• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಕೆ.ವಿ. ರಾಜು ನಿಧನ

Preetham Kumar P by Preetham Kumar P
in ರಾಜ್ಯ
ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಕೆ.ವಿ. ರಾಜು ನಿಧನ
0
SHARES
1
VIEWS
Share on FacebookShare on Twitter

ಬೆಂಗಳೂರು ಡಿ 24 : ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಕೆ.ವಿ.ರಾಜು (67) ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಸ್ವಗೃಹದಲ್ಲೇ ಕೊನೆಯುಸಿರೆಳೆದಿದ್ದಾರೆ.

80-90ರ ದಶಕದಲ್ಲಿ ಹಲವು ಹಿಟ್ ಸಿನಿಮಾಗಳನ್ನು ನೀಡಿದ್ದ ಕೆ.ವಿ.ರಾಜು ಇಂದು ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ. ಬೆಂಗಳೂರಿನ ರಾಜಾಜಿನಗರದ ನಿವಾಸದಲ್ಲಿ ಕೆ.ವಿ.ರಾಜು ಕೊನೆಯುಸಿರೆಳೆದಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ಓರ್ವ ಪುತ್ರ ಹಾಗೂ ಪುತ್ರಿಯನ್ನ ಕೆ.ವಿ.ರಾಜು ಅಗಲಿದ್ದಾರೆ.

ಕೆ.ವಿ ರಾಜು ಅವರು ಚಿತ್ರರಂಗದಲ್ಲಿ ನಿರ್ದೇಶಕ, ಬರಹಗಾರ ಮತ್ತು ಚಿತ್ರಕಥೆಗಾರರಾಗಿ ಗುರುತಿಸಿಕೊಂಡಿದ್ದರು. ಖ್ಯಾತ ನಿರ್ದೇಶಕ ಕೆವಿ ಜಯರಾಮ್ ಅವರ ಸಹೋದರರಾಗಿದ್ದ ಕೆವಿ ರಾಜು, 1982 ರಲ್ಲಿ ‘ಬಾಡದ ಹೂ’ ಚಿತ್ರದಲ್ಲಿ ತಮ್ಮ ಸಹೋದರನಿಗೆ ಸಹಾಯಕ ನಿರ್ದೇಶಕರಾಗುವ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ್ದರು. 1984 ರ ‘ಒಲವೇ ಬದುಕು’ ಮೂಲಕ ಅವರು ಬರಹಗಾರ ಹಾಗೂ ನಿರ್ದೇಶಕನಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡರು. ಕೆಲವೇ ವರ್ಷಗಳಲ್ಲಿ ಚಿತ್ರರಂಗದ ಹಿಟ್ ನಿರ್ದೇಶಕರಾಗಿ ಅವರು ಜನಮೆಚ್ಚುಗೆ ಪಡೆದರು. ಸಂಗ್ರಾಮ (1987), ಬಂಧ ಮುಕ್ತ (1987), ಯುದ್ಧಕಾಂಡ (1989), ಬೆಳ್ಳಿ ಮೋಡಗಳು, ಬೆಳ್ಳಿ ಕಾಲುಂಗುರ, ಮುಂತಾದ ಚಿತ್ರಗಳ ಮೂಲಕ ಅವರು ಬ್ಲಾಕ್ ಬಸ್ಟರ್ ನಿರ್ದೇಶಕ ಎಂದು ಗುರುತಿಸಿಕೊಂಡಿದ್ದರು.

