ಬೆಂಗಳೂರಿನ ರಸ್ತೆ ಗುಂಡಿಗಳ ವಿರುದ್ಧ (KrishnaByreGowda warning to gba officers) ಸಚಿವ ಕೃಷ್ಣ ಬೈರೇಗೌಡರ ಕಟ್ಟುನಿಟ್ಟಿನ ಸಂದೇಶ
ನಗರದ ಸೌಂದರ್ಯ, ಸ್ವಚ್ಛತೆ ಮತ್ತು ಉತ್ತಮ ರಸ್ತೆಗಳ ನಿರ್ಮಾಣಕ್ಕೆ ಸಮಗ್ರ ಕಾರ್ಯತಂತ್ರ ರೂಪಿಸುವ ಭರವಸೆ
ರಸ್ತೆ ಗುಂಡಿ, ಕಸದ ನಿರ್ವಹಣೆ ಮತ್ತು ಟ್ರಾಫಿಕ್ ಸಮಸ್ಯೆಗಳಿಗೆ ದೀರ್ಘಕಾಲಿಕ ಪರಿಹಾರ ರೂಪಿಸಲು ಅಧಿಕಾರಿಗಳಿಗೆ ಸೂಚನೆ
Bengaluru: ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಜವಾಬ್ದಾರಿಯನ್ನು ಅಧಿಕೃತವಾಗಿ (KrishnaByreGowda warning to gba officers) ವಹಿಸಿಕೊಂಡ ಸಚಿವ ಕೃಷ್ಣ ಬೈರೇಗೌಡ ಅವರು ತಮ್ಮ ಮೊದಲ ಸಭೆಯಲ್ಲೇ ಅಧಿಕಾರಿಗಳಿಗೆ ಸ್ಪಷ್ಟ ಸಂದೇಶ ನೀಡಿದ್ದಾರೆ.
ಖಾತೆ ಹಂಚಿಕೆ ಕುರಿತು ಹಲವು ದಿನಗಳಿಂದ ಉಂಟಾಗಿದ್ದ ಗೊಂದಲ ಹಾಗೂ ಅಸಮಾಧಾನದ ಬಳಿಕ ಅವರು ಜೂನ್ 16ರಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕಾರ್ಯಾರಂಭ ಮಾಡಿದ್ದಾರೆ.

ಈ ಸಭೆಯಲ್ಲಿ ಪ್ರಮುಖವಾಗಿ ಬೆಂಗಳೂರಿನ ರಸ್ತೆ ಗುಂಡಿಗಳು, ಕಸದ ನಿರ್ವಹಣೆ, ಟ್ರಾಫಿಕ್ (Traffic) ಸಮಸ್ಯೆ ಮತ್ತು ನಗರದ ಸ್ವಚ್ಛತೆ ಕುರಿತು ಚರ್ಚೆ ನಡೆಯಿತು.
ನಗರದ ಜನಜೀವನದ ಮೇಲೆ ನೇರ ಪರಿಣಾಮ ಬೀರುತ್ತಿರುವ ಸಮಸ್ಯೆಗಳ ಕುರಿತು ಅಧಿಕಾರಿಗಳನ್ನು ಪ್ರಶ್ನಿಸಿದ ಸಚಿವರು, “ರಸ್ತೆ ನಿರ್ಮಾಣ ಮಾಡುವುದು ಏನು ರಾಕೆಟ್ ಸೈನ್ಸಾ?” ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಸಭೆಯ ವೇಳೆ ಸಚಿವರು ರಸ್ತೆ ಗುಂಡಿಗಳ ಸಮಸ್ಯೆಯನ್ನು ಗಂಭೀರವಾಗಿ ಪ್ರಸ್ತಾಪಿಸಿದರು. ನೆರೆ ರಾಜ್ಯಗಳಲ್ಲಿ ಉತ್ತಮ ಗುಣಮಟ್ಟದ ರಸ್ತೆಗಳು ಇದ್ದಾಗ ಬೆಂಗಳೂರಿನಲ್ಲಿ ಮಾತ್ರ ಈ ಸಮಸ್ಯೆ ಏಕೆ ಮುಂದುವರಿಯುತ್ತಿದೆ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.
