ನಂದಿನಿ ವಿಲೀನದ ಬಗ್ಗೆ ಕುಮಾರಸ್ವಾಮಿಯವರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ – ಎಚ್‌ಡಿಕೆ ವಿರುದ್ದ ಬಿಜೆಪಿ ವಾಗ್ದಾಳಿ

Bengaluru: ಮಂಡ್ಯದಲ್ಲಿ ನಮ್ಮ ಸರ್ಕಾರ ಮೊನ್ನೆಯಷ್ಟೇ ಮೆಗಾ ಡೈರಿಯನ್ನು ಉದ್ಘಾಟಿಸಿದೆ. “ನಂದಿನಿ”(Kumaraswamy spreading false news) ವಿಲೀನದ ಬಗ್ಗೆ ಯಾರೂ ಏನು ಹೇಳದಿದ್ದರೂ,

ಯಾವತ್ತೂ ಇಲ್ಲದ ಕನ್ನಡ ಪ್ರೇಮ ತೋರಿಸಲು ಕುಮಾರಸ್ವಾಮಿಯವರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು, ರಾಜ್ಯ ಬಿಜೆಪಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ(HD Kumaraswamy) ಅವರ ವಿರುದ್ದ ವಾಗ್ದಾಳಿ ನಡೆಸಿದೆ.

ಈ ಕುರಿತು ಸರಣಿ ಟ್ವೀಟ್‌ಮಾಡಿರುವ ಬಿಜೆಪಿ(BJP), ನಮ್ಮ ಸರ್ಕಾರ ರಾಮನಗರದ ರಾಮದೇವರ ಬೆಟ್ಟದಲ್ಲಿ ಅಯೋಧ್ಯೆ(Ayodhya) ಮಾದರಿಯಂತೆ ಶ್ರೀ ರಾಮಚಂದ್ರನ ದೇವಸ್ಥಾನವನ್ನು ನಿರ್ಮಿಸಲಿದೆ.

ಮಾಗಡಿ ಕೆಂಪಾಪುರದಲ್ಲಿ ಕೆಂಪೇಗೌಡರ(Kempegowda) ಸ್ಮಾರಕ, ಮಾಗಡಿ ವೀರಾಪುರದಲ್ಲಿ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಸ್ಮಾರಕ ಮತ್ತು ಮಾಗಡಿ ಬಾನಂದೂರಿನಲ್ಲಿ ಶ್ರೀ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಸ್ಮಾರಕ ನಿರ್ಮಿಸಲಿದೆ.

ನಮ್ಮ ಸರ್ಕಾರ ರಾಮನಗರಕ್ಕೆ ವಿಶ್ವದರ್ಜೆಯ ರೇಷ್ಮೆ ಮಾರುಕಟ್ಟೆ, ಮಾಗಡಿಯಲ್ಲಿ ಕರ್ನಾಟಕ ಸಂಸ್ಕೃತ ವಿವಿಯ ಹೊಸ ಆವರಣ ಕೊಟ್ಟಿದೆ.

ರಾಮನಗರವನ್ನು(Ramnagara) ಸ್ವಂತ ರಾಜಕೀಯ ಲಾಭಕ್ಕಾಗಿ ಜಿಲ್ಲೆಯಂದು ಘೋಷಿಸಿ ಬಿಡದಿಯಲ್ಲಿ(Bidadi) ಐಷಾರಾಮಿ ಜೀವನ ಸಾಗಿಸುತ್ತ, ಸ್ವತಃ ದಂಪತಿಗಳೇ ಶಾಸಕರಾಗಿದ್ದಾರೆ ಹೊರತಾಗಿ ಜಿಲ್ಲೆಗೆ ಬೇರೇನು ಮಾಡಿದ್ದೀರಿ? ಎಂದು ಪ್ರಶ್ನಿಸಿದೆ.

ಇನ್ನೊಂದು ಟ್ವೀಟ್‌ನಲ್ಲಿ, ಈ ಮಹನೀಯರನ್ನು ಎಂದಿಗೂ ನೆನೆಯದೆ, ಕನ್ನಡ ದ್ವೇಷಿ ಟಿಪ್ಪು ಸುಲ್ತಾನನ(Tippu sulthan) ಹೆಸರಿನಲ್ಲಿ ವಿಶ್ವವಿದ್ಯಾಲಯ ತೆರಿಯಲಿದ್ದೇವೆ ಎಂದು ಘೋಷಿಸುವ ಮೂಲಕ ಕನ್ನಡ ಕುಲ ಕೋಟಿಯ ಭಾವನೆಗಳಿಗೆ ಧಕ್ಕೆ ತಂದಿದ್ದೀರಿ.

ಇಷ್ಟೆಲ್ಲಾ ಹಳವಂಡ ಮಾಡಿಕೊಂಡಿರುವ ಕುಮಾರಸ್ವಾಮಿಯವರು ಕಟ್ಟಾಳು ಎಂಬ ಹುಂಬತನದ ಭ್ರಮಾಲೋಕದಿಂದ ವಾಸ್ತವಕ್ಕೆ ಬರಬೇಕು.

