ಸಾರಿಗೆ ನೌಕರರ ಅನಿರ್ದಿಷ್ಟಾವಧಿ (KSRTC BMTC employees strike) ಸತ್ಯಾಗ್ರಹ: ಸರ್ಕಾರ-ನೌಕರರ ಮಧ್ಯೆ ಸಂಘರ್ಷ ತೀವ್ರ
ವೇತನ ಪರಿಷ್ಕರಣೆ ವಿಳಂಬಕ್ಕೆ ಅಸಮಾಧಾನ – ಸರ್ಕಾರದ ವಿರುದ್ಧ ಕಿಡಿ
ಬಾಕಿ ವೇತನ ಬಿಡುಗಡೆಗೆ ಒತ್ತಾಯ: ಫ್ರೀಡಂ ಪಾರ್ಕ್ನಲ್ಲಿ ಧರಣಿ
Bengalore : ರಾಜ್ಯದಲ್ಲಿ ಮತ್ತೆ ಸಾರಿಗೆ ನೌಕರರ ಹೋರಾಟ (KSRTC BMTC employees strike) ಚುರುಕುಗೊಂಡಿದ್ದು, ಸಾರ್ವಜನಿಕರಿಗೆ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಆತಂಕ ಎದುರಾಗಿದೆ.
ಸರ್ಕಾರದ ವಿರುದ್ಧ ತಮ್ಮ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕೆಎಸ್ಆರ್ಟಿಸಿ (KSRTC) , ಬಿಎಂಟಿಸಿ (BMTC) ಸೇರಿದಂತೆ ವಿವಿಧ ಸಾರಿಗೆ ಸಂಸ್ಥೆಗಳ ನೌಕರರು ಅನಿರ್ದಿಷ್ಟಾವಧಿ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ.
ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿರುವ ನೌಕರರು, ವೇತನ ಪರಿಷ್ಕರಣೆ ಹಾಗೂ ಬಾಕಿ ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ. ಇದರಿಂದ ರಾಜ್ಯದ ಸಾರಿಗೆ ವ್ಯವಸ್ಥೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ಈ ಹೋರಾಟದ ಪ್ರಮುಖ ಕಾರಣವೇ ವೇತನ ಪರಿಷ್ಕರಣೆ ವಿಚಾರವಾಗಿದೆ. 2020ರಿಂದ 2023ರವರೆಗೆ ಬಾಕಿ ಉಳಿದಿರುವ 38 ತಿಂಗಳ ವೇತನವನ್ನು ಬಿಡುಗಡೆ ಮಾಡುವಂತೆ
ನೌಕರರು ಆಗ್ರಹಿಸಿದ್ದಾರೆ. ಜೊತೆಗೆ, 2024ರ ಜನವರಿ 1ರಿಂದಲೇ ಹೊಸ ವೇತನ ಪರಿಷ್ಕರಣೆ ಜಾರಿಯಾಗಬೇಕು ಎಂಬುದು ಅವರ ಪ್ರಮುಖ ಬೇಡಿಕೆ.
ಆದರೆ ಸರ್ಕಾರವು ಈ ಬೇಡಿಕೆಗಳಿಗೆ ಸಂಪೂರ್ಣ ಸ್ಪಂದಿಸದೇ, 2025 ಅಥವಾ 2026ರಿಂದ ವೇತನ ಪರಿಷ್ಕರಣೆ ಜಾರಿಗೆ ತರಲು ಮುಂದಾಗಿದೆ.
ಇದರಿಂದ ಅಸಮಾಧಾನಗೊಂಡ (KSRTC BMTC employees strike) ನೌಕರರು ಮತ್ತೆ ಹೋರಾಟದ ದಾರಿ ಹಿಡಿದಿದ್ದಾರೆ.
ಸರ್ಕಾರ ಮತ್ತು ನೌಕರರ ನಡುವಿನ ಭಿನ್ನಾಭಿಪ್ರಾಯ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಸಮಸ್ಯೆ ಇನ್ನೂ ಬಗೆಹರಿಯದಂತಾಗಿದೆ.
ಸರ್ಕಾರವು 38 ತಿಂಗಳ ಬದಲು 18 ಅಥವಾ 20 ತಿಂಗಳ ಬಾಕಿ ಹಣವನ್ನು ಮಾತ್ರ ಬಿಡುಗಡೆ ಮಾಡುವುದಾಗಿ ಹೇಳಿರುವುದು ನೌಕರರ ಅಸಮಾಧಾನಕ್ಕೆ ಕಾರಣವಾಗಿದೆ.
ಈ ನಿರ್ಧಾರದಿಂದ ನೌಕರರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ತಮ್ಮ ಹಕ್ಕುಗಳನ್ನು ಪಡೆಯುವವರೆಗೆ ಹೋರಾಟ ಮುಂದುವರಿಸುವುದಾಗಿ ತಿಳಿಸಿದ್ದಾರೆ.
ಇನ್ನು ಪ್ರತಿಭಟನೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಕೆಲವು ನಿರ್ಬಂಧಗಳನ್ನು ವಿಧಿಸಿದೆ. ನೆಲಮಂಗಲದಿಂದ ಫ್ರೀಡಂ ಪಾರ್ಕ್ (Freedom Park) ವರೆಗೆ ಪಾದಯಾತ್ರೆ
ಮಾಡಲು ಅನುಮತಿ ನೀಡಲಾಗಿಲ್ಲ. ಅಲ್ಲದೆ, ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಸಹ ಅನುಮತಿ ನಿರಾಕರಿಸಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.
ಈ ಹಿನ್ನೆಲೆಯಲ್ಲಿ ನೌಕರರು ನ್ಯಾಯಾಲಯದ ಮೊರೆ ಹೋಗಿದ್ದು, ಇಂದು ಹೈಕೋರ್ಟ್ನಲ್ಲಿ (Highcourt) ಈ ಸಂಬಂಧ ವಿಚಾರಣೆ ನಡೆಯಲಿದೆ.
ಸರ್ಕಾರ ಪ್ರತಿಭಟನೆಗೆ ಅವಕಾಶ ನೀಡುತ್ತಿಲ್ಲ ಎಂಬ ಆರೋಪವನ್ನು ನೌಕರರ ಮುಖಂಡರು ಮಾಡಿದ್ದಾರೆ.
ಒಟ್ಟಾರೆ, ಸಾರಿಗೆ ನೌಕರರ ಹೋರಾಟ ಮುಂದುವರಿದರೆ ರಾಜ್ಯದ ಸಾರ್ವಜನಿಕ ಸಾರಿಗೆ ವ್ಯವಸ್ಥೆಗೆ ದೊಡ್ಡ ಮಟ್ಟದ ಪರಿಣಾಮ ಬೀರುವ ಸಾಧ್ಯತೆ ಇದೆ.
ಬಸ್ ಸೇವೆಯಲ್ಲಿ ವ್ಯತ್ಯಯ ಉಂಟಾದರೆ, ದಿನನಿತ್ಯ ಪ್ರಯಾಣಿಸುವ ಜನರಿಗೆ ತೊಂದರೆ ಅನಿವಾರ್ಯ. ಸರ್ಕಾರ ಹಾಗೂ ನೌಕರರು ಶೀಘ್ರದಲ್ಲೇ ಸಮಾಲೋಚನೆ
ನಡೆಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದು ಅಗತ್ಯವಾಗಿದೆ. ಇಲ್ಲದಿದ್ದರೆ ಈ ಹೋರಾಟ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.