• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಬರಿದಾದ ಕೆ.ಆರ್.ಎಸ್: ಬರಿದಾದ ಕಾವೇರಿ ಮಡಿಲು, ಕನ್ನಂಬಾಡಿ ಕಟ್ಟೆ ಜಲಾಶಯದಲ್ಲಿ ಕೇವಲ 98 ಅಡಿ ನೀರು

Bhavya by Bhavya
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಬರಿದಾದ ಕೆ.ಆರ್.ಎಸ್: ಬರಿದಾದ ಕಾವೇರಿ ಮಡಿಲು, ಕನ್ನಂಬಾಡಿ ಕಟ್ಟೆ ಜಲಾಶಯದಲ್ಲಿ ಕೇವಲ 98 ಅಡಿ ನೀರು
0
SHARES
478
VIEWS
Share on FacebookShare on Twitter

Mysore: ಕನ್ನಡಿಗರ ಜೀವನಾಡಿ ಎಂದೇ ಖ್ಯಾತಿಯಾಗಿರುವ ಕಾವೇರಿ (KRS level drops to 98ft) ನದಿಯ ಒಡಲಾಗಿರುವ ಕನ್ನಂಬಾಡಿ ಕಟ್ಟೆಯಲ್ಲಿ (ಕೆಆರ್‌ಎಸ್‌ ಜಲಾಶಯ) ನೀರಿನ ಪ್ರಮಾಣ

ದಿನದಿಂದ ದಿನಕ್ಕೆ ಕುಸಿಯುತ್ತಿದ್ದು, ಜಲಾಶಯದ ನೀರಿನ ಮಟ್ಟವು 98 ಅಡಿಗಳಿಗೆ ತಗ್ಗಿರುವುದಲ್ಲದೆ. ಬರ ಹಾಗೂ ತಮಿಳುನಾಡಿಗೆ (Tamilanadu) ನೀರು ಹರಿಸುತ್ತಿರುವ ಪರಿಣಾಮ ಕೆಆರ್‌ಎಸ್‌

ಜಲಾಶಯವು (KRS level drops to 98ft) ದಿನದಿಂದ ದಿನಕ್ಕೆ ಕುಸಿಯುತ್ತಿದೆ.

KRS level drops to 98ft

ರಾಜ್ಯದಲ್ಲಿ ಮುಂಗಾರು ಮಳೆ ಕೊರತೆ ಎದುರಾಗಿದ್ದು, ಬರಗಾಲ ಸೃಷ್ಟಿಯಾಗಿರುವ ಹಿನ್ನೆಲೆ ಅದರಲ್ಲೂ ಕಾವೇರಿ ಕೊಳ್ಳದ ಅನ್ನದಾತರಿಗೆ ಸಂಕಷ್ಟ ಎದುರಾಗಿದೆ. ಸೋಮವಾರ (ಸಪ್ಟೆಂಬರ್‌ 11)

ಕೃಷ್ಣರಾಜಸಾಗರ ಜಲಾಶಯದಲ್ಲಿ ನೀರಿನ ಮಟ್ಟ 98 ಅಡಿಗೆ ಕುಸಿದಿದ್ದು, ಈ ಕಾರಣದಿಂದ ಕಾವೇರಿ ನದಿಪಾತ್ರದ ರೈತರಲ್ಲಿ ಆತಂಕ ಹೆಚ್ಚಾಗಿದೆ.

ಈ ವರ್ಷ 12 ಟಿಎಂಸಿಗೂ (TMC) ಅಧಿಕ ನೀರು ಖಾಲಿಯಾಗಿದ್ದು, ತಮಿಳುನಾಡಿಗೆ ನೀರು ಹರಿಸಿದ ಪರಿಣಾಮದಿಂದಾಗಿ ಜಲಾಶಯದ ಹಿನ್ನೀರು ಪ್ರದೇಶ ಬಹುತೇಕ ಬರಡು ಭೂಮಿಯಂತಾಗಿರುವುದಲ್ಲದೆ

ಮುಂದಿನ 3-4 ತಿಂಗಳಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗುವ ಸ್ಥಿತಿ ನಿರ್ಮಾಣವಾಗಿದೆ.

