ನೈಟ್ರೇಟ್, ಪಾಸ್ಪರಸ್, ಸೀಸ ಸೇರಿ ಬೆಂಗಳೂರು ಜನರ ಮಲಮೂತ್ರಗಳೇ ತುಂಬಿರುವ ಕೊಳಚೆ ನೀರನ್ನು 3ನೇ ಹಂತದಲ್ಲಿ ಸಂಸ್ಕರಿಸದೆ ಕೋಲಾರಕ್ಕೆ ಹರಿಸಿದ್ದೇ ಮಹಾಪಾಪ.ಇಷ್ಟು ದಿನ ಅದನ್ನೇ ಪುಣ್ಯತೀರ್ಥ (kumaraswamy against to siddaramaiah) ಎಂದು ಡಂಗುರ ಹೊಡೆದವರು ನಿನ್ನೆ ಕೋಲಾರದಲ್ಲಿ 3ನೇ ಹಂತದ ಸಂಸ್ಕರಣೆ ಬಗ್ಗೆ ಹೇಳಿ ಕಾವೇರಿ ಬಗ್ಗೆ ಬೊಗಳೆ ಬಿಡುತ್ತೀರಲ್ಲ,
ಸ್ವಲ್ಪವಾದರೂ ಸಂಕೋಚ ಬೇಡವೇ? ಎಂದು ಜೆಡಿಎಸ್ನಾಯಕ ಎಚ್.ಡಿ.ಕುಮಾರಸ್ವಾಮಿ(HD Kumaraswamy) ಅವರು ವಿಪಕ್ಷ ನಾಯಕ ಸಿದ್ದರಾಮಯ್ಯ(siddaramaiah) ವಿರುದ್ದ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.
![hd kumaraswamy jds leader](https://sp-ao.shortpixel.ai/client/to_webp,q_glossy,ret_img,w_665,h_374/https://vijayatimes.com/wp-content/uploads/2023/01/Untitled-design-46-1024x576.webp)
ಈ ಕುರಿತು ಸರಣಿ ಟ್ವೀಟ್ಮಾಡಿರುವ ಅವರು, 5 ವರ್ಷ ಸರಕಾರ ಮಾಡಿ ಎತ್ತಿನಹೊಳೆ ಹೆಸರಿನಲ್ಲಿ ಕೊಳ್ಳೆ ಹೊಡೆದ ಗಿರಾಕಿಗಳು,
ಆ ನಂತರ ಕೆಸಿ ವ್ಯಾಲಿಯ ವಿಷನೀರು ಹರಿಸಿ, ಈಗ ಚುನಾವಣೆ ಹೊತ್ತಿನಲ್ಲಿ ಕಾವೇರಿ(kumaraswamy against to siddaramaiah) ಎಂದು ಸುಳ್ಳು ಹೇಳುವುದು ಎಷ್ಟು ಸರಿ? ಒಮ್ಮೆ ಯೋಚನೆ ಮಾಡಿ ಕೃಷ್ಣಭೈರೇಗೌಡರೇ? ಮತ ಬೇಕಾದಾಗ ಮನಃಸಾಕ್ಷಿಯನ್ನು ಮಾರಿಕೊಳ್ಳುವುದು ನಿಮಗೆ ಶೋಭೆಯಲ್ಲ.
ನೀರೇ ಬರದಿರುವ ಎತ್ತಿನಹೊಳೆ ಹೆಸರಿನಲ್ಲಿ ಎತ್ತಿದ ಎತ್ತುವಳಿ ಸಾಲದೆಂದು ಕೆಸಿ ವ್ಯಾಲಿಯಲ್ಲಿ ಪರ್ಸಂಟೇಜ್ ಜೇಬಿಗಿಳಿಸಿದ್ದು ಯಾರು? ಹಣದ ದುರಾಸೆಗೆ ವಿಷನೀರು ಹರಿಸಿ ಕೋಲಾರ ಜಿಲ್ಲೆ ಜನರನ್ನು ಸಾವಿನಕೂಪಕ್ಕೆ ತಳ್ಳಿದವರು ಯಾರು?