ಮಳೆ ಹೆಚ್ಚಾಗಿ ಬೀಳುವ ರಾಜ್ಯಗಳಲ್ಲಿಯೂ ಉತ್ತಮ ರಸ್ತೆಗಳಿರುವುದನ್ನು (KrishnaByreGowda warning to gba officers) ಉದಾಹರಣೆಯಾಗಿ ನೀಡಿ, ಬೆಂಗಳೂರಿನಂತಹ ಪ್ರಮುಖ ನಗರದಲ್ಲಿ ಗುಂಡಿಗಳಿಲ್ಲದ ರಸ್ತೆ ನಿರ್ಮಿಸಲು ಸಾಧ್ಯವಾಗದಿರುವುದು ಒಪ್ಪಲಾಗದ ವಿಚಾರ ಎಂದು ಹೇಳಿದರು.
ಸರ್ಕಾರವು ಅಗತ್ಯವಿರುವಷ್ಟು ಬಜೆಟ್ (Budget) ನೀಡಿದರೂ ಸಮರ್ಪಕವಾದ ಯೋಜನೆ ಮತ್ತು ಗುಣಮಟ್ಟದ ಅನುಷ್ಠಾನದಲ್ಲಿ ಕೊರತೆ ಕಂಡುಬರುತ್ತಿದೆ
ಎಂದು ಅಭಿಪ್ರಾಯಪಟ್ಟರು. ರಸ್ತೆಗಳ ನಿರ್ಮಾಣ ಮತ್ತು ನಿರ್ವಹಣೆಯಲ್ಲಿ ದೀರ್ಘಕಾಲಿಕ ಯೋಜನೆ ರೂಪಿಸುವಂತೆ ಸೂಚನೆ ನೀಡಿದರು.
ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ (Krishna Byre Gowda) , ಬೆಂಗಳೂರು ದೇಶದ ಆರ್ಥಿಕ ಮತ್ತು ತಾಂತ್ರಿಕ ಶಕ್ತಿಕೇಂದ್ರವಾಗಿದ್ದು, ಸುಮಾರು ಒಂದೂವರೆ ಕೋಟಿ ಜನರ ಬದುಕಿನ ಆಧಾರವಾಗಿದೆ ಎಂದು ಹೇಳಿದರು.
ನಗರದ ಅಭಿವೃದ್ಧಿ ಕೇವಲ ಮೂಲಸೌಕರ್ಯಗಳ ನಿರ್ಮಾಣಕ್ಕೆ ಸೀಮಿತವಾಗಿರದೆ, ಜನರ ದೈನಂದಿನ ಜೀವನಮಟ್ಟ ಸುಧಾರಿಸುವತ್ತ ಗಮನ ಹರಿಸಬೇಕು ಎಂದು ತಿಳಿಸಿದರು.
ರಸ್ತೆ, ಟ್ರಾಫಿಕ್, ಕಸದ ನಿರ್ವಹಣೆ, ನಗರದ ಸೌಂದರ್ಯ ಮತ್ತು ಸ್ವಚ್ಛತೆ ಸೇರಿದಂತೆ ಅನೇಕ ಸಮಸ್ಯೆಗಳನ್ನು ಸಮಗ್ರವಾಗಿ ಪರಿಹರಿಸುವ ಅಗತ್ಯವಿದೆ ಎಂದರು.
ಒಂದೇ ಮಹಾನಗರ ಪಾಲಿಕೆಯ ಮೂಲಕ ಎಲ್ಲಾ ಸಮಸ್ಯೆಗಳನ್ನು ಸಮರ್ಥವಾಗಿ ನಿರ್ವಹಿಸುವುದು ಕಷ್ಟವಾಗಿದ್ದರಿಂದ ಐದು ನಗರ ಪಾಲಿಕೆಗಳನ್ನು ರಚಿಸಿ ಆಡಳಿತ ವಿಕೇಂದ್ರೀಕರಣಕ್ಕೆ ಒತ್ತು ನೀಡಲಾಗಿದೆ ಎಂದು ವಿವರಿಸಿದರು.
ಕಸದ ಸಮಸ್ಯೆಯ ಕುರಿತು ಮಾತನಾಡಿದ ಸಚಿವರು, ಸರ್ಕಾರದ ಜೊತೆಗೆ ನಾಗರಿಕರ ಸಹಕಾರವೂ ಅತ್ಯಂತ ಮುಖ್ಯ ಎಂದು ಹೇಳಿದರು. ಕೇವಲ ಆಡಳಿತ ವ್ಯವಸ್ಥೆಯಲ್ಲಿನ
ದೋಷಗಳನ್ನು ಸರಿಪಡಿಸುವುದರಿಂದ ಮಾತ್ರ ಸಮಸ್ಯೆ ಪರಿಹಾರವಾಗುವುದಿಲ್ಲ; ಸಾರ್ವಜನಿಕರು ಸಹ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಕಸದ ಟೆಂಡರ್ (Tender) ಪ್ರಕ್ರಿಯೆ ಕುರಿತಂತೆ ಸರ್ಕಾರ ಈಗಾಗಲೇ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದ್ದು, ಆ ಸಮಿತಿ ನೀಡುವ ಸಲಹೆಗಳನ್ನು ಅನುಸರಿಸಲಾಗುವುದು ಎಂದು ಸ್ಪಷ್ಟಪಡಿಸಿದರು.
