• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಬೆಂಗಳೂರಿನಿಂದ ಹೊರಡುವ ಮುನ್ನ ಇದಕ್ಕೆಲ್ಲಾ ಉತ್ತರ ಕೊಡಿ ಅಮಿತ್ ಶಾ ಅವರೇ – ಎಚ್‌ಡಿಕೆ ಪ್ರಶ್ನೆ

Rashmitha Anish by Rashmitha Anish
in ರಾಜಕೀಯ, ರಾಜ್ಯ
ಬೆಂಗಳೂರಿನಿಂದ ಹೊರಡುವ ಮುನ್ನ ಇದಕ್ಕೆಲ್ಲಾ ಉತ್ತರ ಕೊಡಿ ಅಮಿತ್ ಶಾ ಅವರೇ – ಎಚ್‌ಡಿಕೆ ಪ್ರಶ್ನೆ
0
SHARES
70
VIEWS
Share on FacebookShare on Twitter

Bengaluru: ಪಂಚರತ್ನ ರಥಯಾತ್ರೆ ನಿಮ್ಮ ಕಣ್ಣು ಕುಕ್ಕಿದೆ. ಸಾಲಮನ್ನಾ ನಿಮ್ಮ ನಿದ್ದೆಗೆಡಿಸಿದೆ. ಎಷ್ಟೇ (Kumaraswamy tweeted Amit shah) ಆದರೂ ಕೇಂದ್ರದ ಸಹಕಾರ ಸಚಿವರಾದ ನಿಮಗೆ ಸಾಲಮನ್ನಾ ದುಃಸ್ವಪ್ನದಂತೆ ಕಾಡುತ್ತಿದೆ ಎನ್ನುವುದು ಗೊತ್ತು. ಶ್ರೀ ಹೆಚ್.ಡಿ.ದೇವೇಗೌಡರು ಮತ್ತು ನನ್ನ ಸಾಧನೆಗಳು ನಿಮ್ಮ ಚಿಂತೆ ಹೆಚ್ಚಿಸಿವೆ. ಇನ್ನಾದರೂ ಸುಳ್ಳಿನ ಜಾಗಟೆ ಬಾರಿಸುವುದು ನಿಲ್ಲಿಸಿ.

ಇವತ್ತು ಬೆಂಗಳೂರಿನಿಂದ ಹೊರಡುವ ಮುನ್ನ ಇದಕ್ಕೆಲ್ಲಾ ಉತ್ತರ ಕೊಡಿ ಅಮಿತ್ ಶಾ ಅವರೇ. ಎಷ್ಟಾದರೂ (Kumaraswamy tweeted Amit shah) ನೀವು ಸ್ವಯಂ ಘೋಷಿತ ಸಾಚಾ ಅಲ್ಲವೇ?

ಉತ್ತರ ಹೇಳಿ ಹೋದರೆ ನಾವೂ ಧನ್ಯರಾಗುತ್ತೇವೆ ಎಂದು ಜೆಡಿಎಸ್‌ನಾಯಕ ಎಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

tweets

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, ಸತ್ಯ ಅಜರಾಮರ, ಅಸತ್ಯ ನಿಮ್ಮ ಹಣೆಬರ. ಸತ್ಯದ ಮುಂದೆ ದಮ್ಮು ತಾಕತ್ತು ದುರ್ಬಲ. ಕರ್ನಾಟಕ ಬಿಜೆಪಿ(BJP) ಫ್ಯಾಮಿಲಿ ಪಾಲಿಟಿಕ್ಸ್(Family politics) ಪಟ್ಟಿ ಇಲ್ಲಿದೆ ನೋಡಿ.

  • ಯಡಿಯೂರಪ್ಪ & ಸನ್ಸ್
  • ರವಿಸುಬ್ರಮಣ್ಯ – ತೇಜಸ್ವಿ ಸೂರ್ಯ
  • ಅಶೋಕ್ – ರವಿ
  • ವಿ.ಸೋಮಣ್ಣ & ಸನ್
  • ಅರವಿಂದ ಲಿಂಬಾವಳಿ – ರಘು
  • ಎಸ್.ಆರ್.ವಿಶ್ವನಾಥ್ – ವಾಣಿ ವಿಶ್ವನಾಥ್
  • ಜಗದೀಶ್ ಶೆಟ್ಟರ್ – ಪ್ರದೀಪ್ ಶೆಟ್ಟರ್
  • ಮುರುಗೇಶ್ ನಿರಾಣಿ – ಹನುಮಂತ ನಿರಾಣಿ
  • ಜಿ ಎಸ್ ಬಸವರಾಜು – ಜ್ಯೋತಿ ಗಣೇಶ್
  • ಜಾರಕಿಹೊಳಿ & ಬ್ರದರ್
  • ಜೊಲ್ಲೆ & ಜೊಲ್ಲೆ
  • ಅಂಗಡಿ ಕುಟುಂಬ
  • ಉದಾಸಿ ಕುಟುಂಬ
  • ಶ್ರೀರಾಮುಲು ಕುಟುಂಬ
  • ರೆಡ್ಡಿ & ರೆಡ್ಡಿ.

