ದಸರಾ ಪ್ರಯುಕ್ತ ಕೆಎಸ್ಆ‌ರ್‌ಟಿಸಿಯಿಂದ ಹೆಚ್ಚುವರಿ ಬಸ್‌

ಬೆಂಗಳೂರು ಅ 8 : ದಸರಾ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ‌ಯು ಪ್ರಯಾಣಿಕರ ಅನುಕೂಲಕ್ಕಾಗಿ 13 ರಿಂದ 21 ರ ವರೆಗೆ ಒಂದು ಸಾವಿರ ಹೆಚ್ಚುವರಿ ಬಸ್ಸುಗಳನ್ನು ನೀಯೋಜನೆ ಮಾಡಿದೆ.

ಈ ಹೆಚ್ಚುವರಿ ಬಸ್ಸುಗಳ ಸೇವೆಯು ಧರ್ಮಸ್ಥಳ, ಕುಕ್ಕೆ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಮೈಸೂರು, ಮಡಿಕೇರಿ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲ್ಬುರ್ಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್, ತಿರುವನಂತಪುರ, ಚೆನ್ನೈ, ಕೊಯಮತ್ತೂರ್, ಪುಣೆ ಸೇರಿದಂತೆ ಇನ್ನೂ ಹಲವು ಪ್ರದೇಶಗಳಿಗೆ ಒದಗಿಸುವುದಾಗಿ ಸಂಸ್ಥೆ ತಿಳಿಸಿದೆ.

ಈ ಹೆಚ್ಚುವರಿ ಬಸ್ಸುಗಳ ಪ್ರಯಾಣ ದರದಲ್ಲಿ ಯಾವುದೇ ಹೆಚ್ಚುವರಿ ಇರುವುದಿಲ್ಲ. ನಿಗಮದ ವೆಬ್ಸೈಟ್ www.ksrtc karnataka.gov.in ಹಾಗು ಕರ್ನಾಟಕ ಮತ್ತು ಬೇರೆ ರಾಜ್ಯಗಳ ಗಣಕೀಕೃತ ಬುಕಿಂಗ್ ಕೌಂಟರ್‌ಗಳಲ್ಲಿ ಟಿಕೆಟ್ ಬುಕ್ಕಿಂಗ್‌ಗೆ ಅವಕಾಶ ಒದಗಿಸಲಾಗಿದೆ ಎಂದು ಸಂಸ್ಥೆ ಹೇಳಿದೆ

Exit mobile version