ಒಂದೇ ದಿನದಲ್ಲಿ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವ ಭರವಸೆ ನೀಡದೆ, ಹಂತ ಹಂತವಾಗಿ ಸುಧಾರಣೆ ತರಲು ಪ್ರಾಮಾಣಿಕ ಪ್ರಯತ್ನ ನಡೆಯಲಿದೆ ಎಂದು ಹೇಳಿದರು. ನಗರ ನಿರ್ವಹಣೆಯಲ್ಲಿ ಜನಸಹಭಾಗಿತ್ವ ಹೆಚ್ಚಿಸುವುದು ಮುಂದಿನ ಪ್ರಮುಖ ಗುರಿಯಾಗಿದೆ ಎಂದರು.
ಇದೇ ವೇಳೆ ಖಾತೆ ಹಂಚಿಕೆ ಕುರಿತ ಗೊಂದಲದ ಬಗ್ಗೆ ಸಚಿವರು ಸ್ಪಷ್ಟನೆ ನೀಡಿದರು. ನಗರಾಭಿವೃದ್ಧಿ ಇಲಾಖೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಪೂರ್ಣ ಪ್ರಮಾಣದ ಅಧಿಕಾರ ಅಗತ್ಯವೆಂದು ಮುಖ್ಯಮಂತ್ರಿ ಮತ್ತು ಪಕ್ಷದ ವರಿಷ್ಠರಿಗೆ ಈಗಾಗಲೇ ತಿಳಿಸಿರುವುದಾಗಿ ಹೇಳಿದರು.
ಪೂರ್ಣ ಸ್ಪಷ್ಟತೆ ಸಿಕ್ಕ ನಂತರವೇ ಅಧಿಕಾರ ಸ್ವೀಕರಿಸಬೇಕೆಂದು ತಮ್ಮ ಅಭಿಪ್ರಾಯವಿದ್ದರೂ, ಮುಖ್ಯಮಂತ್ರಿ ತೆಗೆದುಕೊಂಡ ನಿರ್ಧಾರ ಮತ್ತು ಪಕ್ಷದ ಸೂಚನೆಯಂತೆ ಇಲಾಖೆಯ ಜವಾಬ್ದಾರಿಯನ್ನು ಸ್ವೀಕರಿಸಿರುವುದಾಗಿ ತಿಳಿಸಿದರು.
ಭವಿಷ್ಯದಲ್ಲಿ ತಮ್ಮ ಅರ್ಹತೆಗೆ ತಕ್ಕಂತೆ ಸಂಪೂರ್ಣ ಅಧಿಕಾರ ದೊರೆಯುವ ವಿಶ್ವಾಸ ವ್ಯಕ್ತಪಡಿಸಿದರು. ಬೆಂಗಳೂರಿನ ಅಭಿವೃದ್ಧಿಗಾಗಿ ತಮ್ಮ ಕೈಲಾದ ಮಟ್ಟಿಗೆ ಸೇವೆ ಸಲ್ಲಿಸುವುದಾಗಿ ಹೇಳಿದ ಅವರು, ಜನರ ನಿರೀಕ್ಷೆಗಳಿಗೆ ತಕ್ಕಂತೆ ಕಾರ್ಯನಿರ್ವಹಿಸುವ ಭರವಸೆ ನೀಡಿದರು.
ನಗರವನ್ನು ಸುಂದರ, ಸ್ವಚ್ಛ ಮತ್ತು ಗುಂಡಿರಹಿತ ನಗರವನ್ನಾಗಿಸುವುದು ತಮ್ಮ ಆದ್ಯತೆಯಾಗಿದೆ ಎಂದು ಪುನರುಚ್ಚರಿಸಿದರು.
ಇದನ್ನು ಓದಿ : https://vijayatimes.com/telegram-ban-till-neet-exam/