    ಇದು ಕೂಡ ಅಪೂರ್ಣ ಪಟ್ಟಿಯೇ. ರಾಷ್ಟ್ರೀಯ ಪಟ್ಟಿ ಬೇಕಿದ್ದರೆ ಹೇಳಿ, ಇದರ ಹತ್ತರಷ್ಟಿದೆ ಎಂದು ಹೇಳಿದ್ದಾರೆ.
  • https://vijayatimes.com/new-year-health-formulas/

ಇನ್ನೊಂದು ಟ್ವೀಟ್‌ನಲ್ಲಿ, ಇನ್ನು ಕುಟುಂಬದ ವಿಷಯ, ನಿಮ್ಮ ಪಕ್ಷದ ಕುಟುಂಬ ರಾಜಕಾರಣದ ಲೆಕ್ಕ ಗೊತ್ತಿಲ್ಲವೇ? ನಿಮ್ಮ ಸುಪುತ್ರ ಜಯ ಶಾ (Jaya shah) ಯಾವ ಸೀಮೆ ಕ್ರಿಕೆಟ್ ಪಂಡಿತರು ಎಂದು ಬಿಸಿಸಿಐನಲ್ಲಿ ಕೂತಿದ್ದಾರೆ?

ಬಿಸಿಸಿಐನಲ್ಲಿ (BCCI) ಯಾರು ಇರಬೇಕು, ಇರಬಾರದೆಂದು ಸುಪ್ರೀಂ ಕೋರ್ಟಿನ (Supreme court) ಸ್ಪಷ್ಟ ಆದೇಶವಿದೆ. ಆ ಆದೇಶಕ್ಕೆ ನಿಮ್ಮ ಮಗ ಅತೀತರೇ? ಈಗ ಹೇಳಿ, ಬಿಸಿಸಿಐ ಯಾರ ಪಾಲಿನ ಎಟಿಎಂ? ಎಂದು ಪ್ರಶ್ನೆಸಿದ್ದಾರೆ.

Amit shah

ಮತ್ತೊಂದು ಟ್ವೀಟ್‌ನಲ್ಲಿ, ಕರ್ನಾಟಕದ ನಿಮ್ಮ ಬಿಜೆಪಿ ಸರಕಾರ ಕೇವಲ 40% ಸರಕಾರ ಅಲ್ಲವೇ ಅಲ್ಲ. ಅದು 55-60% ಸರಕಾರ. ನಿಮಗೂ ಮಾಹಿತಿ ಇರುತ್ತದೆ, ಕರ್ನಾಟಕ ನಿಮ್ಮ ಪಕ್ಷಕ್ಕೂ ಎಟಿಎಂ(ATM) ಹೌದಲ್ಲವೇ? ಈ ಸತ್ಯ ಯಾಕೆ ಮರೆಮಾಚಿದಿರಿ? ಮಂಡ್ಯ(Mandya) ಜನರ ಮುಂದೆ ನಿಮ್ಮ ದಮ್ಮು ತಾಕತ್ತು ನಡೆಯಲ್ಲ, ಅರಿತುಕೊಳ್ಳಿ. ಕರ್ನಾಟಕದ ಬಿಜೆಪಿ ಎಟಿಎಂಗಳು:

  • 1.40% ಕಮೀಷನ್
  • 2.ಪಿಎಸ್ ಐ ಹಗರಣ
  • 3.ಪ್ರಶ್ನೆಪತ್ರಿಕೆ ಸೋರಿಕೆ
  • 3.ಸಹ ಪ್ರಾಧ್ಯಾಪಕರ ನೇಮಕ ಹಗರಣ
  • 4.ವೈದ್ಯ ಪ್ರಾಧ್ಯಾಪಕರ ನೇಮಕ ಹಗರಣ
  • 5.ಕೋವಿಡ್ ನಲ್ಲಿ ಕೊಳ್ಳೆ
  • 6.ಕಾಸಿಗಾಗಿ ಪೋಸ್ಟಿಂಗ್
  • 7.ಗಂಗಾಕಲ್ಯಾಣ ಕರ್ಮಕಾಂಡ
  • 8.ಚಿಲುಮೆ ಹಗರಣ ಇದು ಅಪೂರ್ಣ ಪಟ್ಟಿ, ಅದು ಕೂಡ ದೊಡ್ಡದಿದೆ. ಬೇಕಾ ಅಮಿತ್ ಶಾ ಅವರೇ? ಎಂದು ಟೀಕಿಸಿದ್ದಾರೆ.