ಕೆಆರ್‌ಎಸ್‌ (KRS) ನೀರನ್ನ ಕೃಷಿ ಚಟುವಟಿಕೆಗೆ ಬಳಸುತ್ತಿರುವ ಮಂಡ್ಯ, ಮೈಸೂರು (Mysore) ಭಾಗದ ಅನೇಕ ರೈತರಿಗೆ ಈ ಬಾರಿ ನೀರಿನ ಅಭಾವ ಎದುರಾಗಿದ್ದು, ಸೆಪ್ಟೆಂಬರ್ ಎರಡನೇ ವಾರದಲ್ಲಿಯೇ

ಜಲಾಶಯದ ನೀರಿನ ಮಟ್ಟ 98 ಅಡಿಗೆ ಕುಸಿದಿರುವುದಲ್ಲದೆ ಮತ್ತೆ ನೀರು ಬಿಟ್ಟರೆ ಮುಂದಿನ 1 ತಿಂಗಳೊಳಗಾಗಿ ನೀರಿನ ಮಟ್ಟ ಇನ್ನೂ 5-6 ಅಡಿ ಕುಸಿತವಾಗಲಿರುವ ಕಾರಣ ಬೆಳೆಗೆ ನೀರಿಲ್ಲದೆ

ರೈತರು ಆತಂಕದಲ್ಲಿದ್ದು, ಈಗಗಾಲೇ ದೊಡ್ಡ ಮಟ್ಟದ ಹೋರಾಟ ಕೂಡ ಶುರುವಾಗಿದೆ.

KRS level drops to 98ft

ಕೆಆರ್‌ಎಸ್ ಡ್ಯಾಂ (Dam) ನಲ್ಲಿ ಸಮರ್ಪಕವಾಗಿ ಮಳೆ ಆಗದಿರುವ ಹಿನ್ನಲೆ ಭರ್ತಿಯಾಗಿಲ್ಲ ಹಾಗಾಗಿ ಮೈಸೂರು, ಮಂಡ್ಯ (Mandya) ಹಾಗೂ ಬೆಂಗಳೂರಿನಲ್ಲಿ ವಾಸಿಸುವ ಜನರು ಕುಡಿಯುವ

ನೀರನ್ನು ಹಾಗೂ ಕೃಷಿಗೆ ಈ ನೀರನ್ನೆ ಹೆಚ್ಚಾಗಿ ಬಳಸುತ್ತಿದ್ದು, ಈಗ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿರುವುದಲ್ಲದೆ ಮುಂದಿನ ಬೇಸಿಗೆಗೆ ಇದರ ಪರಿಣಾಮ ಹೆಚ್ಚಾಗಿ ಜನರಿಗೆ ತಟ್ಟಲಿದೆ

ಮತ್ತು ಮಂಗಳವಾರ ನೀರು ಬಿಡುಗಡೆ ವಿಚಾರವಾಗಿ ಕಾವೇರಿ ನದಿ ನಿರ್ವಹಣಾ ಪ್ರಾಧಿಕಾರ ಸಭೆ ನಡೆಸಲಿದ್ದು, ಈ ಸಭೆಯ ತೀರ್ಮಾನದ ಬಳಿಕ ರೈತರ ಮುಂದಿನ ಹೋರಾಟ ನಿರ್ಧಾರವಾಗಲಿದೆ.

ತಮಿಳುನಾಡು (Tamilnadu) ಸಲ್ಲಿಸಿದ್ದ ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೆಪ್ಟೆಂಬರ್ 21ಕ್ಕೆ ಮುಂದೂಡಿದ್ದು, ಕರ್ನಾಟಕವು (Karnataka)

ಕಾವೇರಿ ನೀರನ್ನು ಸಮರ್ಪಕವಾಗಿ ಹರಿಸುತ್ತಿಲ್ಲ ಎಂದು ಆರೋಪಿಸಿ ಸುಪ್ರಿಂಕೋರ್ಟ್ (Supreme Court) ಮೆಟ್ಟಿಲೇರಿರುವ ತಮಿಳುನಾಡು ಸರ್ಕಾರ ಹೆಚ್ಚು ನೀರು ಬಿಡುವುದಕ್ಕೆ ಕರ್ನಾಟಕಕ್ಕೆ ಸೂಚಿಸುವಂತೆ

ಅರ್ಜಿ ಸಲ್ಲಿಸಿತ್ತು. ಅಲ್ಲದೆ ಸದ್ಯಕ್ಕೆ ಅಂದಿನ ವಿಚಾರಣೆ ಬಗ್ಗೆ ಕಾವೇರಿ ಮಡಿಲಿನ ರೈತರು ಗಂಭೀರವಾಗಿ ಕಾದು ಕುಳಿತಿದ್ದು, ತದ ಬಳಿಕವೇ ಸರ್ಕಾರ ಕೂಡ ಇದರ ಕುರಿತು ಮುಂದಿನ ತೀರ್ಮಾನ ಕೈಗೊಳ್ಳಲಿದೆ.

