Shimoga: ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ (K S Eshwarappa) ಭವಿಷ್ಯ ನುಡಿದಿದ್ದು, ಶೀಘ್ರದಲ್ಲಿಯೇ ಜಗದೀಶ್ ಶೆಟ್ಟರ್ ಬಿಜೆಪಿ ಸೇರುತ್ತಾರೆ. ಇತ್ತ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಜೈಲಿಗೆ (Jail) ಹೋಗ್ತಾರೆ ನೋಡ್ತಾ ಇರಿ ಎಂದು ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.
ಕಾಂಗ್ರೆಸ್ಗೆ (Congress) ಅಧಿಕಾರ ಕೊಟ್ಟು ಕಳ್ಳರ ಕೈಯಲ್ಲಿ ಬೀಗ ಕೊಟ್ಪಂತಾಗಿದೆ. ಸಚಿವ ಸಂಪುಟ ಡಿಕೆ ಶಿವಕುಮಾರ್ (D K Shivakumar) ಮೇಲಿನ ಸಿಬಿಐ ಕೇಸ್ ವಾಪಸ್ ಪಡೆದಿದೆ. ಸಿಬಿಐ ತನಿಖೆ ಶೇಕಡಾ 90 ರಷ್ಟು ಮುಗಿದಿದೆ. ಲೋಕಸಭೆ ಚುನಾವಣೆ ಮೊದಲು ಅಥವಾ ನಂತರ ಡಿಕೆಶಿ ಜೈಲಿಗೆ ಹೋಗುವುದು ಗ್ಯಾರಂಟಿ (Guarantee) ಎಂದು ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಸಂಸ್ಕೃತಿಗೆ ಶೆಟ್ಟರ್ ಹೊಂದಿಕೊಳ್ಳಲ್ಲ
” ಜಗದೀಶ್ ಶೆಟ್ಟರ್ (Jagadeesh Shettar) ಕುಟುಂಬ ಹಿಂದೂ ಸಮಾಜ ರಕ್ತಗತ ಮಾಡಿಕೊಂಡ ಕುಟುಂಬ. ಜಗದೀಶ್ ಶೆಟ್ಟರ್ ತಂದೆ ಹುಬ್ಬಳ್ಳಿ ಮೇಯರ್, ಶಾಸಕರಾಗಿದ್ದರು. ಜಗದೀಶ್ ಶೆಟ್ಟರ್ ಮೈಯಲ್ಲಿ ಹಿಂದು ರಕ್ತ ಹರಿಯುತ್ತಿದೆ. ಕಾಂಗ್ರೆಸ್ ಸಂಸ್ಕೃತಿ, ಜಮೀರ್ (Jamir) ಅವರ ಧೋರಣೆ ಅವರಿಗೆ ಹೊಂದಿಕೊಳ್ಳಲ್ಲ. ಹೀಗಾಗಿಯೇ ಶೆಟ್ಟರ್ ಹೊರಗೆ ಬರುತ್ತಾರೆ. ಖಂಡಿತ ಶೆಟ್ಟರ್ ಅವರು ಬಿಜೆಪಿಗೆ (BJP) ವಾಪಸ್ ಬರುತ್ತಾರೆ ” ಎಂದರು.
ತೆಲಂಗಾಣದಲ್ಲಿ ಡಿಕೆಶಿ ಎಟಿಎಂ ಬಳಕೆ
ಛತ್ತೀಸ್ಗಡ ರಾಜ್ಯದಲ್ಲಿ ಅತಂತ್ರ ಪರಿಸ್ಥಿತಿ ಇದ್ದು, ಮಧ್ಯಪ್ರದೇಶ (Madhya Pradesh), ರಾಜಸ್ತಾನದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಬಿಜೆಪಿ ಉತ್ತರಾಖಂಡ ಗೆಲುವಿನ ಹತ್ತಿರ ಇದೆ. ತೆಲಂಗಾಣದಲ್ಲಿ ಡಿಕಿಶಿ ಎಟಿಎಂ (ATM) ಬಳಕೆ ಆಗಿದೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಆರೋಪ ಮಾಡಿದ್ದಾರೆ.
ಜಮೀರ್ ಅಹ್ಮದ್ ದೇಶದ್ರೋಹಿ ಹೇಳಿಕೆ ಕೂಡ ಸಾಕಷ್ಟು ಪರಿಣಾಮ ಬೀರಿದ್ದು, ಇದರಿಂದ ಕಾಂಗ್ರೆಸ್ಗೆ ಒಂದಿಷ್ಟು ಕ್ಷೇತ್ರಗಳು ಬರಲಿವೆ. ತೆಲಂಗಾಣದಲ್ಲಿ (Telangana) ರಾಜ್ಯದ ದುಡ್ಡು ಬಳಕೆ ಆಗಿದೆ. ನಮ್ಮ ಸರ್ಕಾರ ಇದ್ದಾಗ 40 ಪರ್ಸೆಂಟ್ ಎಂದು ವಿನಾಕಾರಣ ಆರೋಪ ಮಾಡಿದರು. ಅದನ್ನು ಸಾಬೀತು ಪಡಿಸಲು ಕಾಂಗ್ರೆಸ್ ಮತ್ತು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣಗೆ ಸಾಧ್ಯವಾಗಿಲ್ಲ. ಸತ್ಯಹರಿಶ್ಚಂದ್ರ ಕೆಂಪಣ್ಣ (Satya Harishchandra Kempanna) ಸಾಬೀತು ಮಾಡಲು ಹೊರಟಿದ್ದಾರೆ. ಕಾಂಗ್ರೆಸ್ ಪಕ್ಷ ದೇಶದಲ್ಲಿ ಮಣ್ಣು ಮುಕ್ಕುತ್ತಿದೆ ಎಂದು ಗುಡುಗಿದರು.
ಸರ್ಕಾರ ಬಿದ್ದು ಹೋಗುವು ಪಕ್ಕಾ
ಲೋಕಸಭೆ ಚುನಾವಣೆಗೆ ಮೊದಲು ಅಥವಾ ನಂತರ ಯಾವುದೇ ಕಾರಣಕ್ಕೂ ಈ ಸರ್ಕಾರ ಇಲ್ಲ. ಈ ಸರ್ಕಾರ ಬಿದ್ದು ಹೋಗೋದು ಮಾತ್ರ ಗ್ಯಾರಂಟಿ ಎಂದು ಹೇಳಿದರು.
ಭವ್ಯಶ್ರೀ ಆರ್ ಜೆ