![siddaramaiah congress leader](https://sp-ao.shortpixel.ai/client/to_webp,q_glossy,ret_img,w_586,h_330/https://vijayatimes.com/wp-content/uploads/2023/01/Untitled-design-45-1024x576.webp)
ಆ ಗುತ್ತಿಗೆದಾರನ ಹಿಂದೆ ಅನುದಿನ ಗಿರಕಿ ಹೊಡೆದ ಗಿರಾಕಿ ಯಾರು ಎಂದು ನಿಮಗೆ ಗೊತ್ತಿಲ್ಲವೆ ಕೃಷ್ಣಭೈರೇಗೌಡರೇ? ಎಂದು ಕಾಂಗ್ರೆಸ್ಶಾಸಕ ಕೃಷ್ಣಭೈರೇಗೌಡರನ್ನೂ(Krishna Bhaire gowda) ಪ್ರಶ್ನಿಸಿದ್ದಾರೆ.
ಇನ್ನೊಂದು ಟ್ವೀಟ್ನಲ್ಲಿ, ನಿಮ್ಮ ತಂದೆಯವರಾದ ಶ್ರೀ ಸಿ.ಭೈರೇಗೌಡರ ಬಗ್ಗೆ ನನಗೂ ಅಪಾರ ಗೌರವ ಇದೆ.
ಶ್ರೀ ದೇವೇಗೌಡರ ಸಂಪುಟದಲ್ಲಿ ಪ್ರಭಾವೀ ಮಂತ್ರಿಗಳಾಗಿದ್ದ ನಿಮ್ಮ ತಂದೆಯವರು ಅಂದೇ ಕೋಲಾರಕ್ಕೆ ಕಾವೇರಿ ನೀರು ಹರಿಸುವ ಬಗ್ಗೆ ದನಿ ಎತ್ತಬಹುದಿತ್ತು.
ಕೊನೆಗೆ ನೀವಾದರೂ ಹೋರಾಟ ನಡೆಸಬೇಕಿತ್ತು. ಮಾನ್ಯ ಕೃಷ್ಣಭೈರೇಗೌಡರೇ, ಕಾವೇರಿ ನದಿ ನೀರು ಹಂಚಿಕೆ ಬಗ್ಗೆ ನಿಮ್ಮ ಅಜ್ಞಾನಕ್ಕೆ ಏನೆಂದು ಹೇಳಬೇಕೋ ಗೊತ್ತಾಗುತ್ತಿಲ್ಲ.
ಇದನ್ನೂ ಓದಿ: https://vijayatimes.com/siddu-angry-against-bjp/
ಕಾವೇರಿ ನ್ಯಾಯಾಧಿಕರಣ ರಚನೆ ಆಗಿದ್ದು ಯಾವಾಗ? ರಾಜ್ಯಕ್ಕೆ ಕಾವೇರಿ ನೀರಿನ ಹಕ್ಕು ಸಾಧಿಸಲು ಮಾಜಿ ಪ್ರಧಾನಿಗಳಾದ ಶ್ರೀ ದೇವೇಗೌಡ(Devegowda) ಅವರ ಪಾತ್ರ ಏನು? ಎಂಬುದರ ಬಗ್ಗೆ ದಯಮಾಡಿ ಮಾಹಿತಿ ಪಡೆದುಕೊಳ್ಳಿ. ಶ್ರೀ ಕೃಷ್ಣಭೈರೇಗೌಡ ಅವರು ಬಹಳ ತಿಳಿವಳಿಕೆ ಉಳ್ಳವರು ಎಂದು ಭಾವಿಸಿದ್ದೆ.
ನನ್ನಂತೆ ಅವರು ಹಳ್ಳಿಯಲ್ಲಿ ಕಲಿಯದೆ ವಿದೇಶದಲ್ಲಿ ಕಲಿತವರು. ಅವರ ಜ್ಞಾನದ ಪರಿಧಿ ದೊಡ್ಡದು ಎಂದು ತಿಳಿದಿದ್ದೆ. ಕೋಲಾರದಲ್ಲಿ ನಿನ್ನೆ ಅವರು ಕೊಟ್ಟ ಹೇಳಿಕೆ ಗಮನಿಸಿದ ಮೇಲೆ ಅವರ ಕುರಿತ ನನ್ನ ಅಭಿಪ್ರಾಯ ತಪ್ಪೆಂದು ಎನಿಸಿತು ಎಂದು ಲೇವಡಿ ಮಾಡಿದ್ದಾರೆ.