ಇದನ್ನು ಓದಿ: ಬಂದ್ ವಾಪಸ್ಸು: ಬೆಂಗಳೂರು ಬಂದ್​​ ಹಿಂಪಡೆದ ಖಾಸಗಿ ಸಾರಿಗೆ ಒಕ್ಕೂಟ, ಬೇಡಿಕೆ ಈಡೇರಿಸುವುದಾಗಿ ರಾಮಲಿಂಗಾರೆಡ್ಡಿ ಭರವಸೆ

  • ಭವ್ಯಶ್ರೀ ಆರ್.ಜೆ
Tags: KarnatakaKRS DamMandyaMysoreTamilnadu

Related News

ರಾಜ್ಯ ಸರ್ಕಾರಕ್ಕೆ ಶಾಕ್ ನೀಡಿದ ಕೇಂದ್ರ ಸರ್ಕಾರ: ಎತ್ತಿನಹೊಳೆ, ಶರಾವತಿ ಪಂಪ್‌ ಸ್ಟೋರೇಜ್‌ ಯೋಜನೆಗೆ ತಡೆ
ದೇಶ-ವಿದೇಶ

ರಾಜ್ಯ ಸರ್ಕಾರಕ್ಕೆ ಶಾಕ್ ನೀಡಿದ ಕೇಂದ್ರ ಸರ್ಕಾರ: ಎತ್ತಿನಹೊಳೆ, ಶರಾವತಿ ಪಂಪ್‌ ಸ್ಟೋರೇಜ್‌ ಯೋಜನೆಗೆ ತಡೆ

November 10, 2025
ಬಿಎಮ್‌ಆರ್‌ಸಿಎಲ್ ಅನ್ನು ಅಗತ್ಯ ಸೇವೆ ಎಂದು ಘೋಷಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ: ಹೈಕೋರ್ಟ್ ಸ್ಪಷ್ಟನೆ
ರಾಜ್ಯ

ಬಿಎಮ್‌ಆರ್‌ಸಿಎಲ್ ಅನ್ನು ಅಗತ್ಯ ಸೇವೆ ಎಂದು ಘೋಷಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ: ಹೈಕೋರ್ಟ್ ಸ್ಪಷ್ಟನೆ

November 8, 2025
ಕರ್ನಾಟಕದಲ್ಲಿ ಸ್ಟಾರ್ಟ್‌ಅಪ್‌ಗಳಿಗೆ ಹೊಸ ಅವಕಾಶ: ಮುಂದಿನ 5 ವರ್ಷದಲ್ಲಿ 25,000 ಸ್ಟಾರ್ಟಪ್​ಗಳ ಸ್ಥಾಪನೆಗೆ ಗುರಿ
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ಸ್ಟಾರ್ಟ್‌ಅಪ್‌ಗಳಿಗೆ ಹೊಸ ಅವಕಾಶ: ಮುಂದಿನ 5 ವರ್ಷದಲ್ಲಿ 25,000 ಸ್ಟಾರ್ಟಪ್​ಗಳ ಸ್ಥಾಪನೆಗೆ ಗುರಿ

November 8, 2025
ಬೆಂಗಳೂರಿನಲ್ಲಿ ಆರ್​ಟಿಒ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: 4 ಸಾವಿರ ಖಾಸಗಿ ಬಸ್ ತಪಾಸಣೆ, 102 ಬಸ್ ಸೀಜ್, 1 ಕೋಟಿ ದಂಡ
ದೇಶ-ವಿದೇಶ

ಬೆಂಗಳೂರಿನಲ್ಲಿ ಆರ್​ಟಿಒ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: 4 ಸಾವಿರ ಖಾಸಗಿ ಬಸ್ ತಪಾಸಣೆ, 102 ಬಸ್ ಸೀಜ್, 1 ಕೋಟಿ ದಂಡ

November 8, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.