶನ್ ಮೇಲೆ ನಡೆದಿರುವ ಹಲ್ಲೆ. ಇದರಿಂದ ದರ್ಶನ್ ವರ್ಚಸ್ಸು, ಖ್ಯಾತಿಗೆ ಯಾವುದೇ ಕುತ್ತು ತರಲು ಸಾಧ್ಯವಿಲ್ಲ.

ಚಿತ್ರರಂಗಕ್ಕೆ ಕಪ್ಪು ಚುಕ್ಕಿ ಇಟ್ಟ ಈ ಘಟನೆ ಎಸಗಿದವರ ಸಣ್ಣತನ, ಹೇಡಿತನ ಮಾತ್ರ ಬಹಿರಂಗವಾಗಿದೆ.

ಇಡೀ ಚಿತ್ರರಂಗ ಕೃತ್ಯ ಖಂಡಿಸಿ ದರ್ಶನ್ ಬೆಂಬಲಕ್ಕೆ ನಿಂತಿದ್ದೇವೆ” ಎಂದು ಬರೆದು ಪೋಸ್ಟ್‌ ಮಾಡಿ, ನಟ ದರ್ಶನ್‌ ಅವರಿಗೆ ಸುಮಲತಾ ಬೆಂಬಲ ನೀಡಿದ್ದಾರೆ.

Tags: bengaluruentertainmentkranthi movie

Related News

ಇನ್ನೂ ನೂರು ಕೋಟಿ ಕ್ಲಬ್ ಸೇರಿಲ್ಲವೆ ಕಬ್ಜ ಸಿನಿಮಾ ? ಕಲೆಕ್ಷನ್ ಬಗ್ಗೆ ನಿರ್ಮಾಪಕರು ಏನಂತಾರೆ
Vijaya Time

ಇನ್ನೂ ನೂರು ಕೋಟಿ ಕ್ಲಬ್ ಸೇರಿಲ್ಲವೆ ಕಬ್ಜ ಸಿನಿಮಾ ? ಕಲೆಕ್ಷನ್ ಬಗ್ಗೆ ನಿರ್ಮಾಪಕರು ಏನಂತಾರೆ

March 27, 2023
ಕಬ್ಜ ಚಿತ್ರಕ್ಕೆ ಸಿನಿಪ್ರಿಯರ ಮೆಚ್ಚುಗೆ ; ಕಬ್ಜ 2 ಮತ್ತಷ್ಟು ಅದ್ಧೂರಿಯಾಗಿರಲಿದೆ ಎಂದ ನಿರ್ದೇಶಕ ಆರ್.ಚಂದ್ರು
ಮನರಂಜನೆ

ಕಬ್ಜ ಚಿತ್ರಕ್ಕೆ ಸಿನಿಪ್ರಿಯರ ಮೆಚ್ಚುಗೆ ; ಕಬ್ಜ 2 ಮತ್ತಷ್ಟು ಅದ್ಧೂರಿಯಾಗಿರಲಿದೆ ಎಂದ ನಿರ್ದೇಶಕ ಆರ್.ಚಂದ್ರು

March 24, 2023
ತಾನು ನೋವುಂಟು ಮಾಡಿದವರ ಬಳಿ ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್
ಮನರಂಜನೆ

ತಾನು ನೋವುಂಟು ಮಾಡಿದವರ ಬಳಿ ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್

March 24, 2023
21 ವರ್ಷಗಳ ಕಾದು ʻತಲೈವಾʼನ ಭೇಟಿ ಮಾಡಿದ ಕ್ರಿಕೆಟಿಗ ; ಅಂಥಾ ಅಭಿಮಾನಿ ಕ್ರಿಕೆಟಿಗ ಯಾರು?
ಪ್ರಮುಖ ಸುದ್ದಿ

21 ವರ್ಷಗಳ ಕಾದು ʻತಲೈವಾʼನ ಭೇಟಿ ಮಾಡಿದ ಕ್ರಿಕೆಟಿಗ ; ಅಂಥಾ ಅಭಿಮಾನಿ ಕ್ರಿಕೆಟಿಗ ಯಾರು?

March 14, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.