2019ರ ಚುನಾವಣೆಯಲ್ಲಿ ನಿಖಿಲ್‌ಕುಮಾರಸ್ವಾಮಿ(Nikhil kumaraswamy) ಮಂಡ್ಯದಲ್ಲಿ(Kumaraswamy spreading false news) ಸೋಲುವ ಮುನ್ನ ಚುನಾವಣಾ ಗಿಮಿಕ್ ಆಗಿ ಘೋಷಿಸಿದ್ದ 8,000 ಕೋಟಿ ರೂ.

ಮೊತ್ತದ ಅಭಿವೃದ್ಧಿ ಯೋಜನೆಗಳು ಮಂಡ್ಯದ ಜನರ ದಿಕ್ಕುತಪಿಸುಲು ಕುಮಾರಸ್ವಾಮಿಯವರು ನೀರಿನ ಮೇಲೆ ಗೀಚಿದ ಅಕ್ಷರಗಳು. ಇದು ಸ್ವಾಭಿಮಾನಿ ಮಂಡ್ಯದ ಕನ್ನಡಿಗರಿಗೆ ಕುಮಾರಸ್ವಾಮಿಯವರು ಮಾಡಿದ ಅವಮಾನ ಎಂದಿದೆ.

ಮತ್ತೊಂದು ಟ್ವೀಟ್‌ನಲ್ಲಿ, MANMUL ನಲ್ಲಿ ಜನತಾದಳದ ನಾಯಕರದ್ದೇ ಕಾರುಬಾರಂತೆ.

ಅಲ್ಲಿ ತಾಂಡವವಾಡುತ್ತಿರುವ ಅವ್ಯವಹಾರಗಳ ಬಗ್ಗೆ ಕುಮಾರಸ್ವಾಮಿಯವರು ದಿವ್ಯ ಮೌನ ವಹಿಸಿದ್ದಾರೆ.

https://youtu.be/gRAVtWuZck8

ಮೈಶುಗರ್ ಸಕ್ಕರೆ(My sugar) ಕಾರ್ಖಾನೆಗೆ ಬೀಗ ಜಡಿದು ಮಂಡ್ಯದ ಲಕ್ಷಾಂತರ ಜನರ ಹೊಟ್ಟೆಯ ಮೇಲೆ ಹೊಡೆದವರು ಕುಮಾರಸ್ವಾಮಿಯವರು ರವರಲ್ಲವೇ?

ಈ ಮೂರೂ ಜಿಲ್ಲೆಗಳಲ್ಲೂ ಮೆಗಾ ಡೈರಿ ಇದ್ದದ್ದು ಹಾಸನದಲ್ಲಿ ಮಾತ್ರ. ಅದೂ ಬಿಜೆಪಿ ಸರ್ಕಾರದ ಕೊಡುಗೆ.

ಹಾಸನದಲ್ಲಿ ಅಣ್ಣ, ಮಂಡ್ಯದಲ್ಲಿ ಮಗ, ರಾಮನಗರದಲ್ಲಿ ಖುದ್ದು ದಂಪತಿಗಳು ಕೋಟೆ ಕಟ್ಟಿ ಮೆರೆಯುವ ಹುನ್ನಾರದಲ್ಲಿ, ಕಾರ್ಯಕರ್ತರಿಗೆ ಕ್ಯಾರೇ ಎನ್ನದಿರುವುದು, ಹೆಗಲು ಕೊಟ್ಟ ಕಾರ್ಯಕರ್ತರಿಗೆ ಕೈ ಕೊಟ್ಟಿದ್ದು ಎಲ್ಲವನ್ನು ಜನ ಕಂಡಿದ್ದಾರೆ.

ಸದಾ ಕಾಲ ಸದಾರಮೆ ನಾಟಕವಾಡುವ ಕುಮಾರಸ್ವಾಮಿಯವರು ಕನ್ನಡಿಗರ ಬಗ್ಗೆ ಎಷ್ಟು ಕಾಳಜಿ ತೋರಿದ್ದಾರೆ ಅನ್ನೋದು ಎಲ್ಲರಿಗೂ ಅರಿವಿದೆ;

ಮಂಡ್ಯದ ಜನತೆಯಂತೂ ಇದಕ್ಕೆ ಖುದ್ದು ಸಾಕ್ಷಿ. ಮಂಡ್ಯದ ಮೈಶುಗರ್ ಮುಚ್ಚಿದ ಕಥೆ, 8000 ಕೋಟಿ ರೂ.ಗಳ ಮೊತ್ತದ ಯೋಜನೆಗಳ ಗಾಳಿಪಟ ಹಾರಿಸಿದ ಕಥೆ – ಇವುಗಳ ನೈಜ ಚಿತ್ರಣದ ಅರಿವಿರದ ಕನ್ನಡಿಗರೇ ಇಲ್ಲ ಎಂದು ವಾಗ್ದಾಳಿ ನಡೆಸಿದೆ.

Exit mobile version