• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಕುಡುಕರ ನಾಯಕ ಬೀರಾದಾರ್..!

padma by padma
in Vijaya Time
0
SHARES
0
VIEWS
Share on FacebookShare on Twitter

ಭಿಕ್ಷುಕ ಮತ್ತು ಕುಡುಕನ ಪಾತ್ರಗಳಿಗೆ ವೈಜನಾಥ ಬೀರಾದಾರ್ ಅವರಂತೆ ಜೀವ ತುಂಬುವ ಮತ್ತೋರ್ವ ನಟ ಕನ್ನಡದಲ್ಲಿ ಇಲ್ಲ. ಬಹುಶಃ ಅದೇ ಕಾರಣಕ್ಕೆ ಇರಬೇಕು ಅವರಿಗೆ ಅಂಥ ಪಾತ್ರಗಳೇ ಪದೇ ಪದೇ ದೊರಕುತ್ತವೆ. ಈ ಸಂದರ್ಭದಲ್ಲಿ ’90 ಹೊಡಿ ಮನೀಗ್ ನಡಿ’ ಎನ್ನುವ ಚಿತ್ರವೊಂದರಲ್ಲಿ ನಟಿಸುತ್ತಿದ್ದಾರೆ.

ಸಾಮಾನ್ಯವಾಗಿ ನೈಂಟಿ ಕುಡಿದು ಬೀದಿಯಲ್ಲೇ ಬೀಳುವ ಪಾತ್ರ ಮಾಡುವ ಬೀರಾದಾರ್ ಈ ಬಾರಿ ಮನೆಗೆ ನಡಿ ಎಂದಿದ್ದಾರೆ! ಅಂದರೆ ಕುಡಿದು ಮನೆಗೆ ಹೋಗುತ್ತಾರ? ಹೋದ ಮೇಲೆ ಅಲ್ಲಿ ಏನು ನಡೆಯುತ್ತದೆ ಎನ್ನುವ ಕುತೂಹಲ ಶೀರ್ಷಿಕೆಯಲ್ಲೇ ಇದೆ. “ಮದ್ಯಪಾನದಿಂದಾಗುವ ದುಷ್ಪರಿಣಾಮಗಳನ್ನು ಮನೋರಂಜನೆಯ ಮೂಲಕ‌ ಉತ್ತಮ ಸಂದೇಶ ಹೇಳುವ ಕಥಾಹಂದರ ಈ ಚಿತ್ರದಲ್ಲಿದೆ” ಎನ್ನುತ್ತಾರೆ ನಿರ್ದೇಶಕ ನಾಗರಾಜ್ ಅರೆಹೊಳೆ. ಅವರು ಈ ಹಿಂದೆ ‘ಹಾರೋ ಹಕ್ಕಿ’ ಹಾಗೂ ‘ಕೀಟ್ಲೆ ಕೃಷ್ಣ’ ಎಂಬ ಮಕ್ಕಳ ಚಿತ್ರಗಳನ್ನು ನಿರ್ದೇಶಿಸಿದ್ದರು. ಇದುವರೆಗೆ ಸಿನಿಮಾದ ಅರ್ಧಭಾಗದಷ್ಟು ಚಿತ್ರೀಕರಣ ಬಾಗಲಕೋಟೆಯಲ್ಲಿ ನಡೆದಿತ್ತು. ಪ್ರಸ್ತುತ ಬೆಂಗಳೂರು, ಬಿಡದಿ ಮೊದಲಾದೆಡೆಗಳಲ್ಲಿ ಶೂಟಿಂಗ್ ಸಾಗಿದೆ.

`ಕನಸೆಂಬ ಕುದುರೆಯನೇರಿ’ ಚಿತ್ರದ ಅಭಿನಯಕ್ಕಾಗಿ ಅಂತಾರಾಷ್ಟ್ರೀಯ ಪ್ರಶಸ್ತಿ ಪಡೆದಿರುವ ನಟ ವೈಜನಾಥ್ ಬಿರಾದಾರ್ ಅವರಿಗೆ ’90 ಹೊಡಿ ಮನೀಗ್ ನಡಿ’ ಎಂಬ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದು ಇವರ ಅಭಿನಯದ 500ನೇ ಚಿತ್ರ. ಅಮ್ಮ ಟಾಕೀಸ್ ಬಾಗಲಕೋಟೆ ಸಂಸ್ಥೆ ಲಾಂಛನದಲ್ಲಿ ರತ್ನಮಾಲ ಬಾದರದಿನ್ನಿ‌ ಈ ಚಿತ್ರ‌ ನಿರ್ಮಿಸುತ್ತಿದ್ದಾರೆ.
ಉಮೇಶ್ ಬಾದರದಿನ್ನಿ‌‌ ಹಾಗೂ ನಾಗರಾಜ್ ಅರೆಹೊಳೆ ಜಂಟಿಯಾಗಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಕಥೆ ಹಾಗೂ ಸಂಭಾಷಣೆ ಉಮೇಶ್ ಬಾದರದಿನ್ನಿ ಅವರು ಬರೆದರೆ, ಚಿತ್ರಕಥೆಯನ್ನು ಇಬ್ಬರು ನಿರ್ದೇಶಕರು ಸೇರಿ ರಚಿಸಿದ್ದಾರೆ. ಈ ಹಿಂದೆ ‘ಬಿಡಲಾರೆ ಎಂದೂ ನಿನ್ನ’ ಚಿತ್ರ ನಿರ್ದೇಶಿಸಿದ್ದ ಉಮೇಶ ಬಾದರದಿನ್ನಿ ಅವರಿಗೆ ಇದು ಎರಡನೇ ಚಿತ್ರ.