ಕೆ.ವಿ. ರಾಜು ನಿರ್ದೇಶಿಸಿದ ಚಿತ್ರಗಳು :

 ‘ಹುಲಿಯಾ’, ‘ಬೆಳ್ಳಿ ಕಾಲುಂಗುರ’, ‘ನವಭಾರತ’, ‘ಇಂದ್ರಜಿತ್’ ‘ಪೋಲಿಸ್ ಲಾಕಪ್’, ‘ಬೊಂಬಾಟ್ ಹುಡುಗ’, ‘ಅಭಿಜಿತ್’, ‘ಬೆಳ್ಳಿ ಮೋಡಗಳು’, ‘ಯುದ್ಧಕಾಂಡ’, ‘ರಾಷ್ಟ್ರಗೀತೆ’, ‘ಸುಂದರಕಾಂಡ’ ಸೇರಿದಂತೆ ಹಲವು ಕನ್ನಡ ಸಿನಿಮಾಗಳನ್ನು ಕೆ.ವಿ.ರಾಜು ನಿರ್ದೇಶನ ಮಾಡಿದ್ದರು. ಕನ್ನಡ ಮಾತ್ರವಲ್ಲದೆ ಬಾಲಿವುಡ್‌ನಲ್ಲಿಯೂ ಕೆ.ವಿ.ರಾಜು ತಮ್ಮ ಛಾಪನ್ನು ಮೂಡಿಸಿದ್ದರು. ಹಿಂದಿಯಲ್ಲಿ ಬಿಗ್ ಬಿ ಅಮಿತಾಬ್ ಬಚ್ಚನ್ ಅವರ ‘ಇಂದ್ರಜಿತ್’ ಚಿತ್ರಕ್ಕೆ ಕೆ.ವಿ.ರಾಜು ಆಕ್ಷನ್ ಕಟ್ ಹೇಳಿದ್ದರು.

ಅಂತಿಮ ದರ್ಶನ : ರಾಜಾಜಿನಗರದ ನಿವಾಸದಲ್ಲೇ ಕೆ.ವಿ.ರಾಜು ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಹರಿಶ್ಚಂದ್ರ ಘಾಟ್‌ನಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Related News

ಶಾಲಾ-ಕಾಲೇಜು ಮತ್ತು ವಿ.ವಿಗಳಲ್ಲಿ ಸಂವಿಧಾನ ಪ್ರಸ್ತಾವನೆಯ ಪಠಣ ಕಡ್ಡಾಯ
ಪ್ರಮುಖ ಸುದ್ದಿ

ಶಾಲಾ-ಕಾಲೇಜು ಮತ್ತು ವಿ.ವಿಗಳಲ್ಲಿ ಸಂವಿಧಾನ ಪ್ರಸ್ತಾವನೆಯ ಪಠಣ ಕಡ್ಡಾಯ

June 2, 2023
ಆಗಸ್ಟ್ 15ಕ್ಕೆ ಗೃಹಲಕ್ಷ್ಮೀ ಯೋಜನೆ ಜಾರಿ ; ಯಾರು ಅರ್ಜಿ ಸಲ್ಲಿಸಬೇಕು..? ಅರ್ಹತೆಗಳೇನು..?
ಪ್ರಮುಖ ಸುದ್ದಿ

ಆಗಸ್ಟ್ 15ಕ್ಕೆ ಗೃಹಲಕ್ಷ್ಮೀ ಯೋಜನೆ ಜಾರಿ ; ಯಾರು ಅರ್ಜಿ ಸಲ್ಲಿಸಬೇಕು..? ಅರ್ಹತೆಗಳೇನು..?

June 2, 2023
ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ : 5 ಗ್ಯಾರಂಟಿ ಜಾರಿ, ಕಂಡೀಷನ್ಗಳೇನು?
ಪ್ರಮುಖ ಸುದ್ದಿ

ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ : 5 ಗ್ಯಾರಂಟಿ ಜಾರಿ, ಕಂಡೀಷನ್ಗಳೇನು?

June 2, 2023
ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ನಡೆಯಲಿದೆ ವಾರ್ಷಿಕ ಮಾವು ಮೇಳ
ಪ್ರಮುಖ ಸುದ್ದಿ

ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ನಡೆಯಲಿದೆ ವಾರ್ಷಿಕ ಮಾವು ಮೇಳ

June 1, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.