• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕೆಆರ್‌ಎಸ್‌ ಸೋರಿಕೆ ವಿಚಾರ: ಹೆಚ್‌ಡಿಕೆ ಹೇಳಿಕೆಗೆ ಸಂಸದೆ ಸುಮಲತಾ ಟಾಂಗ್‌

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಕೆಆರ್‌ಎಸ್‌ ಸೋರಿಕೆ ವಿಚಾರ: ಹೆಚ್‌ಡಿಕೆ ಹೇಳಿಕೆಗೆ ಸಂಸದೆ ಸುಮಲತಾ ಟಾಂಗ್‌
0
SHARES
0
VIEWS
Share on FacebookShare on Twitter

ಬೆಂಗಳೂರು, ಜು. 05: ಕೆಆರ್‌ಎಸ್‌ ಸೋರಿಕೆಯ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಹೆಚ್‌. ಡಿ ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ನಡುವೆ ಮಾತಿನ ಚಕಮಕಿ ನಡೆದಿದೆ. ಕುಮಾರಸ್ವಾಮಿಯವರ ಟೀಕೆಗೆ ತಿರುಗೇಟು ನೀಡಿದ ಸುಮಲತಾ, ಹೆಣ್ಣು ಮಕ್ಕಳ ಬಗ್ಗೆ ಹಗುರವಾಗಿ ಮಾತನಾಡುವುದು ಅದು ಅವರ ಸಂಸ್ಕೃತಿ – ಸಂಸ್ಕಾರವನ್ನು ಎತ್ತಿ ತೋರಿಸುತ್ತದೆ. ಮಾಜಿ ಸಿಎಂ ಆಗಿ, ಇಂತಹ ಮಾತುಗಳನ್ನು ಆಡುವುದು ಶೋಭೆತರಲ್ಲ ಎಂದು ಟಾಂಗ್ ನೀಡಿದರು.‌

ವಿಧಾನ‌ ಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸುಮಲತಾ
ಹೆಣ್ಣುಮಕ್ಕಳ ಬಗ್ಗೆ ಕೀಳುಮಟ್ಟದ ಹೇಳಿಕೆ ಕುಮಾರಸ್ವಾಮಿ ಸಂಸ್ಕೃತಿ, ವ್ಯಕ್ತಿತ್ವನ್ನು ತೋರುತ್ತದೆ ಎಂದು ಕಿಡಿಕಾರಿದ್ದಾರೆ.

ಕೆ.ಆರ್.ಎಸ್. ಜಲಾಶಯ ರಕ್ಷಣೆ ನನ್ನ ಉದ್ದೇಶ. ನನ್ನ ಮಾಹಿತಿಯಂತೆ ಜಲಾಶಯ ಉಳಿವಿಗಾಗಿ ಕೆಲಸ ಮಾಡುವುದು ನನ್ನ ಕರ್ತವ್ಯ ನಾನು ಮಾಡಿದ್ದೇನೆ. ಖಾಸಗಿ ಸಹ ಭಾಗಿತ್ವದಲ್ಲಾದರೂ ಸರಿ ಮೈಷುಗರ್ ಕಾರ್ಖಾನೆ ಆರಂಭಿಸಿ ಮಂಡ್ಯ ರೈತರ ರಕ್ಷಣೆ ಮಾಡುವಂತೆ ಸರ್ಕಾರವನ್ನು ಒತ್ತಾಯಿಸುವುದು ತಪ್ಪೆ? ಜಿಲ್ಲೆಯಲ್ಲಿ ಅವ್ಯಾಹತವಾಗಿ ನಡೆದಿರುವ ಅಕ್ರಮ ಗಣಿಗಾರಿಕೆ ತಡೆಯಿರಿ ಎಂದು ಹೇಳುವುದು ತಪ್ಪೆ? ಮನ್ ಮುಲ್ ನಡೆದಿರುವ ಹಗರಣದ ತನಿಖೆ ನಡೆಸಿ ಎಂದರೆ ಅದೂ ತಪ್ಪೆ ? ಈ ಬಗ್ಗೆ ಕುಮಾರಸ್ವಾಮಿಯವರ ಮಾತು ಕೇಳಿ ಕೆಲಸ ಮಾಡಬೇಕಿಲ್ಲ ಎಂದು ಹೇಳಿದರು.

ಜನರ ಹಿತ ಕಾಯುವುದು ನನ್ನ ಜವಾಬ್ದಾರಿ ಎಂದರು. ಕುಮಾರಸ್ವಾಮಿ ಹೇಳಿದಂತೆ ಮಂಡ್ಯ ಜಿಲ್ಲೆ ನನ್ನಂತ ಸಂಸದೆ ಹಿಂದೆ ನೋಡಿಲ್ಲ. ‌ಅದು ನಿಜ. ನನ್ನಂತ ನೇರವಂತಿಕೆ ಹಾಗೂ ಭ್ರಷ್ಟಾಚಾರದ ವಿರುದ್ಧ ನೇರವಾಗಿ ಧ್ವನಿ ಎತ್ತಿರುವುದರಿಂದ ಅವರಿಗೆ ಜೀರ್ಣಿಸಿಕೊಳ್ಳುವುದು ಕಷ್ಟವಾಗಿದೆ ಎಂದರು.

ನನ್ನ ಕೆಲಸ ಹಾಗೂ ಜವಾಬ್ದಾರಿ ಗಳನ್ನು ನಾನು ನಿರ್ವಹಣೆ ಮಾಡುತ್ತೇನೆ. ಇವರನ್ನು ಕೇಳಿ ಮಾಡಬೇಕಿಲ್ಲ. ಚುನಾವಣೆ ಸಂದರ್ಭದಿಂದಲೂ ಅವರ ಸಂಸ್ಕೃತಿ-ಸಂಸ್ಕಾರ ಏನೆಂಬುದು ಜನರಿಗೂ ಗೊತ್ತಾಗಿದೆ. ಜನ ನನಗಲ್ಲ ಅವರಿಗೆ ಬುದ್ಧಿ ಕಲಿಸಿದ್ದಾರೆ. ಆದರೂ‌ ಅವರಿಗೆ ಬುದ್ದಿ ಬಂದಿಲ್ಲ ಎಂದರೆ ನಾನು ಏನೂ ಮಾಡಲು ಸಾಧ್ಯವಿಲ್ಲ. ಚುನಾವಣೆಯ ಸೋಲಿನ ಸೇಡು ಮರೆತಿಲ್ಲ. ಅದಕ್ಕೆ ಹೀಗೆ ಹೇಳುತ್ತಿದ್ದಾರೆ ಎಂದು ಸುಮಲತಾ ತಿರುಗೇಟು ನೀಡಿದರು.

Related News

ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ
Vijaya Time

ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ

June 8, 2023
ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ
Vijaya Time

ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ

June 8, 2023
dashan
ಮನರಂಜನೆ

ಅಭಿಷೇಕ್ ಅಂಬರೀಶ್-ಅವಿವಾ ರಿಸೆಪ್ಷನ್ ಗೆ ಯಾರ್ಯಾರು ಬಂದಿದ್ದರು ಗೊತ್ತಾ ?

June 8, 2023
ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್
Vijaya Time

ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್

June 8, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.