ಚಿತ್ರದಲ್ಲಿ ಮೂರು ಹಾಡುಗಳಿದ್ದು,
ಕಿರಣ್ ಶಂಕರ್ – ಶಿವು ಭೇರಗಿ ಸಂಗೀತ ನಿರ್ದೇಶನವಿದೆ. ವಿ.ನಾಗೇಂದ್ರ ಪ್ರಸಾದ್ ಎರಡು ಹಾಡುಗಳನ್ನು ಹಾಗೂ ಶಿವು ಭೇರಗಿ ಒಂದು ಹಾಡನ್ನು ಬರೆದಿದ್ದಾರೆ.
ಕೃಷ್ಣ ನಾಯ್ಕರ್ ಛಾಯಾಗ್ರಹಣ, ವೆಂಕಿ udv ಸಂಕಲನ, ರಾಜಾರಮೇಶ್ ಸಾಹಸ ನಿರ್ದೇಶನ ಹಾಗೂ ಭೂಷಣ್ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.
ವೈಜನಾಥ್ ಬಿರಾದಾರ್ ಜತೆಗೆ ಕರಿಸುಬ್ಬು, ಧರ್ಮ, ನೀತು, ಪೂಜಾ, ಅಭಯ್ ವೀರ್, ಪ್ರಶಾಂತ್ ಸಿದ್ದಿ, ಆರ್ ಡಿ ಬಾಬು, ವಿವೇಕ್ ಜಂಬಗಿ ಮುಂತಾದವರ ತಾರಾಬಳಗ ಈ ಚಿತ್ರಕ್ಕಿದೆ.

Related News

ಕಾವೇರಿ ವಿವಾದ : ನೀರು ಬಿಡಬಾರದು ಎನ್ನುವ ಪ್ರಶ್ನೆ ಅಲ್ಲ, ಬಿಡಲು ನಮ್ಮಲ್ಲಿ ನೀರೇ ಇಲ್ಲ: ಸಿಎಂ ಸಿದ್ದರಾಮಯ್ಯ
Vijaya Time

ಕಾವೇರಿ ವಿವಾದ : ನೀರು ಬಿಡಬಾರದು ಎನ್ನುವ ಪ್ರಶ್ನೆ ಅಲ್ಲ, ಬಿಡಲು ನಮ್ಮಲ್ಲಿ ನೀರೇ ಇಲ್ಲ: ಸಿಎಂ ಸಿದ್ದರಾಮಯ್ಯ

September 20, 2023
ಪ್ರಶ್ನಿಸದೆ ಬಾಯಿಮುಚ್ಚಿ ಕೂತರೆ ಇಡೀ ದೇಶಕ್ಕೇ ಪರದೆ ಹಾಕಬೇಕಾದೀತು ಎಚ್ಚರ – ಮೋದಿ ವಿರುದ್ದ ನಟ ಕಿಶೋರ್ ವಾಗ್ದಾಳಿ
Vijaya Time

ಪ್ರಶ್ನಿಸದೆ ಬಾಯಿಮುಚ್ಚಿ ಕೂತರೆ ಇಡೀ ದೇಶಕ್ಕೇ ಪರದೆ ಹಾಕಬೇಕಾದೀತು ಎಚ್ಚರ – ಮೋದಿ ವಿರುದ್ದ ನಟ ಕಿಶೋರ್ ವಾಗ್ದಾಳಿ

September 19, 2023
ಜನನ ಪ್ರಮಾಣ ಪತ್ರ ಕಡ್ಡಾಯ: ಅಕ್ಟೋಬರ್ 1 ರಿಂದ ಜನನ, ಮರಣ ಮಾಹಿತಿಗೆ ಡಿಜಿಟಲ್‌ ಟಚ್‌
Vijaya Time

ಜನನ ಪ್ರಮಾಣ ಪತ್ರ ಕಡ್ಡಾಯ: ಅಕ್ಟೋಬರ್ 1 ರಿಂದ ಜನನ, ಮರಣ ಮಾಹಿತಿಗೆ ಡಿಜಿಟಲ್‌ ಟಚ್‌

September 15, 2023
ಕೆ ಪಿ ಎಸ್ ಸಿ ಕಾರ್ಯದರ್ಶಿ ವಿಕಾಸ ಸುರಳಕರ್‌ ವರ್ಗಾವಣೆಗೆ ಆಕ್ರೋಶ
Vijaya Time

ಕೆ ಪಿ ಎಸ್ ಸಿ ಕಾರ್ಯದರ್ಶಿ ವಿಕಾಸ ಸುರಳಕರ್‌ ವರ್ಗಾವಣೆಗೆ ಆಕ್ರೋಶ

September 15, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.