ಕೊನೆಯ ಟ್ವೀಟ್‌ನಲ್ಲಿ, ಜೆಡಿಎಸ್ ಜನರ ಎಟಿಎಂ. ನಮ್ಮ ಪಾಲಿಗೆ ಎಟಿಎಂ ಎಂದರೆ ‘ ಎನಿ ಟೈಮ್ ಮನುಷ್ಯತ್ವ ‘ ಎಂದು. ನಿಮ್ಮ ಪಾಲಿಗೆ ಅದು ‘ ಎನಿ ಟೈಮ್ ಮೋಸ ‘. ಸುಳ್ಳಿನ ಜಾಗಟೆ ಹೊಡೆದೇ ದೇಶವನ್ನು ಅಧೋಗತಿಗೆ ತಳ್ಳಿದ್ದೀರಿ.

ಶಾ ಅವರೇ, ದೇಶದ ಮಾತು ಹಾಗಿರಲಿ; ಕರ್ನಾಟದಲ್ಲಿ ನಿಮ್ಮ ಪಕ್ಷದ ಎಟಿಎಂಗಳ ಪಟ್ಟಿ ಮೂಡಿದೆ ನೋಡಿ.. ಜೆಡಿಎಸ್(JDS) ಗೆದ್ದರೆ ಕರ್ನಾಟಕ ಒಂದು ಕುಟುಂಬದ ಎಟಿಎಂ ಆಗುತ್ತದೆಂದು ಜಾಗಟೆ ಹೊಡೆದಿದ್ದೀರಿ. ಜೆಡಿಎಸ್ ಸರಕಾರ ಬಂದರೆ, ಅದು ಆರೂವರೆ ಕೋಟಿ ಕನ್ನಡಿಗರ ಎಟಿಎಂ ಆಗುತ್ತದೆ.

ಇದನ್ನೂ ಓದಿ: https://vijayatimes.com/madhavan-spokes-sons-achievement/

ರೈತರ, ಕಾರ್ಮಿಕರ, ದೀನ ದಲಿತರ, ಅಶಕ್ತರ, ವಿಕಲಚೇತನರ ಎಟಿಎಂ ಆಗುತ್ತದೆ. ನೀವು ಸರ್ವಾಧಿಕಾರಿ ಹಿಟ್ಲರನ ಸಂಪುಟದ ಗೊಬೆಲ್ಲನ ಹೊಸ ಅವತಾರ!! ಸುಳ್ಳು ಹೇಳಿ ಪ್ರಚಾರ ಗಿಟ್ಟಿಸಿಕೊಳ್ಳಬೇಕಾದ ಕರ್ಮ ನಿಮಗೇಕೆ ಬಂತು ಅಮಿತ್‌ಶಾ ಅವರೇ?

ಬರೀ ಬೂಟಾಟಿಕೆ ಪಾರ್ಟಿ (ಬಿಜೆಪಿ) ಸುಳ್ಳುಕೋರರ ಸಂತೆ ಎನ್ನುವುದಕ್ಕೆ ಮಂಡ್ಯದಲ್ಲಿ ಸುಖಾಸುಮ್ಮನೆ ಅಲವತ್ತುಕೊಂಡ ನಿಮ್ಮ ಅಸತ್ಯದ ಹಾಹಾಕಾರದ ವರಸೆಯೇ ಸಾಕ್ಷಿ. ಸ್ಥಳಕ್ಕೊಂದು ವೇಷ, ಕ್ಷಣಕ್ಕೊಂದು ಸುಳ್ಳು; ಇದು ನಿಮ್ಮ ಪಕ್ಷದ ನಿಜ ಸ್ವರೂಪ ಎಂದು ವಾಗ್ದಾಳಿ ನಡೆಸಿದ್ದಾರೆ.
Tags: amitshahHDKumaraswamypolitical

Related News

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 27, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 27, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 27, 2023
ಬಿಎಸ್‌ವೈ ಮನೆ ಮೇಲೆ ಚಪ್ಪಲಿ ! ಒಳಮೀಸಲಾತಿ ವಿರೋಧಿಸಿ ಬಂಜಾರರ ಆಕ್ರೋಶ
ರಾಜಕೀಯ

ಬಿಎಸ್‌ವೈ ಮನೆ ಮೇಲೆ ಚಪ್ಪಲಿ ! ಒಳಮೀಸಲಾತಿ ವಿರೋಧಿಸಿ ಬಂಜಾರರ ಆಕ್ರೋಶ

March 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.